Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಮಾಲೋಚನಾ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಆಘಾತಕಾರಿ ಜಾತಿ ನಿಂದನೆ-ವರದಿ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...