Homeಅಂಕಣಗಳುಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ... ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

ಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ… ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

- Advertisement -
- Advertisement -

ಹೋದವಾರದ ಸಂಚಿಕೆಯಲ್ಲಿ ದೊರೆಸ್ವಾಮಿ 38 ದಿನ ಸಂಪಾದಕನಾಗಿದ್ದ ಅಪ್ರಬುದ್ಧ ಪತ್ರಕರ್ತ ಎಂದು ಹೇಳಿರುವ ಬಾಬು ಕೃಷ್ಣಮೂರ್ತಿಯ ಬಾಯಿ ಮುಚ್ಚಿಸಿದ್ದೇನೆ.

ಈ ಲೇಖನದಲ್ಲಿ ಗಾಂಧಿ ಹಂತಕ ಗೋಡ್ಸೆ ವಿಚಾರದಲ್ಲಿ ಎರಡು ಮಾತು ಹೇಳಲು ಬಯಸುತ್ತೇನೆ. ಗೋಡ್ಸೆ ಗಾಂಧೀಜಿ ಹತ್ಯೆಗೆ ಮೊದಲು ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದ. ರ‍್ಯಾಲಿಯ ಸ್ವಾಗತ ಸಮಿತಿಯ ಅಧ್ಯಕ್ಷನಾಗಿದ್ದ ಸುಪ್ರಸಿದ್ದ ನ್ಯಾಯವಾದಿ ಬೇಲಿ ವಾಸುದೇವಮೂರ್ತಿಯವರ ಅತಿಥಿಯಾಗಿದ್ದ ಎಂದು ಪೌರವಾಣಿಯಲ್ಲಿ ವರದಿಯಾಗಿತ್ತು. ಅದನ್ನು ಪ್ರಶ್ನಿಸಿ ಬಾಬು ಕೃಷ್ಣಮೂರ್ತಿಯವರು ಗಾಂಧಿ ಹತ್ಯೆ ಸಂಬಂಧದಲ್ಲಿ ಬಂಧಿಗಳಾಗಿದ್ದ ಗೋಡ್ಸೆ ಮತ್ತು ನಾರಾಯಣ ನ್ಯಾಯಾಲಯದ ಮುಂದೆ ನೀಡಿರುವ ಹೇಳಿಕೆಯಲ್ಲಿ ತಾವು ಆ ದಿನಗಳಲ್ಲಿ ದೆಹಲಿಯ ಹೋಟೆಲ್‌ಗಳಲ್ಲಿ ಸುಳ್ಳು ಹೆಸರು ಬರೆಸಿ ವಾಸ್ತವ್ಯ ಮಾಡಿರುವುದಾಗಿ ಹೇಳಿದ್ದಾರೆ. ಆದ್ದರಿಂದ ಗೋಡ್ಸೆ ಆ ದಿನಗಳಲ್ಲಿ ಬೆಂಗಳೂರಿನಲ್ಲಿ ಇದ್ದಿದ್ದು ಸುಳ್ಳು ಎಂದು ಬಾಬು ಕೃಷ್ಣಮೂರ್ತಿ ಅಭಿಪ್ರಾಯಪಡುತ್ತಾರೆ.


ಇದನ್ನು ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…


 

ಗಾಂಧಿ ಹತ್ಯೆಗೆ ಎಷ್ಟೋ ಮೊದಲು ವರದಿಯಾಗಿರುವ ಸುದ್ದಿ ಇದು. ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂಬುದು ಬಾಬುವಿನ ಆಪಾದನೆ. ಈ ಸುದ್ದಿಯನ್ನು ಆ ದಿನ ಪೌರವಾಣಿ ಪತ್ರಿಕೆಯಲ್ಲಿ ಹಾಕುವುದಕ್ಕೆ ಮೊದಲೇ ನ್ಯಾಯಾಲಯದ ಕಡತಗಳನ್ನು ನಾನು ನೋಡಬೇಕಾಗಿತ್ತು ಎಂದು ಅವರು ಅಭಿಪ್ರಾಯಪಡುವಂತಿದೆ. ನಾವು ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂದು ಅವರು ಹೇಳುವುದು ತಪ್ಪು. ಗಾಂಧೀಜಿಯನ್ನು ಮುಂದೆ ಗೋಡ್ಸೆ ಕೊಲ್ಲುತ್ತಾನೆ ಅದರಿಂದ ಅವನ ಹೆಸರನ್ನು ಈಗಲೇ Expose ಮಾಡಿಬಿಡೋಣ ಎಂದು ನಾವು ಈ ಸುದ್ದಿಯನ್ನು ಹರಿಯಬಿಟ್ಟೆವು ಎಂಬುದು ಕೃಷ್ಣಮೂರ್ತಿಗಳ ಗ್ರಹಿಕೆ ಇರಬಹುದು. ಇದು ವಿತಂಡವಾದ. ಆರ್‌ಎಸ್‌ಎಸ್ ರ‍್ಯಾಲಿಗೆ ಬರೆದೆ ಇದ್ದ, ಸ್ವಾಗತ ಸಮಿತಿ ಅಧ್ಯಕ್ಷರ ಅತಿಥಿಯಾಗಿ ಇರದೇ ಇದ್ದ ಗೋಡ್ಸೆ ಬಗೆಗೆ ಸುಳ್ಳು ಸುದ್ದಿ ಹಾಕುವ ಅಗತ್ಯವಾದರೂ ನನಗಾಗಲಿ, ನಮ್ಮ ಹಿರಿಯ ಭಾತ್ಮೀದಾರ ಎಚ್.ಎನ್ ನಾರಾಯಣರಾಯರಿಗಾಗಲಿ ಏನಿತ್ತು?

ನಾನು ಭಾರತ ಮಾತೆಯ ಆಣೆಮಾಡಿ ಹೇಳುತ್ತೇನೆ. ಈ ಸುದ್ದಿಯನ್ನು ಎಲ್ಲ ಇತರ ಸುದ್ದಿಗಳನ್ನು ಹಾಕುವಂತೆ ಸಹಜವಾಗಿ ಹಾಕಿದ್ದೇನೆ. News is sacred ಎಂಬುದು ಪತ್ರಿಕಾ ಧರ್ಮ. ಈ ಸುದ್ದಿಯನ್ನು ಹಾಕುವಾಗಲೂ ಅದೇ ಭಾವನೆಯಿಂದ ಹಾಕಿದ್ದೇವೆ. ಈ ಸುದ್ದಿಯನ್ನು ನಾವು ಸೃಷ್ಟಿಸಿಲ್ಲ. ಇದ್ದದ್ದನ್ನು ಇದ್ದಹಾಗೆ ಮುದ್ರಿಸಿದ್ದೆವು.


ಇದನ್ನು ಓದಿ: ಸುಳ್ಳು ಮತ್ತು ಸತ್ಯದ ಸಂಘರ್ಷ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕುರಿತು ‘ನ್ಯಾಯಪಥ’ ವಿಶೇಷ ಸಂಚಿಕೆ


ಇನ್ನು ಗೋಡ್ಸೆ ಮತ್ತು ಇತರರು ನ್ಯಾಯಾಲಯದ ಮುಂದೆ ನುಡಿದಿರುವ ವಿಷಯ ಅವರು ಯಾವುದೋ ಕೃತ್ಯಗಳನ್ನು ಮುಚ್ಚಿಡಲು ಆ ತಾರೀಕುಗಳಲ್ಲಿ ದಿಲ್ಲಿಯ ಹೋಟೆಲ್‌ಗಳಲ್ಲಿ ಇದ್ದುದ್ದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಎರಡು ದಿನ ಬೇರೆ ಬೇರೆ ಹೋಟೆಲ್‌ಗಳಲ್ಲಿ ಇದ್ದುದ್ದಾಗಿಯೂ ಎರಡು ಕಡೆ ಹೆಸರು ಬದಲಿಸಿಕೊಂಡು ಒಂದೊಂದು ಹೋಟೆಲ್‌ನಲ್ಲಿ ಬೇರೆ-ಬೇರೆ ಹೆಸರುಗಳನ್ನು ನಮೂದಿಸಿರುವುದಾಗಿ ಹೇಳಿದ್ದಾರೆ. ಈ ಹುಟ್ಟು ಸುಳ್ಳುಗಾರರ ಮಾತನ್ನು ಹೇಗೆ ನಂಬುವುದು? ಇವರು ಹೇಳಿರುವುದೆಲ್ಲ ಸುಳ್ಳು ಎಂಬುದನ್ನು ನಮ್ಮ ಪತ್ರಿಕೆಯಲ್ಲಿನ ವರದಿ ಖಚಿತಪಡಿಸುತ್ತದೆ.

ನೀವು ಕೊಲೆಗಡುಕರ ಮಾತನ್ನೇ ನಂಬಬೇಕೆನ್ನುತ್ತೀರಿ. ನಿಸ್ಪೃಹರಾಗಿ ಪೌರವಾಣಿ ಪತ್ರಿಕೆ ನಡೆಸಿದವರನ್ನು ನಂಬುವುದಿಲ್ಲ ಅನ್ನುತ್ತೀರಿ. ನಿಮಗೆ ನಿಮ್ಮ ದೇವರು ಸದ್ಬುದ್ಧಿ ಕೊಡಲಿ ಎಂದು ಆಶಿಸುತ್ತೇನೆ. ರುಮಾಲೆ ಚನ್ನಬಸಯ್ಯನವರು ಗಾಂಧಿಯನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್ ಎಂದು ತಾಯಿನಾಡು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕಾಗಿ ಅಂದಿನ ನಗರ ಬಿಜೆಪಿ ಅಧ್ಯಕ್ಷರಾಗಿದ್ದ ಭೀಮಾಚಾರ್ಯರು ಮಾನನಷ್ಟ ಮೊಕದ್ದಮೆಯನ್ನು ಸಿ.ಒ ಮ್ಯಾಜಿಸ್ಟ್ರೇಟ್‌ ಕೋರ್ಟ್‌‌ನಲ್ಲಿ ಹಾಕಿದ್ದರು. ತುಮಕೂರಿನ ಕೆ.ರಂಗಯ್ಯಗಾರ್ ರುಮಾಲೆ ಪರವಾಗಿ ವಕೀಲಿಕೆ ವಹಿಸಿದ್ದರು. ನಾನು ಪೌರವಾಣಿ ಸಂಪಾದಕನಾಗಿ ಗೋಡ್ಸೆ ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾದ ಸುಪ್ರಸಿದ್ಧ ವಕೀಲರು ಆದ ಬೇಲಿವಾಸುದೇವಮೂರ್ತಿಯವರ ಆತಿಥ್ಯದಲ್ಲಿದ್ದ ಎಂಬುದನ್ನು ಪ್ರಕಟಿಸಿದ್ದೆ. ಆದ್ದರಿಂದ ಆ ಸುದ್ದಿಯಿದ್ದ ಪತ್ರಿಕೆಯ ಸಂಪುಟವನ್ನು ನ್ಯಾಯಾಲಯಕ್ಕೆ ಒಪ್ಪಿಸಿ, ನನ್ನ ಸಾಕ್ಷ್ಯ ನುಡಿದೆ. ನಾಲ್ಕಾರು ಹಿಯರಿಂಗ್‌ಗಳು ಆದವು. ಅಷ್ಟರಲ್ಲಿ ಬೆಂಗಳೂರಿನ ಮತ್ತೊಬ್ಬ ಸುಪ್ರಸಿದ್ಧ ವಕೀಲರಾದ ಎಸ್.ಕೆ. ವೆಂಕಟರಂಗಯ್ಯಗಾರರು ಮಧ್ಯಪ್ರವೇಶಿಸಿ ಭೀಮಾಚಾರ್ಯರಿಗೂ, ರುಮಾಲೆ ಚೆನ್ನಬಸವಯ್ಯನವರಿಗೂ ರಾಜಿ ಮಾಡಿಸಿ ಕೇಸನ್ನು ವಾಪಸ್ ತೆಗೆಸಿದ್ದರು. ನನ್ನ ಪೌರವಾಣಿ ಪತ್ರಿಕೆಯ ಸಂಪುಟ ನ್ಯಾಯಾಲಯದಲ್ಲಿಯೇ ಉಳಿಯಿತು. ಅಂದಿನ ಪೌರವಾಣಿ ಪತ್ರಿಕೆಯ ಪ್ರತಿ Information Department ನಲ್ಲಿ ಸಿಗಬಹುದು.

ಬೇಲಿ ವಾಸುದೇವಮೂರ್ತಿಯವರು ಭೀಮಾಚಾರ್ಯರ ಬೀಗರು ಎಂಬುದನ್ನೂ ನಾನು ತಿಳಿಸಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...