Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...