Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...