Homeಅಂಕಣಗಳುಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ... ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

ಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ… ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

- Advertisement -
- Advertisement -

ಹೋದವಾರದ ಸಂಚಿಕೆಯಲ್ಲಿ ದೊರೆಸ್ವಾಮಿ 38 ದಿನ ಸಂಪಾದಕನಾಗಿದ್ದ ಅಪ್ರಬುದ್ಧ ಪತ್ರಕರ್ತ ಎಂದು ಹೇಳಿರುವ ಬಾಬು ಕೃಷ್ಣಮೂರ್ತಿಯ ಬಾಯಿ ಮುಚ್ಚಿಸಿದ್ದೇನೆ.

ಈ ಲೇಖನದಲ್ಲಿ ಗಾಂಧಿ ಹಂತಕ ಗೋಡ್ಸೆ ವಿಚಾರದಲ್ಲಿ ಎರಡು ಮಾತು ಹೇಳಲು ಬಯಸುತ್ತೇನೆ. ಗೋಡ್ಸೆ ಗಾಂಧೀಜಿ ಹತ್ಯೆಗೆ ಮೊದಲು ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದ. ರ‍್ಯಾಲಿಯ ಸ್ವಾಗತ ಸಮಿತಿಯ ಅಧ್ಯಕ್ಷನಾಗಿದ್ದ ಸುಪ್ರಸಿದ್ದ ನ್ಯಾಯವಾದಿ ಬೇಲಿ ವಾಸುದೇವಮೂರ್ತಿಯವರ ಅತಿಥಿಯಾಗಿದ್ದ ಎಂದು ಪೌರವಾಣಿಯಲ್ಲಿ ವರದಿಯಾಗಿತ್ತು. ಅದನ್ನು ಪ್ರಶ್ನಿಸಿ ಬಾಬು ಕೃಷ್ಣಮೂರ್ತಿಯವರು ಗಾಂಧಿ ಹತ್ಯೆ ಸಂಬಂಧದಲ್ಲಿ ಬಂಧಿಗಳಾಗಿದ್ದ ಗೋಡ್ಸೆ ಮತ್ತು ನಾರಾಯಣ ನ್ಯಾಯಾಲಯದ ಮುಂದೆ ನೀಡಿರುವ ಹೇಳಿಕೆಯಲ್ಲಿ ತಾವು ಆ ದಿನಗಳಲ್ಲಿ ದೆಹಲಿಯ ಹೋಟೆಲ್‌ಗಳಲ್ಲಿ ಸುಳ್ಳು ಹೆಸರು ಬರೆಸಿ ವಾಸ್ತವ್ಯ ಮಾಡಿರುವುದಾಗಿ ಹೇಳಿದ್ದಾರೆ. ಆದ್ದರಿಂದ ಗೋಡ್ಸೆ ಆ ದಿನಗಳಲ್ಲಿ ಬೆಂಗಳೂರಿನಲ್ಲಿ ಇದ್ದಿದ್ದು ಸುಳ್ಳು ಎಂದು ಬಾಬು ಕೃಷ್ಣಮೂರ್ತಿ ಅಭಿಪ್ರಾಯಪಡುತ್ತಾರೆ.


ಇದನ್ನು ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…


 

ಗಾಂಧಿ ಹತ್ಯೆಗೆ ಎಷ್ಟೋ ಮೊದಲು ವರದಿಯಾಗಿರುವ ಸುದ್ದಿ ಇದು. ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂಬುದು ಬಾಬುವಿನ ಆಪಾದನೆ. ಈ ಸುದ್ದಿಯನ್ನು ಆ ದಿನ ಪೌರವಾಣಿ ಪತ್ರಿಕೆಯಲ್ಲಿ ಹಾಕುವುದಕ್ಕೆ ಮೊದಲೇ ನ್ಯಾಯಾಲಯದ ಕಡತಗಳನ್ನು ನಾನು ನೋಡಬೇಕಾಗಿತ್ತು ಎಂದು ಅವರು ಅಭಿಪ್ರಾಯಪಡುವಂತಿದೆ. ನಾವು ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂದು ಅವರು ಹೇಳುವುದು ತಪ್ಪು. ಗಾಂಧೀಜಿಯನ್ನು ಮುಂದೆ ಗೋಡ್ಸೆ ಕೊಲ್ಲುತ್ತಾನೆ ಅದರಿಂದ ಅವನ ಹೆಸರನ್ನು ಈಗಲೇ Expose ಮಾಡಿಬಿಡೋಣ ಎಂದು ನಾವು ಈ ಸುದ್ದಿಯನ್ನು ಹರಿಯಬಿಟ್ಟೆವು ಎಂಬುದು ಕೃಷ್ಣಮೂರ್ತಿಗಳ ಗ್ರಹಿಕೆ ಇರಬಹುದು. ಇದು ವಿತಂಡವಾದ. ಆರ್‌ಎಸ್‌ಎಸ್ ರ‍್ಯಾಲಿಗೆ ಬರೆದೆ ಇದ್ದ, ಸ್ವಾಗತ ಸಮಿತಿ ಅಧ್ಯಕ್ಷರ ಅತಿಥಿಯಾಗಿ ಇರದೇ ಇದ್ದ ಗೋಡ್ಸೆ ಬಗೆಗೆ ಸುಳ್ಳು ಸುದ್ದಿ ಹಾಕುವ ಅಗತ್ಯವಾದರೂ ನನಗಾಗಲಿ, ನಮ್ಮ ಹಿರಿಯ ಭಾತ್ಮೀದಾರ ಎಚ್.ಎನ್ ನಾರಾಯಣರಾಯರಿಗಾಗಲಿ ಏನಿತ್ತು?

ನಾನು ಭಾರತ ಮಾತೆಯ ಆಣೆಮಾಡಿ ಹೇಳುತ್ತೇನೆ. ಈ ಸುದ್ದಿಯನ್ನು ಎಲ್ಲ ಇತರ ಸುದ್ದಿಗಳನ್ನು ಹಾಕುವಂತೆ ಸಹಜವಾಗಿ ಹಾಕಿದ್ದೇನೆ. News is sacred ಎಂಬುದು ಪತ್ರಿಕಾ ಧರ್ಮ. ಈ ಸುದ್ದಿಯನ್ನು ಹಾಕುವಾಗಲೂ ಅದೇ ಭಾವನೆಯಿಂದ ಹಾಕಿದ್ದೇವೆ. ಈ ಸುದ್ದಿಯನ್ನು ನಾವು ಸೃಷ್ಟಿಸಿಲ್ಲ. ಇದ್ದದ್ದನ್ನು ಇದ್ದಹಾಗೆ ಮುದ್ರಿಸಿದ್ದೆವು.


ಇದನ್ನು ಓದಿ: ಸುಳ್ಳು ಮತ್ತು ಸತ್ಯದ ಸಂಘರ್ಷ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕುರಿತು ‘ನ್ಯಾಯಪಥ’ ವಿಶೇಷ ಸಂಚಿಕೆ


ಇನ್ನು ಗೋಡ್ಸೆ ಮತ್ತು ಇತರರು ನ್ಯಾಯಾಲಯದ ಮುಂದೆ ನುಡಿದಿರುವ ವಿಷಯ ಅವರು ಯಾವುದೋ ಕೃತ್ಯಗಳನ್ನು ಮುಚ್ಚಿಡಲು ಆ ತಾರೀಕುಗಳಲ್ಲಿ ದಿಲ್ಲಿಯ ಹೋಟೆಲ್‌ಗಳಲ್ಲಿ ಇದ್ದುದ್ದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಎರಡು ದಿನ ಬೇರೆ ಬೇರೆ ಹೋಟೆಲ್‌ಗಳಲ್ಲಿ ಇದ್ದುದ್ದಾಗಿಯೂ ಎರಡು ಕಡೆ ಹೆಸರು ಬದಲಿಸಿಕೊಂಡು ಒಂದೊಂದು ಹೋಟೆಲ್‌ನಲ್ಲಿ ಬೇರೆ-ಬೇರೆ ಹೆಸರುಗಳನ್ನು ನಮೂದಿಸಿರುವುದಾಗಿ ಹೇಳಿದ್ದಾರೆ. ಈ ಹುಟ್ಟು ಸುಳ್ಳುಗಾರರ ಮಾತನ್ನು ಹೇಗೆ ನಂಬುವುದು? ಇವರು ಹೇಳಿರುವುದೆಲ್ಲ ಸುಳ್ಳು ಎಂಬುದನ್ನು ನಮ್ಮ ಪತ್ರಿಕೆಯಲ್ಲಿನ ವರದಿ ಖಚಿತಪಡಿಸುತ್ತದೆ.

ನೀವು ಕೊಲೆಗಡುಕರ ಮಾತನ್ನೇ ನಂಬಬೇಕೆನ್ನುತ್ತೀರಿ. ನಿಸ್ಪೃಹರಾಗಿ ಪೌರವಾಣಿ ಪತ್ರಿಕೆ ನಡೆಸಿದವರನ್ನು ನಂಬುವುದಿಲ್ಲ ಅನ್ನುತ್ತೀರಿ. ನಿಮಗೆ ನಿಮ್ಮ ದೇವರು ಸದ್ಬುದ್ಧಿ ಕೊಡಲಿ ಎಂದು ಆಶಿಸುತ್ತೇನೆ. ರುಮಾಲೆ ಚನ್ನಬಸಯ್ಯನವರು ಗಾಂಧಿಯನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್ ಎಂದು ತಾಯಿನಾಡು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕಾಗಿ ಅಂದಿನ ನಗರ ಬಿಜೆಪಿ ಅಧ್ಯಕ್ಷರಾಗಿದ್ದ ಭೀಮಾಚಾರ್ಯರು ಮಾನನಷ್ಟ ಮೊಕದ್ದಮೆಯನ್ನು ಸಿ.ಒ ಮ್ಯಾಜಿಸ್ಟ್ರೇಟ್‌ ಕೋರ್ಟ್‌‌ನಲ್ಲಿ ಹಾಕಿದ್ದರು. ತುಮಕೂರಿನ ಕೆ.ರಂಗಯ್ಯಗಾರ್ ರುಮಾಲೆ ಪರವಾಗಿ ವಕೀಲಿಕೆ ವಹಿಸಿದ್ದರು. ನಾನು ಪೌರವಾಣಿ ಸಂಪಾದಕನಾಗಿ ಗೋಡ್ಸೆ ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾದ ಸುಪ್ರಸಿದ್ಧ ವಕೀಲರು ಆದ ಬೇಲಿವಾಸುದೇವಮೂರ್ತಿಯವರ ಆತಿಥ್ಯದಲ್ಲಿದ್ದ ಎಂಬುದನ್ನು ಪ್ರಕಟಿಸಿದ್ದೆ. ಆದ್ದರಿಂದ ಆ ಸುದ್ದಿಯಿದ್ದ ಪತ್ರಿಕೆಯ ಸಂಪುಟವನ್ನು ನ್ಯಾಯಾಲಯಕ್ಕೆ ಒಪ್ಪಿಸಿ, ನನ್ನ ಸಾಕ್ಷ್ಯ ನುಡಿದೆ. ನಾಲ್ಕಾರು ಹಿಯರಿಂಗ್‌ಗಳು ಆದವು. ಅಷ್ಟರಲ್ಲಿ ಬೆಂಗಳೂರಿನ ಮತ್ತೊಬ್ಬ ಸುಪ್ರಸಿದ್ಧ ವಕೀಲರಾದ ಎಸ್.ಕೆ. ವೆಂಕಟರಂಗಯ್ಯಗಾರರು ಮಧ್ಯಪ್ರವೇಶಿಸಿ ಭೀಮಾಚಾರ್ಯರಿಗೂ, ರುಮಾಲೆ ಚೆನ್ನಬಸವಯ್ಯನವರಿಗೂ ರಾಜಿ ಮಾಡಿಸಿ ಕೇಸನ್ನು ವಾಪಸ್ ತೆಗೆಸಿದ್ದರು. ನನ್ನ ಪೌರವಾಣಿ ಪತ್ರಿಕೆಯ ಸಂಪುಟ ನ್ಯಾಯಾಲಯದಲ್ಲಿಯೇ ಉಳಿಯಿತು. ಅಂದಿನ ಪೌರವಾಣಿ ಪತ್ರಿಕೆಯ ಪ್ರತಿ Information Department ನಲ್ಲಿ ಸಿಗಬಹುದು.

ಬೇಲಿ ವಾಸುದೇವಮೂರ್ತಿಯವರು ಭೀಮಾಚಾರ್ಯರ ಬೀಗರು ಎಂಬುದನ್ನೂ ನಾನು ತಿಳಿಸಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...