Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...