Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...