Homeಅಂಕಣಗಳುಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ... ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

ಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ… ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

- Advertisement -
- Advertisement -

ಹೋದವಾರದ ಸಂಚಿಕೆಯಲ್ಲಿ ದೊರೆಸ್ವಾಮಿ 38 ದಿನ ಸಂಪಾದಕನಾಗಿದ್ದ ಅಪ್ರಬುದ್ಧ ಪತ್ರಕರ್ತ ಎಂದು ಹೇಳಿರುವ ಬಾಬು ಕೃಷ್ಣಮೂರ್ತಿಯ ಬಾಯಿ ಮುಚ್ಚಿಸಿದ್ದೇನೆ.

ಈ ಲೇಖನದಲ್ಲಿ ಗಾಂಧಿ ಹಂತಕ ಗೋಡ್ಸೆ ವಿಚಾರದಲ್ಲಿ ಎರಡು ಮಾತು ಹೇಳಲು ಬಯಸುತ್ತೇನೆ. ಗೋಡ್ಸೆ ಗಾಂಧೀಜಿ ಹತ್ಯೆಗೆ ಮೊದಲು ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದ. ರ‍್ಯಾಲಿಯ ಸ್ವಾಗತ ಸಮಿತಿಯ ಅಧ್ಯಕ್ಷನಾಗಿದ್ದ ಸುಪ್ರಸಿದ್ದ ನ್ಯಾಯವಾದಿ ಬೇಲಿ ವಾಸುದೇವಮೂರ್ತಿಯವರ ಅತಿಥಿಯಾಗಿದ್ದ ಎಂದು ಪೌರವಾಣಿಯಲ್ಲಿ ವರದಿಯಾಗಿತ್ತು. ಅದನ್ನು ಪ್ರಶ್ನಿಸಿ ಬಾಬು ಕೃಷ್ಣಮೂರ್ತಿಯವರು ಗಾಂಧಿ ಹತ್ಯೆ ಸಂಬಂಧದಲ್ಲಿ ಬಂಧಿಗಳಾಗಿದ್ದ ಗೋಡ್ಸೆ ಮತ್ತು ನಾರಾಯಣ ನ್ಯಾಯಾಲಯದ ಮುಂದೆ ನೀಡಿರುವ ಹೇಳಿಕೆಯಲ್ಲಿ ತಾವು ಆ ದಿನಗಳಲ್ಲಿ ದೆಹಲಿಯ ಹೋಟೆಲ್‌ಗಳಲ್ಲಿ ಸುಳ್ಳು ಹೆಸರು ಬರೆಸಿ ವಾಸ್ತವ್ಯ ಮಾಡಿರುವುದಾಗಿ ಹೇಳಿದ್ದಾರೆ. ಆದ್ದರಿಂದ ಗೋಡ್ಸೆ ಆ ದಿನಗಳಲ್ಲಿ ಬೆಂಗಳೂರಿನಲ್ಲಿ ಇದ್ದಿದ್ದು ಸುಳ್ಳು ಎಂದು ಬಾಬು ಕೃಷ್ಣಮೂರ್ತಿ ಅಭಿಪ್ರಾಯಪಡುತ್ತಾರೆ.


ಇದನ್ನು ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…


 

ಗಾಂಧಿ ಹತ್ಯೆಗೆ ಎಷ್ಟೋ ಮೊದಲು ವರದಿಯಾಗಿರುವ ಸುದ್ದಿ ಇದು. ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂಬುದು ಬಾಬುವಿನ ಆಪಾದನೆ. ಈ ಸುದ್ದಿಯನ್ನು ಆ ದಿನ ಪೌರವಾಣಿ ಪತ್ರಿಕೆಯಲ್ಲಿ ಹಾಕುವುದಕ್ಕೆ ಮೊದಲೇ ನ್ಯಾಯಾಲಯದ ಕಡತಗಳನ್ನು ನಾನು ನೋಡಬೇಕಾಗಿತ್ತು ಎಂದು ಅವರು ಅಭಿಪ್ರಾಯಪಡುವಂತಿದೆ. ನಾವು ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂದು ಅವರು ಹೇಳುವುದು ತಪ್ಪು. ಗಾಂಧೀಜಿಯನ್ನು ಮುಂದೆ ಗೋಡ್ಸೆ ಕೊಲ್ಲುತ್ತಾನೆ ಅದರಿಂದ ಅವನ ಹೆಸರನ್ನು ಈಗಲೇ Expose ಮಾಡಿಬಿಡೋಣ ಎಂದು ನಾವು ಈ ಸುದ್ದಿಯನ್ನು ಹರಿಯಬಿಟ್ಟೆವು ಎಂಬುದು ಕೃಷ್ಣಮೂರ್ತಿಗಳ ಗ್ರಹಿಕೆ ಇರಬಹುದು. ಇದು ವಿತಂಡವಾದ. ಆರ್‌ಎಸ್‌ಎಸ್ ರ‍್ಯಾಲಿಗೆ ಬರೆದೆ ಇದ್ದ, ಸ್ವಾಗತ ಸಮಿತಿ ಅಧ್ಯಕ್ಷರ ಅತಿಥಿಯಾಗಿ ಇರದೇ ಇದ್ದ ಗೋಡ್ಸೆ ಬಗೆಗೆ ಸುಳ್ಳು ಸುದ್ದಿ ಹಾಕುವ ಅಗತ್ಯವಾದರೂ ನನಗಾಗಲಿ, ನಮ್ಮ ಹಿರಿಯ ಭಾತ್ಮೀದಾರ ಎಚ್.ಎನ್ ನಾರಾಯಣರಾಯರಿಗಾಗಲಿ ಏನಿತ್ತು?

ನಾನು ಭಾರತ ಮಾತೆಯ ಆಣೆಮಾಡಿ ಹೇಳುತ್ತೇನೆ. ಈ ಸುದ್ದಿಯನ್ನು ಎಲ್ಲ ಇತರ ಸುದ್ದಿಗಳನ್ನು ಹಾಕುವಂತೆ ಸಹಜವಾಗಿ ಹಾಕಿದ್ದೇನೆ. News is sacred ಎಂಬುದು ಪತ್ರಿಕಾ ಧರ್ಮ. ಈ ಸುದ್ದಿಯನ್ನು ಹಾಕುವಾಗಲೂ ಅದೇ ಭಾವನೆಯಿಂದ ಹಾಕಿದ್ದೇವೆ. ಈ ಸುದ್ದಿಯನ್ನು ನಾವು ಸೃಷ್ಟಿಸಿಲ್ಲ. ಇದ್ದದ್ದನ್ನು ಇದ್ದಹಾಗೆ ಮುದ್ರಿಸಿದ್ದೆವು.


ಇದನ್ನು ಓದಿ: ಸುಳ್ಳು ಮತ್ತು ಸತ್ಯದ ಸಂಘರ್ಷ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕುರಿತು ‘ನ್ಯಾಯಪಥ’ ವಿಶೇಷ ಸಂಚಿಕೆ


ಇನ್ನು ಗೋಡ್ಸೆ ಮತ್ತು ಇತರರು ನ್ಯಾಯಾಲಯದ ಮುಂದೆ ನುಡಿದಿರುವ ವಿಷಯ ಅವರು ಯಾವುದೋ ಕೃತ್ಯಗಳನ್ನು ಮುಚ್ಚಿಡಲು ಆ ತಾರೀಕುಗಳಲ್ಲಿ ದಿಲ್ಲಿಯ ಹೋಟೆಲ್‌ಗಳಲ್ಲಿ ಇದ್ದುದ್ದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಎರಡು ದಿನ ಬೇರೆ ಬೇರೆ ಹೋಟೆಲ್‌ಗಳಲ್ಲಿ ಇದ್ದುದ್ದಾಗಿಯೂ ಎರಡು ಕಡೆ ಹೆಸರು ಬದಲಿಸಿಕೊಂಡು ಒಂದೊಂದು ಹೋಟೆಲ್‌ನಲ್ಲಿ ಬೇರೆ-ಬೇರೆ ಹೆಸರುಗಳನ್ನು ನಮೂದಿಸಿರುವುದಾಗಿ ಹೇಳಿದ್ದಾರೆ. ಈ ಹುಟ್ಟು ಸುಳ್ಳುಗಾರರ ಮಾತನ್ನು ಹೇಗೆ ನಂಬುವುದು? ಇವರು ಹೇಳಿರುವುದೆಲ್ಲ ಸುಳ್ಳು ಎಂಬುದನ್ನು ನಮ್ಮ ಪತ್ರಿಕೆಯಲ್ಲಿನ ವರದಿ ಖಚಿತಪಡಿಸುತ್ತದೆ.

ನೀವು ಕೊಲೆಗಡುಕರ ಮಾತನ್ನೇ ನಂಬಬೇಕೆನ್ನುತ್ತೀರಿ. ನಿಸ್ಪೃಹರಾಗಿ ಪೌರವಾಣಿ ಪತ್ರಿಕೆ ನಡೆಸಿದವರನ್ನು ನಂಬುವುದಿಲ್ಲ ಅನ್ನುತ್ತೀರಿ. ನಿಮಗೆ ನಿಮ್ಮ ದೇವರು ಸದ್ಬುದ್ಧಿ ಕೊಡಲಿ ಎಂದು ಆಶಿಸುತ್ತೇನೆ. ರುಮಾಲೆ ಚನ್ನಬಸಯ್ಯನವರು ಗಾಂಧಿಯನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್ ಎಂದು ತಾಯಿನಾಡು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕಾಗಿ ಅಂದಿನ ನಗರ ಬಿಜೆಪಿ ಅಧ್ಯಕ್ಷರಾಗಿದ್ದ ಭೀಮಾಚಾರ್ಯರು ಮಾನನಷ್ಟ ಮೊಕದ್ದಮೆಯನ್ನು ಸಿ.ಒ ಮ್ಯಾಜಿಸ್ಟ್ರೇಟ್‌ ಕೋರ್ಟ್‌‌ನಲ್ಲಿ ಹಾಕಿದ್ದರು. ತುಮಕೂರಿನ ಕೆ.ರಂಗಯ್ಯಗಾರ್ ರುಮಾಲೆ ಪರವಾಗಿ ವಕೀಲಿಕೆ ವಹಿಸಿದ್ದರು. ನಾನು ಪೌರವಾಣಿ ಸಂಪಾದಕನಾಗಿ ಗೋಡ್ಸೆ ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾದ ಸುಪ್ರಸಿದ್ಧ ವಕೀಲರು ಆದ ಬೇಲಿವಾಸುದೇವಮೂರ್ತಿಯವರ ಆತಿಥ್ಯದಲ್ಲಿದ್ದ ಎಂಬುದನ್ನು ಪ್ರಕಟಿಸಿದ್ದೆ. ಆದ್ದರಿಂದ ಆ ಸುದ್ದಿಯಿದ್ದ ಪತ್ರಿಕೆಯ ಸಂಪುಟವನ್ನು ನ್ಯಾಯಾಲಯಕ್ಕೆ ಒಪ್ಪಿಸಿ, ನನ್ನ ಸಾಕ್ಷ್ಯ ನುಡಿದೆ. ನಾಲ್ಕಾರು ಹಿಯರಿಂಗ್‌ಗಳು ಆದವು. ಅಷ್ಟರಲ್ಲಿ ಬೆಂಗಳೂರಿನ ಮತ್ತೊಬ್ಬ ಸುಪ್ರಸಿದ್ಧ ವಕೀಲರಾದ ಎಸ್.ಕೆ. ವೆಂಕಟರಂಗಯ್ಯಗಾರರು ಮಧ್ಯಪ್ರವೇಶಿಸಿ ಭೀಮಾಚಾರ್ಯರಿಗೂ, ರುಮಾಲೆ ಚೆನ್ನಬಸವಯ್ಯನವರಿಗೂ ರಾಜಿ ಮಾಡಿಸಿ ಕೇಸನ್ನು ವಾಪಸ್ ತೆಗೆಸಿದ್ದರು. ನನ್ನ ಪೌರವಾಣಿ ಪತ್ರಿಕೆಯ ಸಂಪುಟ ನ್ಯಾಯಾಲಯದಲ್ಲಿಯೇ ಉಳಿಯಿತು. ಅಂದಿನ ಪೌರವಾಣಿ ಪತ್ರಿಕೆಯ ಪ್ರತಿ Information Department ನಲ್ಲಿ ಸಿಗಬಹುದು.

ಬೇಲಿ ವಾಸುದೇವಮೂರ್ತಿಯವರು ಭೀಮಾಚಾರ್ಯರ ಬೀಗರು ಎಂಬುದನ್ನೂ ನಾನು ತಿಳಿಸಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...