Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...