Homeಮುಖಪುಟವಿರೋಧಾಭಾಸಗಳ ಜಗತ್ತಿನಲ್ಲಿ ಧಿಕ್ಕರಿಸಬೇಕಿದೆ ಶ್ರೇಷ್ಠತೆಯ ವ್ಯಸನ : ನಟರಾಜು ವಿ.

ವಿರೋಧಾಭಾಸಗಳ ಜಗತ್ತಿನಲ್ಲಿ ಧಿಕ್ಕರಿಸಬೇಕಿದೆ ಶ್ರೇಷ್ಠತೆಯ ವ್ಯಸನ : ನಟರಾಜು ವಿ.

- Advertisement -
- Advertisement -

ಕನ್ನಡದ ಪ್ರತಿಭಾನ್ವಿತ ಪತ್ರಕರ್ತರು -ಅಂಕಣಕಾರರಲ್ಲೊಬ್ಬರಾದ ನಟರಾಜು.ವಿ ಅವರು ತಣ್ಣನೆಯ ಶೈಲಿಯಲ್ಲೇ ಕಟುಸತ್ಯಗಳನ್ನು ಬಿಡಿಸಿಡುವ ಬರಹಗಾರರು. ಸಾಮಾಜಿಕ ರಾಜಕೀಯ ವಿಶ್ಲೇಷಣೆ, ಸಮಕಾಲೀನ ವಿದ್ಯಮಾನಗಳ ಕುರಿತ ಅವರ ಅಂಕಣ ‘ಪಠ್ಯ – ಪ್ರಮಾಣ’ ಕನ್ನಡಪ್ರಭದಲ್ಲಿ ಪ್ರಕಟವಾಗಿತ್ತು. ಟೈಮ್ಸ್ ಆಫ್ ಇಂಡಿಯಾ, ವಿಜಯನೆಕ್ಸ್ಟ್ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಳೆದ 15 ವರ್ಷಗಳಿಂದ ಕೆಲಸ ಮಾಡಿದ ಅನುಭವವಿರುವ ಇವರು ‘ದಿ ಸ್ಟೇಟ್’ ನಲ್ಲಿ ಸೀನಿಯರ್ ಅಸಿಸ್ಟೆಂಟ್ ಎಡಿಟರ್ ಆಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಟೆಕ್ ಕನ್ನಡ ವೆಬ್‍ಜಾಲದ ‘ತಂತ್ರ ತಾಂಡವ’ ಅಂಕಣದ ಜೊತೆಗೆ, ನಟರಾಜುರವರು ನ್ಯಾಯಪಥ ಪತ್ರಿಕೆಯಲ್ಲಿ ಪ್ರಮುಖ ವಿಶ್ಲೇಷಕ ಬರಹಗಳನ್ನು ಬರೆಯುತ್ತಿದ್ದಾರೆ.

ಈ ವಿಶೇಷ ಸಂಚಿಕೆಯನ್ನು ಕೈಯಲ್ಲಿ ಹಿಡಿದು ಕಣ್ಣಾಡಿಸುತ್ತಿರುವ ಈ ಹೊತ್ತಿನಲ್ಲಿ ಬಹುಶಃ ನಿಮಗೆ ಮೇಲುನೋಟಕ್ಕೇ ಸಮಕಾಲೀನ ಭಾರತೀಯ ಸಮಾಜ ಎದುರಿಸುತ್ತಿರುವ ಹತ್ತು ಹಲವು ತಲ್ಲಣಗಳು, ಪ್ರಜಾಪ್ರಭುತ್ವ, ಸಂವಿಧಾನಗಳಿಗೆ ಎದುರಾಗಿರುವ ಗಂಭೀರ ಸವಾಲುಗಳ ಕುರಿತಾದ ತೀವ್ರ ಕಾಳಜಿ ಈ ಬರಹಗಳಲ್ಲಿ ಕಾಣಬಹುದು. ಇದಾಗಲೇ ಜಾತಿವ್ಯವಸ್ಥೆಯಲ್ಲಿ ಸಿಲುಕಿ ಶತಶತಮಾನಗಳಿಂದ ಹೈರಾಣಾಗಿಹೋಗಿರುವ ಭಾರತೀಯ ಸಮಾಜದ ಸೂಕ್ಷ್ಮ ನೇಯ್ಗೆಗಳು ಇಂದು ಮೂಲಭೂತವಾದದ ತೀವ್ರ ಹೆಚ್ಚಳದೊಂದಿಗೆ ಮತ್ತೂ ಗಂಭೀರವಾಗಿ ಘಾಸಿಗೊಂಡಿವೆ. ನಮ್ಮ ಸುತ್ತಣ ಸಮಾಜದ ಆಲೋಚನೆಗಳನ್ನು ಮೂಲಭೂತವಾದವು ವ್ಯಾಪಿಸಿಕೊಳ್ಳುತ್ತಿರುವ ಪರಿ, ಪಡೆಯುತ್ತಿರುವ ರೂಪ, ಭಾಷೆ ಎಲ್ಲ ಪ್ರಜ್ಞಾವಂತರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಬಹುತೇಕ ಲೇಖನಗಳು ವಿವಿಧ ಆಯಾಮಗಳಿಂದ ಈ ಸವಾಲುಗಳನ್ನು ಸಂಕೀರ್ಣವಾಗಿಯೂ, ಚಿಕಿತ್ಸಕವಾಗಿಯೂ ಎದುರುಗೊಂಡಿವೆ. ಪ್ರಸಕ್ತ ಲೇಖನ ಇದರಾಚೆಗಿನ ಕೆಲ ಸಂದಿಗ್ಧಗಳು, ಸವಾಲುಗಳ ಬಗ್ಗೆ ಗಮನ ಹರಿಸಲಿದೆ. ಆದರ್ಶ, ವಾಸ್ತವ, ಬೂಟಾಟಿಕೆ, ನೈತಿಕ ವಿರೋಧಾಭಾಸಗಳ ಗೋಜಲುಗಳ ಸುತ್ತಲಿನ ಚರ್ಚೆ ಈ ಲೇಖನದ ತಿರುಳು.

ಇಂದು ಸಾಮಾಜಿಕ ಕಾರ್ಯಕರ್ತರು, ಸಮಾಜಮುಖಿ ಚಿಂತಕರು, ಪ್ರಜ್ಞಾವಂತರು, ಪತ್ರಕರ್ತರೆಲ್ಲರನ್ನೂ ಒಂದಿಲ್ಲೊಂದು ಬಗೆಯಲ್ಲಿ ನೈತಿಕ ತಳಮಳಗಳು ಬಾಧಿಸುತ್ತಿವೆ. ಮೌಲ್ಯಗಳ ಹೆಸರಿನಲ್ಲಿ ತಾವು ಕಟ್ಟಿಕೊಂಡಿದ್ದ ಕೋಟೆ ಎಲ್ಲ ದಿಕ್ಕಿನಲ್ಲಿಯೂ ಕುಸಿದು ಬೀಳುತ್ತಿರುವುದು ಕಣ್ಣುಮುಚ್ಚಿದರೂ ಗೋಚರಿಸುತ್ತಿದೆ. ಈ ಸತ್ಯಕ್ಕೆ ಮುಖಾಮುಖಿಯಾಗುವುದೋ ಅಥವಾ ಕೋಟೆ ಕುಸಿದರೇನು ನಮ್ಮ ಸುತ್ತ ನಾವೇ ಒಂದು ಗೂಡು ಕಟ್ಟಿಕೊಂಡು ಚಿಟ್ಟೆಯಾಗಿ ಪರಿವರ್ತನೆ ಹೊಂದೋಣ, ಯಾರ ಜಪ್ತಿಗೂ ಸಿಗದೆ ಹಾರಿಬಿಡೋಣ ಎಂದು ರಮ್ಯವಾಗಿ ಉತ್ತರಿಸುವುದೋ ತಿಳಿಯುತ್ತಿಲ್ಲ. ನಾವು ನಿಂತಿರುವ ನೆಲದ ಮೇಲೆಯೇ ಸಂಶಯವೇಳುತ್ತಿರುವ ಈ ಹೊತ್ತಿನಲ್ಲಿ ತಲೆಯನ್ನು ನೆಲದಲ್ಲಿ ಹುದುಗಿಸಿಕೊಂಡು ಎಲ್ಲದಕ್ಕೂ ಕಣ್ಣುಮುಚ್ಚಿಕೊಂಡು ಬಿಡುವುದು ಸಂವೇದನಾಶೀಲರ ಆಯ್ಕೆಯೂ ಅಲ್ಲ.

ಕಪ್ಪುಬಿಳುಪು ಇವೆರಡನ್ನು ಮಾತ್ರವೇ ಗುರುತಿಸಲು, ಬೇರ್ಪಡಿಸಲಷ್ಟೇ ಕಲಿತಿರುವವರಿಗೆ ಜಗವೆಲ್ಲಾ ಕಂದು ಬಣ್ಣದಲ್ಲೇ ಇರುವಾಗ ಅದನ್ನು ಹೇಗೆ ವರ್ಗೀಕರಿಸುವುದು ತಿಳಿಯದಾಗಿದೆ. ಮಾಧ್ಯಮವೂ ಸೇರಿದಂತೆ ಇಂದು ಎಲ್ಲ ಉದ್ಯಮಗಳೂ ಬಂಡವಾಳಶಾಹಿಗಳ ಹಿಡಿತದಲ್ಲಿವೆ. ಒಂದಿಲ್ಲೊಂದು ರೀತಿಯಲ್ಲಿ ಸರ್ಕಾರ, ಅಧಿಕಾರಸ್ಥರ ಸಹಾಯ, ಸಹಕಾರಗಳನ್ನು ಅವಲಂಬಿಸಿವೆ. ಈ ಅವಲಂಬನೆ ಕೆಲವೆಡೆ ಅಲ್ಪವೇ ಇರಬಹುದು ಮತ್ತೆ ಹಲವೆಡೆ ಅವಕಾಶವಾದಿತನ, ವಶೀಲಿಬಾಜಿಗಾಗಿಯೇ ಈ ಉದ್ಯಮಗಳು ಆರಂಭವಾಗಿಯೂ ಇರಬಹುದು.

ಮೌಲ್ಯಗಳೆನ್ನುವುದು ಇಂದು ತುಲನಾತ್ಮಕವಾಗಿ ನೋಡಬಹುದಾದ ವಿಷಯವಾಗಿದೆಯೇ ಹೊರತು ಪಾವಿತ್ರ್ಯದ ವಿಷಯವಾಗಿ ಉಳಿದಿಲ್ಲ. ಅವರಿಗಿಂತ ಇವರು ಉತ್ತಮ, ಆ ಸಂಸ್ಥೆಗಿಂತ ಈ ಸಂಸ್ಥೆ ಉತ್ತಮ ಎನ್ನಬಹುದೇ ಹೊರತು ಪರಮಪವಿತ್ರವೂ, ಅಗ್ನಿದಿವ್ಯವೂ ಆದ ಸಾಂಸ್ಥಿಕ ರಚನೆಗಳು ಸಾರ್ವಜನಿಕವಾಗಿ ಕಾಣೆಯಾಗಿವೆ. ಇದಕ್ಕೆ ಸರ್ಕಾರಿ, ಖಾಸಗಿ ಎನ್ನುವ ಭೇದಭಾವವಿಲ್ಲ. ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ತಾನು ದುಡಿದು ತಿಂದಿರುವುದಾಗಿ ಯಾರೇ ಹೇಳಿದರೂ ಆ ದುಡಿಮೆಯನ್ನು ಬಳಸಿಕೊಂಡ ಸಂಸ್ಥೆಗಳು ಸಂಬಳಕ್ಕಾಗಿ ತೆತ್ತ ಹಣದ ಹರಿವು ಎಲ್ಲಿಯದು, ಆ ಸಂಸ್ಥೆಗಳ ವ್ಯಾವಹಾರಿಕ ಚೌಕಟ್ಟಿನ ಸ್ವರೂಪವೇನು ಎನ್ನುವುದನ್ನು ಅರಿತರೆ ಭ್ರಷ್ಟತೆ ಎನ್ನುವುದು ನಮ್ಮೆಲ್ಲರನ್ನೂ ಒಂದಿಲ್ಲೊಂದು ಹಂತದಲ್ಲಿ ತಾಕಿಯೂ ಅರಿವಿಗೇ ಬಾರದೆ ಉಳಿದಿರುವುದು ಗಮನಕ್ಕೆ ಬರುತ್ತದೆ.

ಮಾರುಕಟ್ಟೆ ಎನ್ನುವುದು ಸರ್ವವ್ಯಾಪಿಯಾಗಿರುವ ಈ ಯುಗದಲ್ಲಿ ಅರ್ಥವ್ಯವಸ್ಥೆಯ ಸ್ವರೂಪ ಸಂಕೀರ್ಣವೂ, ಪರಸ್ಪರ ವ್ಯಾಪಕವಾಗಿ ಅವಲಂಬಿತವೂ ಆಗಿರುವಂಥದ್ದು. ಮಾರುಕಟ್ಟೆ ಆಧರಿತ ಜೀವನ ವಿಧಾನದ ಈ ದಿನಗಳಲ್ಲಿ ಹಣವೆನ್ನುವುದು ಎಲ್ಲರ ಬದುಕಿನ ಕೇಂದ್ರದಲ್ಲಿದೆ. ಇದಕ್ಕೆ ನಗರ ಹಾಗೂ ಗ್ರಾಮೀಣ ಎನ್ನುವ ವ್ಯತ್ಯಾಸಗಳಿಲ್ಲ, ಪ್ರಮಾಣದಲ್ಲಿ ಕೊಂಚಮಟ್ಟಿಗಿನ ಅಂತರವಿರಬಹುದು ಅಷ್ಟೇ. ಹೀಗೆ ಹಣದ ಹರಿವು ಮತ್ತು ಅದರ ಅವಲಂಬನೆಗಳು ಹೆಚ್ಚಾದಂತೆಲ್ಲಾ ವ್ಯವಸ್ಥೆಯಲ್ಲಿ ಕಪ್ಪುಬಿಳುಪು ಎನ್ನುವ ವರ್ಗೀಕರಣವೇ ಕ್ರಮೇಣ ಅಪ್ರಸ್ತುತವೂ, ಗೊಂದಲಮಯವೂ ಆಗತೊಡಗುತ್ತದೆ. ಹಣದ ಮೌಲ್ಯವು ಪೂರ್ವನಿರ್ಧರಿತವಾಗಿದ್ದು ಅದು ತನ್ನ ಮೌಲ್ಯವನ್ನು ತನ್ನನ್ನು ಗಳಿಸಿದ, ದುಡಿದ ಮಾರ್ಗದಿಂದಾಗಿ ಪಡೆಯುವುದಿಲ್ಲ. ಶ್ರಮಿಕರು, ಜ್ಞಾನಿಗಳು, ಪ್ರತಿಭಾವಂತರು, ವಯೋವೃದ್ಧರು, ವಿಶೇಷಚೇತನರು ಕಷ್ಟಪಟ್ಟು ದುಡಿದ ಹಣಕ್ಕೂ, ಭ್ರಷ್ಟವೂ, ಅನೈತಿಕವೂ, ವಾಮಮಾರ್ಗದಿಂದಲೂ ಗಳಿಸಿದ ಹಣಕ್ಕೂ ಮೌಲ್ಯದಲ್ಲಿ ಯಾವುದೇ ವ್ಯತ್ಯಾಸಗಳಿರುವುದಿಲ್ಲ. ಇದು ಆಧುನಿಕ ಅರ್ಥವ್ಯವಸ್ಥೆಯಲ್ಲಿನ ದೊಡ್ಡ ನ್ಯೂನತೆ. ಹಣವೆನ್ನುವುದು ಗುಣಗ್ರಾಹಿಯಾಗಿಲ್ಲ. ಜಾತಿ, ಧರ್ಮ, ಜನಾಂಗ, ಬಣ್ಣಗಳ ಆಧಾರದಲ್ಲಿ ಶ್ರೇಷ್ಠತೆಯ ವ್ಯಸನ ಮೆರೆಯುವ ನಮ್ಮ ನಾಗರಿಕತೆಗಳು, ಇದಕ್ಕೆ ಬದಲಾಗಿ ಮೌಲ್ಯ, ನೈತಿಕತೆಯ ಹೆಸರಿನಲ್ಲಿ ಶ್ರೇಷ್ಠತೆಯ ವ್ಯಸನ ಬೆಳೆಸಿಕೊಂಡಿದ್ದರೆ ಹಣಕ್ಕೆ ಗುಣಗ್ರಾಹಿಯಾಗುವ ಅಗತ್ಯ ಖಂಡಿತ ಬರುತ್ತಿತ್ತು. ಆದರೆ, ವಾಸ್ತವ ಹಾಗಿಲ್ಲ. ಹಣ ಇಂದು ನಮ್ಮೆಲ್ಲರ ಬದುಕಿನ ಕೇಂದ್ರದಲ್ಲಿದೆ, ನಮ್ಮೆಲ್ಲರ ಜೀವನಾವಶ್ಯಕತೆಗಳನ್ನು, ಬದುಕು, ಭವಿಷ್ಯವನ್ನು ನಿರ್ಧರಿಸುವ ಪ್ರಖರ ಮಾಧ್ಯಮವಾಗಿದೆ. ಹೀಗೆ ನಮ್ಮೆಲ್ಲರ ಬದುಕನ್ನು ನಿಯಂತ್ರಿಸುವ, ನಿರ್ಧರಿಸುವ ಹಣಕ್ಕೆ ನ್ಯಾಯನೀತಿಯ ಪರಿವೆಯೇ ಇಲ್ಲ! ಗುಣಕ್ಕೆ, ಮೌಲ್ಯಗಳಿಗೆ ಕುರುಡಾಗಿರುವ ಇಂತಹ ಹಣವನ್ನು ಕೇಂದ್ರದಲ್ಲಿರಿಸಿಕೊಂಡೇ ನವ ನಾಗರಿಕತೆಗಳು ಅಸ್ತಿತ್ವ ಕಟ್ಟಿಕೊಂಡಿವೆ. ದೇಶ, ಮಾರುಕಟ್ಟೆಗಳು ಉಸಿರಾಡುತ್ತಿವೆ. ಇಂದು ಇಡೀ ಜಾಗತಿಕ ಅರ್ಥವ್ಯವಸ್ಥೆಯವೆನ್ನುವುದು ಹೃದಯಹೀನವೂ, ಅಮಾನವೀಯವೂ ಆಗಿ ಪರಿವರ್ತಿತವಾಗಲು ಈ ಲೋಪವೇ ಕಾರಣ. ಈ ಸಂಕೀರ್ಣತೆಗಳನ್ನು ಅರಿಯದೆ ಭ್ರಷ್ಟಾಚಾರದ ಬಗ್ಗೆ ತೆಳುಗ್ರಹಿಕೆಯಲ್ಲಿ ಮಾತನಾಡುವುದು ಯಾವತ್ತೂ ಅಪಾಯಕಾರಿ.

ಇಷ್ಟೆಲ್ಲಾ ಹೇಳಲು ಕಾರಣ, ಇಂದು ಮಾನವೀಯ, ಜನಪರ, ಜನಮುಖಿ ಚಿಂತನೆಗಳುಳ್ಳವರಲ್ಲಿ ಯಾವ ವಿಚಾರಗಳಲ್ಲಿ ಒಮ್ಮತ ಮೂಡಬೇಕಿತ್ತೋ ಅದು ಸಾಧ್ಯವಾಗದೆ ಹೋಗಿರುವುದರಿಂದಾಗಿ. ಬಹುತೇಕ ಸಂದರ್ಭಗಳಲ್ಲಿ ಹಣದ ವಿಚಾರದಲ್ಲಿ ಕೆಲವೊಂದು ಸೀಮಿತ ಕಲ್ಪನೆಗಳಿಂದ ನಾವು ವ್ಯವಹರಿಸುವುದು ಇದಕ್ಕೆಲ್ಲಾ ಕಾರಣವಾಗುತ್ತದೆ. ಇಂದು ಸಮಾಜದ ಕೇಂದ್ರಕ್ಕೆ ಮತ್ತೆ ಮಾನವೀಯ ಮೌಲ್ಯಗಳನ್ನು ತರಬೇಕೆಂದರೆ ಗುಣಗ್ರಾಹಿಯಾಗಿಲ್ಲದ ಹಣದ ವಿಚಾರವಾಗಿ ಅತಿ ಎನಿಸುವಷ್ಟು ಪ್ರಾಮಾಣಿಕವಾಗಿಯೂ, ಕಟುವಾಗಿಯೂ ವರ್ತಿಸುವಂತೆ ಮಾಡಿರುವ ಸ್ಥಾಪಿತ ಮೌಲ್ಯಗಳ ಬಗ್ಗೆಯೇ ನಾವು ಸಂಶಯವನ್ನಿರಿಸಿಕೊಳ್ಳಬೇಕಿದೆ. ಈ ವಿಚಾರದಲ್ಲಿ ನಮ್ಮ ಚಿಂತನೆಗಳು ಹೆಚ್ಚು ಉದಾರವಾಗಬೇಕಿದೆ. ಉತ್ತಮ ಉದ್ದೇಶಗಳು, ಕೆಲಸಕ್ಕಾಗಿ ಹಣ ಹಾಗೂ ಶ್ರಮವನ್ನು ಹೇಗೆ ಒಗ್ಗೂಡಬೇಕು ಎನ್ನುವ ವಿಚಾರದಲ್ಲಿ ಶ್ರೇಷ್ಠತೆಯ ವ್ಯಸನಗಳಿಂದ ನಾವಿಂದು ಹೊರಬರಬೇಕಿದೆ. ಉತ್ತಮ ಉದ್ದೇಶ, ದೂರದರ್ಶಿತ್ವ, ಸಮತೆಯಲ್ಲಿ ನಂಬಿಕೆಯಿಟ್ಟವರನ್ನು ಅಧಿಕಾರದ ಕೇಂದ್ರಕ್ಕೆ ತರಲು ಲಾಬಿ ಮಾಡುವುದು, ಉತ್ತಮ ಧ್ಯೇಯೋದ್ದೇಶಗಳ ಸಾಕಾರಕ್ಕಾಗಿ ಸಂಪನ್ಮೂಲ ಸಂಗ್ರಹದ ವಿಚಾರದಲ್ಲಿ ಅವಾಸ್ತವವೂ, ಅಪ್ರಾಯೋಗಿಕವೂ ಆಗಿರದೆ ಸಮಾಜಕಂಟಕವಲ್ಲದ ಮಾರ್ಗಗಳ ಬಗ್ಗೆ ಪುನರ್ ಪರಿಶೀಲಿಸುವುದು ಇಂದಿನ ಅಗತ್ಯವಾಗಿದೆ. ಒಳಿತನ್ನು ಕೆಟ್ಟದ್ದರಿಂದ ಗೆಲ್ಲಿಸಲು ಸಾಧ್ಯವಿಲ್ಲ ಎನ್ನುವುದು ದಿಟ. ಹಾಗೆಂದು, ಒಳಿತನ್ನು ಒಳಿತಿನಿಂದಲೇ ಸೋಲಿಸಬಾರದು ಕೂಡ. ವಿಚಾರಶೀಲರಿಗೆ ಇವೆರಡರ ನಡುವೆ ಸಮತೋಲನ ಸಾಧಿಸುವುದು ಕಷ್ಟವಾಗಲಾರದು.

ಒಳಿತಿನ ಬೇರುಗಳು ಸಮಾಜದಲ್ಲಿ ಆಳವಾಗಬೇಕೆಂದರೆ, ಮೊದಲು ಉತ್ತಮರ ಪರವಾಗಿ ಪ್ರಜ್ಞಾವಂತರೆಲ್ಲರೂ ಸಕಾರಾತ್ಮಕವಾಗಿ ಲಾಬಿ ಮಾಡಬೇಕಿದೆ. ಸಜ್ಜನರ ಒಳ್ಳೆಯತನಕ್ಕೆ ಪ್ರಾಮಾಣಿಕತೆಯ ಬೇಡಿ, ಸಲಾಕೆಗಳನ್ನು ಹಾಕಿ, ವಸ್ತುನಿಷ್ಠತೆಯ ಲಕ್ಷ್ಮಣರೇಖೆಯನ್ನೆಳೆದು ಪಂಜರದಲ್ಲಿರಿಸಿ ಆ ಮೂಲಕ ಅಧಿಕಾರ ಕೇಂದ್ರಗಳಿಗೆ, ಆಯಕಟ್ಟಿನ ಸ್ಥಳಗಳಿಗೆ ಒತ್ತರಿಸಿಕೊಳ್ಳುವ ದುಷ್ಟರು, ಧನದಾಹಿಗಳು, ಅಯೋಗ್ಯರನ್ನು ದೂರವಿರಿಸಬೇಕಿದೆ. ಉತ್ತಮರು, ಪ್ರತಿಭಾವಂತರು, ಮಾನವೀಯ ಮೌಲ್ಯಗಳುಳ್ಳವರನ್ನು ಅಧಿಕಾರ ಹಾಗೂ ಸಂಪನ್ಮೂಲಗಳಿರುವೆಡೆ ಕೂರಿಸಿ ರಚನಾತ್ಮಕ ಹಾಗೂ ಮಾನವೀಯ ಕೆಲಸಗಳಿಗೆ ಹೆಚ್ಚೆಚ್ಚು ಶಕ್ತಿ, ಸಂಪನ್ಮೂಲಗಳನ್ನು ಹರಿಸಬೇಕಿದೆ. ಇದು ಸಾಧ್ಯವಾಗಬೇಕೆಂದರೆ ನಾವುಗಳು ಅವಾಸ್ತವ ನೆಲೆಗಳಲ್ಲಿ ರೂಢಿಸಿಕೊಂಡಿರುವ ಶ್ರೇಷ್ಠತೆಯ ವ್ಯಸನವನ್ನು ಬದಿಗಿರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...