Homeಕರ್ನಾಟಕFACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು 'ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ...

FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

- Advertisement -
- Advertisement -

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು.

ವಿಭಿನ್ನ ತಲೆಬರಹದಡಿ ಸುದ್ದಿ ಬಿತ್ತರಿಸಿದ್ದ ಮಾದ್ಯಮಗಳು:

ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ವಿಸ್ತಾರ ನ್ಯೂಸ್, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಕನ್ನಡ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಸುದ್ದಿ ಹರಡಿದೆ.

‘ವಿಧಾನ ಸೌಧದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನಿಂದ ಪಾಕ್‌ ಪರ ಘೋಷಣೆ’, ‘ವಿಧಾನಸೌಧದಲ್ಲಿ ಗೆಲುವಿನ ಸಂಭ್ರಮದಲ್ಲಿ ಮೊಳಗಿದ ಪಾಕಿಸ್ತಾನ ಝಿಂದಾಬಾದ್‌’ ಎಂದು ಭಿನ್ನ ತಲೆಬರಹದ ಜೊತೆ ಟಿವಿ9 ವರದಿ ಮಾಡಿದೆ.

‘ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ’ ಎಂದು ಇನ್ನೊಂದು ಕನ್ನಡ ಮಾದ್ಯಮ ವಿಸ್ತಾರ ನ್ಯೂಸ್ ವರದಿ ಮಾಡಿದೆ.
ಇನ್ನೊಂದು ಮುಖ್ಯವಾಹಿನಿ ಮಾಧ್ಯಮ ‘ನ್ಯೂಸ್‌ 18 ಕನ್ನಡ’ ‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು’ ಎಂದು ಸುದ್ದಿಯನ್ನು ಬಿತ್ತರಿಸಿದೆ.

‘ರಿಪಬ್ಲಿಕ್ ಕನ್ನಡ’ ಸುದ್ದಿ ಮಾದ್ಯಮ ವಿಧಾನ ಸೌಧದಲ್ಲಿ ಪಾಕ್‌ ಪರ ಘೋಷಣೆ ಎಂದು ತಲೆಬರಹದಡಿ ಸುದ್ದಿಯನ್ನು ಬಿತ್ತರಿಸಿದೆ.

‘ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ಬೆಂಬಲಿಗರು’ ಎಂದು ವಿಜಯವಾಣಿ ಸುದ್ದಿಯನ್ನು ಪ್ರಕಟಿಸಿದೆ.

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ‘ಸುವರ್ಣ ನ್ಯೂಸ್’ ವರದಿ ಮಾಡಿದೆ.

https://twitter.com/AsianetNewsSN/status/1762480895762526555

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ.. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ ಬೆಂಬಲಿಗರು ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

 

ಬಿಜೆಪಿಯಿಂದ ಪ್ರತಿಭಟನೆ

ವಿಧಾನ ಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್‌’  ಘೋಷಣೆ ಕೂಗಿದ್ದಾರೆಂದು  ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.

ಇದಲ್ಲದೆ ಬಿಜೆಪಿ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ಹೇಳಿಕೆಯನ್ನು ಕೊಟ್ಟಿದ್ದಾರೆ. ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ ಇದ್ದರೆ ಅಧಿಕಾರದಲ್ಲಿ ಇರಬಾರದು, ಸಿಎಂ ರಾಜೀನಾಮೆ ನೀಡಬೇಕು, ರಾಜ್ಯಪಾಲರು ಸರಕಾರವನ್ನು ವಜಾ ಮಾಡಬೇಕು ಎಂದೆಲ್ಲಾ ಆಗ್ರಹಿಸಿದ್ದರು. ಬಿಜೆಪಿ ಶಾಸಕ ಹರೀಶ್‌ ಪೂಂಜಾ ಮಾತನಾಡಿ, ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುತ್ತೇವೆ, ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದರು. ಘಟನೆಯ ಪೂರ್ಣ ಚಿತ್ರಣ ನಾಸೀರ್‌ ಹಸೇನ್‌ಗೆ ಗೊತ್ತಿತ್ತು ಎಂದು ಇದೊಂದು ಪೂರ್ವ ನಿಯೋಜಿತ ಎಂಬಂತೆ ಹೇಳಿಕೆ ಕೊಟ್ಟಿದ್ದರು.

ಈ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಕಾರ್ಯದರ್ಶಿ, ಕಾಂಗ್ರೆಸ್ ನ ನಸೀರ್ ಹುಸೇನ್ ಗೆದ್ದ ನಂತರ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಿದೆ ಎಂದು ಆಪಾದಿಸಿದ್ದರು.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಫ್ಯಾಕ್ಟ್‌ಚೆಕ್‌:

ಈ ಬಗ್ಗೆ ನಾನು ಗೌರಿ.ಕಾಂ ವಾಸ್ತವಾಂಶಗಳನ್ನು ಪರಿಶೀಲನೆ ನಡೆಸಿದ್ದು, ಸುದ್ದಿ ಮಾದ್ಯಮಗಳು ವರದಿ ಮಾಡಿದ ವಿಡಿಯೋ ಹಾಗೂ ಇತರ ಹಲವು ವಿಡಿಯೋಗಳನ್ನು ಅವಲೋಕಿಸಿದೆ. ಈ ವೇಳೆ ವಾಸ್ತವವೇ ಬೇರೆ, ಕನ್ನಡ ಸುದ್ದಿ ಮಾದ್ಯಮಗಳು ಹರಡಿರುವುದು ಸುಳ್ಳು ಸುದ್ದಿ ಎನ್ನುವುದು ಬಯಲಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ಅವರ ಬೆಂಬಲಿಗರು ಅವರ ಪಕ್ಕದಲ್ಲೇ ನಿಂತುಕೊಂಡು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಸ್ಪಷ್ಟವಾಗಿ ವಿಡಿಯೋಗಳಲ್ಲಿ ಸೆರೆಯಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ನೂರಾರು ಬೆಂಬಲಿಗರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಸೇರಿದ್ದರು. ಅವರು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ಬಯಲಾಗಿದೆ.

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್‌ ಝುಬೈರ್‌ ಅವರೂ, ಈ ವೀಡಿಯೊ ವನ್ನು ಸ್ಲೋ ಮೋಷನ್‌ನಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸ್ಪಷ್ಟವಾಗಿ ನಾಸಿರ್‌ ಸಾಬ್‌ ಝಿಂದಾಬಾದ್‌ ಎಂದು ಕೂಗುವುದು ಕೇಳಿಸುತ್ತಿದೆ.
https://twitter.com/zoo_bear/status/1762496344563040310
ವೈರಲ್ ಆಗುತ್ತಿರುವ ವಿಡಿಯೋದಲ್ಲಿ, “ನಾಸೀರ್ ಸಾಬ್ ಜಿಂದಾಬಾದ್‌” ಎಂದು ಕೂಗುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದ್ದರೂ, ಮಾಧ್ಯಮಗಳು “ಪಾಕಿಸ್ತಾನ ಜಿಂದಾಬಾದ್‌” ಎಂದು ಕೂಗುತ್ತಿದ್ದಾರೆ ಎಂದು ಸುದ್ದಿ ಬಿತ್ತರಿಸಿ ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡಿದೆ ಎನ್ನುವುದು ಪರಿಶೀಲನೆಯ ವೇಳೆ ಕಂಡು ಬಂದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...