Homeಕರ್ನಾಟಕFACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು 'ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ...

FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

- Advertisement -
- Advertisement -

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು.

ವಿಭಿನ್ನ ತಲೆಬರಹದಡಿ ಸುದ್ದಿ ಬಿತ್ತರಿಸಿದ್ದ ಮಾದ್ಯಮಗಳು:

ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ವಿಸ್ತಾರ ನ್ಯೂಸ್, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಕನ್ನಡ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಸುದ್ದಿ ಹರಡಿದೆ.

‘ವಿಧಾನ ಸೌಧದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನಿಂದ ಪಾಕ್‌ ಪರ ಘೋಷಣೆ’, ‘ವಿಧಾನಸೌಧದಲ್ಲಿ ಗೆಲುವಿನ ಸಂಭ್ರಮದಲ್ಲಿ ಮೊಳಗಿದ ಪಾಕಿಸ್ತಾನ ಝಿಂದಾಬಾದ್‌’ ಎಂದು ಭಿನ್ನ ತಲೆಬರಹದ ಜೊತೆ ಟಿವಿ9 ವರದಿ ಮಾಡಿದೆ.

‘ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ’ ಎಂದು ಇನ್ನೊಂದು ಕನ್ನಡ ಮಾದ್ಯಮ ವಿಸ್ತಾರ ನ್ಯೂಸ್ ವರದಿ ಮಾಡಿದೆ.
ಇನ್ನೊಂದು ಮುಖ್ಯವಾಹಿನಿ ಮಾಧ್ಯಮ ‘ನ್ಯೂಸ್‌ 18 ಕನ್ನಡ’ ‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು’ ಎಂದು ಸುದ್ದಿಯನ್ನು ಬಿತ್ತರಿಸಿದೆ.

‘ರಿಪಬ್ಲಿಕ್ ಕನ್ನಡ’ ಸುದ್ದಿ ಮಾದ್ಯಮ ವಿಧಾನ ಸೌಧದಲ್ಲಿ ಪಾಕ್‌ ಪರ ಘೋಷಣೆ ಎಂದು ತಲೆಬರಹದಡಿ ಸುದ್ದಿಯನ್ನು ಬಿತ್ತರಿಸಿದೆ.

‘ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ಬೆಂಬಲಿಗರು’ ಎಂದು ವಿಜಯವಾಣಿ ಸುದ್ದಿಯನ್ನು ಪ್ರಕಟಿಸಿದೆ.

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ‘ಸುವರ್ಣ ನ್ಯೂಸ್’ ವರದಿ ಮಾಡಿದೆ.

https://twitter.com/AsianetNewsSN/status/1762480895762526555

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ.. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ ಬೆಂಬಲಿಗರು ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

 

ಬಿಜೆಪಿಯಿಂದ ಪ್ರತಿಭಟನೆ

ವಿಧಾನ ಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್‌’  ಘೋಷಣೆ ಕೂಗಿದ್ದಾರೆಂದು  ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.

ಇದಲ್ಲದೆ ಬಿಜೆಪಿ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ಹೇಳಿಕೆಯನ್ನು ಕೊಟ್ಟಿದ್ದಾರೆ. ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ ಇದ್ದರೆ ಅಧಿಕಾರದಲ್ಲಿ ಇರಬಾರದು, ಸಿಎಂ ರಾಜೀನಾಮೆ ನೀಡಬೇಕು, ರಾಜ್ಯಪಾಲರು ಸರಕಾರವನ್ನು ವಜಾ ಮಾಡಬೇಕು ಎಂದೆಲ್ಲಾ ಆಗ್ರಹಿಸಿದ್ದರು. ಬಿಜೆಪಿ ಶಾಸಕ ಹರೀಶ್‌ ಪೂಂಜಾ ಮಾತನಾಡಿ, ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುತ್ತೇವೆ, ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದರು. ಘಟನೆಯ ಪೂರ್ಣ ಚಿತ್ರಣ ನಾಸೀರ್‌ ಹಸೇನ್‌ಗೆ ಗೊತ್ತಿತ್ತು ಎಂದು ಇದೊಂದು ಪೂರ್ವ ನಿಯೋಜಿತ ಎಂಬಂತೆ ಹೇಳಿಕೆ ಕೊಟ್ಟಿದ್ದರು.

ಈ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಕಾರ್ಯದರ್ಶಿ, ಕಾಂಗ್ರೆಸ್ ನ ನಸೀರ್ ಹುಸೇನ್ ಗೆದ್ದ ನಂತರ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಿದೆ ಎಂದು ಆಪಾದಿಸಿದ್ದರು.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಫ್ಯಾಕ್ಟ್‌ಚೆಕ್‌:

ಈ ಬಗ್ಗೆ ನಾನು ಗೌರಿ.ಕಾಂ ವಾಸ್ತವಾಂಶಗಳನ್ನು ಪರಿಶೀಲನೆ ನಡೆಸಿದ್ದು, ಸುದ್ದಿ ಮಾದ್ಯಮಗಳು ವರದಿ ಮಾಡಿದ ವಿಡಿಯೋ ಹಾಗೂ ಇತರ ಹಲವು ವಿಡಿಯೋಗಳನ್ನು ಅವಲೋಕಿಸಿದೆ. ಈ ವೇಳೆ ವಾಸ್ತವವೇ ಬೇರೆ, ಕನ್ನಡ ಸುದ್ದಿ ಮಾದ್ಯಮಗಳು ಹರಡಿರುವುದು ಸುಳ್ಳು ಸುದ್ದಿ ಎನ್ನುವುದು ಬಯಲಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ಅವರ ಬೆಂಬಲಿಗರು ಅವರ ಪಕ್ಕದಲ್ಲೇ ನಿಂತುಕೊಂಡು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಸ್ಪಷ್ಟವಾಗಿ ವಿಡಿಯೋಗಳಲ್ಲಿ ಸೆರೆಯಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ನೂರಾರು ಬೆಂಬಲಿಗರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಸೇರಿದ್ದರು. ಅವರು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ಬಯಲಾಗಿದೆ.

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್‌ ಝುಬೈರ್‌ ಅವರೂ, ಈ ವೀಡಿಯೊ ವನ್ನು ಸ್ಲೋ ಮೋಷನ್‌ನಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸ್ಪಷ್ಟವಾಗಿ ನಾಸಿರ್‌ ಸಾಬ್‌ ಝಿಂದಾಬಾದ್‌ ಎಂದು ಕೂಗುವುದು ಕೇಳಿಸುತ್ತಿದೆ.
https://twitter.com/zoo_bear/status/1762496344563040310
ವೈರಲ್ ಆಗುತ್ತಿರುವ ವಿಡಿಯೋದಲ್ಲಿ, “ನಾಸೀರ್ ಸಾಬ್ ಜಿಂದಾಬಾದ್‌” ಎಂದು ಕೂಗುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದ್ದರೂ, ಮಾಧ್ಯಮಗಳು “ಪಾಕಿಸ್ತಾನ ಜಿಂದಾಬಾದ್‌” ಎಂದು ಕೂಗುತ್ತಿದ್ದಾರೆ ಎಂದು ಸುದ್ದಿ ಬಿತ್ತರಿಸಿ ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡಿದೆ ಎನ್ನುವುದು ಪರಿಶೀಲನೆಯ ವೇಳೆ ಕಂಡು ಬಂದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...