Homeಕರ್ನಾಟಕಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

ಉಡುಪಿಯ ಬೋಳ ಗ್ರಾಪಂ ವ್ಯಾಪ್ತಿಯಲ್ಲಿ ‘ನಾಥೂರಾಮ್‌ ಗೋಡ್ಸೆ ರಸ್ತೆ’!

- Advertisement -
- Advertisement -

ಉಡುಪಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ಒಂದಲ್ಲೊಂದು ವಿವಾದಗಳಿಗೆ ಕಾರಣವಾಗುತ್ತಲೇ ಇದೆ. ಹಿಜಾಬ್‌, ಮುಸ್ಲಿಮರ ವ್ಯಾಪಾರಕ್ಕೆ ವಿರೋಧ ಮೊದಲಾದ ಸಂಗತಿಗಳಿಂದ ವಿವಾದದ ಕೇಂದ್ರವಾಗಿದ್ದ ಉಡುಪಿಯಲ್ಲಿ ‘ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ’ ಜರುಗಿ ಯಶಸ್ವಿ ಕೂಡ ಆಗಿತ್ತು. ಆದರೀಗ ಮತ್ತೊಂದು ವಿವಾದ ಉಡುಪಿಯಿಂದ ಮುನ್ನೆಲೆಗೆ ಬಂದಿದೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಇಡಲಾಗಿದೆ. ‌ಇದಕ್ಕೆ ಸಂಬಂಧಿಸಿದ ಫೋಟೋ ವೈರಲ್ ಆಗುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ಕುಮಾರ್‌ ಪ್ರತಿನಿಧಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕವನ್ನು ವೈರಲ್‌ ಫೋಟದಲ್ಲಿ ಕಾಣಬಹುದು. ಈ ಫೋಟೋದ ಅಧಿಕೃತತೆಯನ್ನು ‘ನಾನುಗೌರಿ.ಕಾಂ’ ಪರಿಶೀಲಿಸಿದ್ದು, ‘ಪಡುಗಿರಿ’ಯಲ್ಲಿ ಇಂತಹದ್ದೊಂದು ಫಲಕ ಇರುವುದು ದೃಢಪಟ್ಟಿದೆ.

ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ” ಎಂದು ತಿಳಿಸಿದರು.

“ಗಾಂಧೀಜಿಯವರನ್ನು ಹತ್ಯೆ ಮಾಡಿದ ಭಯೋತ್ಪಾದಕ ಗೋಡ್ಸೆಯ ಹೆಸರನ್ನು ಇಂದು ಯಾವನೋ ರಸ್ತೆಗೆ ಇಡುತ್ತಾನೆ, ಮತ್ತೊಬ್ಬ ಇನ್ಯಾರೋ ಬಂದು ಇನ್ನೊಬ್ಬ ಭಯೋತ್ಪಾದಕನ ಹೆಸರನ್ನು ಹಾಕಿ ಹೋಗುತ್ತಾನೆ. ಇದಕ್ಕೆಲ್ಲ ಯಾರು ಹೊಣೆ?” ಎಂದು ‘ನಾನುಗೌರಿ.ಕಾಂ’ ಕೇಳಿದಾಗ, “ಎರಡು ಮೂರು ದಿನಗಳ ಹಿಂದೆ ಈ ರೀತಿಯ ಬೋರ್ಡ್ ಅನ್ನು ಯಾರೋ ಹಾಕಿದ್ದಾರೆ. ನಾಳೆ ಗ್ರಾಮ ಪಂಚಾಯಿತಿ ಸಭೆ ಇರುತ್ತದೆ. ಸಭೆಯಲ್ಲಿ ಮಾತನಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯಿತಿ ಹಾಕಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಹಿರಿಯ ಪರ್ತಕರ್ತರಾದ ದಿನೇಶ್‌ ಅಮಿತ್‌ ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ನಮ್ಮ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇಂತಹದ್ದೊಂದು ರಸ್ತೆ ಫಲಕ ಬಿದ್ದಿದೆ. ಇದಕ್ಕೆ ಸಚಿವರ ಒಪ್ಪಿಗೆ ಇಲ್ಲ ಎಂದಾದರೆ, ಅವರೇ ಮುಂದೆ ನಿಂತು ಇದನ್ನು ಒಡೆದು ಹಾಕಿ,‌ ಸಂಬಂಧಿತ ದುರುಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. (ಅಚ್ಚರಿಯ ಸಂಗತಿ ಎಂದರೆ ಈ ಫಲಕವನ್ನು ವಿರೋಧಿಸಿ ಚಿತ್ರವನ್ನು ಕಳಿಸಿದವರು ಸ್ಥಳೀಯ ಬಿಜೆಪಿ ಕಾರ್ಯಕರ್ತರು)” ಎಂದಿದ್ದಾರೆ.

“ರಸ್ತೆಗೆ ಬಂದ ಗೋಡ್ಸೆ, ಪುಸ್ತಕಕ್ಕೆ ಯಾವಾಗ ಬರುತ್ತಾನೋ; ಇಂತಹದೊಂದು ಅನಾಹುತ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕ್ಷೇತ್ರದಲ್ಲಿ ನಡೆದಿದೆ” ಎಂದು ಜೆಡಿಎಸ್‌ ಮುಖಂಡರಾದ ಗಂಗಾಧರಮೂರ್ತಿಯವರು ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಯುವ ಬರಹಗಾರ ಚರಣ್‌ ಐವರ್ನಾಡು ಅವರು ಘಟನೆಯನ್ನು ಖಂಡಿಸಿದ್ದು, “ಸಚಿವ ಸುನಿಲ್ ಕುಮಾರ್ ಅವರೇ, ಇದನ್ನು ಕಿತ್ತು ನಿಮ್ಮ ಅಪ್ಪ ಇಲ್ಲವೇ ಅಮ್ಮನ ಹೆಸರನ್ನೇ ರಸ್ತೆಗೆ ಇಡಿ. ಅದಕ್ಕೆ ಒಂದು ಮರ್ಯಾದೆ ಇದೆ! ಶ್ರಮಿಕರ ಹೆಸರು ರಸ್ತೆಗೆ ಇರಲಿ. ಇದು ತುಳುನಾಡಿನ ಮಾಡಿದ ಅವಮಾನ. ಗಾಂಧಿಯನ್ನು ತುಳುನಾಡು ಗೌರವಿಸಿದ ರೀತಿ ನಿಮಗೆ ಗೊತ್ತಿಲ್ಲ! ಗೊತ್ತಿದ್ದರೆ ಇಂದೇ ಪಿಕ್ಕಾಸು ತೆಗೊಂಡು ಇದನ್ನು ಜರಿದು ಹಾಕಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...