Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...