Homeಅಂಕಣಗಳುಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ... ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

ಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ… ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

- Advertisement -
- Advertisement -

ಹೋದವಾರದ ಸಂಚಿಕೆಯಲ್ಲಿ ದೊರೆಸ್ವಾಮಿ 38 ದಿನ ಸಂಪಾದಕನಾಗಿದ್ದ ಅಪ್ರಬುದ್ಧ ಪತ್ರಕರ್ತ ಎಂದು ಹೇಳಿರುವ ಬಾಬು ಕೃಷ್ಣಮೂರ್ತಿಯ ಬಾಯಿ ಮುಚ್ಚಿಸಿದ್ದೇನೆ.

ಈ ಲೇಖನದಲ್ಲಿ ಗಾಂಧಿ ಹಂತಕ ಗೋಡ್ಸೆ ವಿಚಾರದಲ್ಲಿ ಎರಡು ಮಾತು ಹೇಳಲು ಬಯಸುತ್ತೇನೆ. ಗೋಡ್ಸೆ ಗಾಂಧೀಜಿ ಹತ್ಯೆಗೆ ಮೊದಲು ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದ. ರ‍್ಯಾಲಿಯ ಸ್ವಾಗತ ಸಮಿತಿಯ ಅಧ್ಯಕ್ಷನಾಗಿದ್ದ ಸುಪ್ರಸಿದ್ದ ನ್ಯಾಯವಾದಿ ಬೇಲಿ ವಾಸುದೇವಮೂರ್ತಿಯವರ ಅತಿಥಿಯಾಗಿದ್ದ ಎಂದು ಪೌರವಾಣಿಯಲ್ಲಿ ವರದಿಯಾಗಿತ್ತು. ಅದನ್ನು ಪ್ರಶ್ನಿಸಿ ಬಾಬು ಕೃಷ್ಣಮೂರ್ತಿಯವರು ಗಾಂಧಿ ಹತ್ಯೆ ಸಂಬಂಧದಲ್ಲಿ ಬಂಧಿಗಳಾಗಿದ್ದ ಗೋಡ್ಸೆ ಮತ್ತು ನಾರಾಯಣ ನ್ಯಾಯಾಲಯದ ಮುಂದೆ ನೀಡಿರುವ ಹೇಳಿಕೆಯಲ್ಲಿ ತಾವು ಆ ದಿನಗಳಲ್ಲಿ ದೆಹಲಿಯ ಹೋಟೆಲ್‌ಗಳಲ್ಲಿ ಸುಳ್ಳು ಹೆಸರು ಬರೆಸಿ ವಾಸ್ತವ್ಯ ಮಾಡಿರುವುದಾಗಿ ಹೇಳಿದ್ದಾರೆ. ಆದ್ದರಿಂದ ಗೋಡ್ಸೆ ಆ ದಿನಗಳಲ್ಲಿ ಬೆಂಗಳೂರಿನಲ್ಲಿ ಇದ್ದಿದ್ದು ಸುಳ್ಳು ಎಂದು ಬಾಬು ಕೃಷ್ಣಮೂರ್ತಿ ಅಭಿಪ್ರಾಯಪಡುತ್ತಾರೆ.


ಇದನ್ನು ಓದಿ: ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…


 

ಗಾಂಧಿ ಹತ್ಯೆಗೆ ಎಷ್ಟೋ ಮೊದಲು ವರದಿಯಾಗಿರುವ ಸುದ್ದಿ ಇದು. ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂಬುದು ಬಾಬುವಿನ ಆಪಾದನೆ. ಈ ಸುದ್ದಿಯನ್ನು ಆ ದಿನ ಪೌರವಾಣಿ ಪತ್ರಿಕೆಯಲ್ಲಿ ಹಾಕುವುದಕ್ಕೆ ಮೊದಲೇ ನ್ಯಾಯಾಲಯದ ಕಡತಗಳನ್ನು ನಾನು ನೋಡಬೇಕಾಗಿತ್ತು ಎಂದು ಅವರು ಅಭಿಪ್ರಾಯಪಡುವಂತಿದೆ. ನಾವು ಈ ಸುದ್ದಿಯನ್ನು ಸೃಷ್ಟಿಸಿದ್ದೇವೆಂದು ಅವರು ಹೇಳುವುದು ತಪ್ಪು. ಗಾಂಧೀಜಿಯನ್ನು ಮುಂದೆ ಗೋಡ್ಸೆ ಕೊಲ್ಲುತ್ತಾನೆ ಅದರಿಂದ ಅವನ ಹೆಸರನ್ನು ಈಗಲೇ Expose ಮಾಡಿಬಿಡೋಣ ಎಂದು ನಾವು ಈ ಸುದ್ದಿಯನ್ನು ಹರಿಯಬಿಟ್ಟೆವು ಎಂಬುದು ಕೃಷ್ಣಮೂರ್ತಿಗಳ ಗ್ರಹಿಕೆ ಇರಬಹುದು. ಇದು ವಿತಂಡವಾದ. ಆರ್‌ಎಸ್‌ಎಸ್ ರ‍್ಯಾಲಿಗೆ ಬರೆದೆ ಇದ್ದ, ಸ್ವಾಗತ ಸಮಿತಿ ಅಧ್ಯಕ್ಷರ ಅತಿಥಿಯಾಗಿ ಇರದೇ ಇದ್ದ ಗೋಡ್ಸೆ ಬಗೆಗೆ ಸುಳ್ಳು ಸುದ್ದಿ ಹಾಕುವ ಅಗತ್ಯವಾದರೂ ನನಗಾಗಲಿ, ನಮ್ಮ ಹಿರಿಯ ಭಾತ್ಮೀದಾರ ಎಚ್.ಎನ್ ನಾರಾಯಣರಾಯರಿಗಾಗಲಿ ಏನಿತ್ತು?

ನಾನು ಭಾರತ ಮಾತೆಯ ಆಣೆಮಾಡಿ ಹೇಳುತ್ತೇನೆ. ಈ ಸುದ್ದಿಯನ್ನು ಎಲ್ಲ ಇತರ ಸುದ್ದಿಗಳನ್ನು ಹಾಕುವಂತೆ ಸಹಜವಾಗಿ ಹಾಕಿದ್ದೇನೆ. News is sacred ಎಂಬುದು ಪತ್ರಿಕಾ ಧರ್ಮ. ಈ ಸುದ್ದಿಯನ್ನು ಹಾಕುವಾಗಲೂ ಅದೇ ಭಾವನೆಯಿಂದ ಹಾಕಿದ್ದೇವೆ. ಈ ಸುದ್ದಿಯನ್ನು ನಾವು ಸೃಷ್ಟಿಸಿಲ್ಲ. ಇದ್ದದ್ದನ್ನು ಇದ್ದಹಾಗೆ ಮುದ್ರಿಸಿದ್ದೆವು.


ಇದನ್ನು ಓದಿ: ಸುಳ್ಳು ಮತ್ತು ಸತ್ಯದ ಸಂಘರ್ಷ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕುರಿತು ‘ನ್ಯಾಯಪಥ’ ವಿಶೇಷ ಸಂಚಿಕೆ


ಇನ್ನು ಗೋಡ್ಸೆ ಮತ್ತು ಇತರರು ನ್ಯಾಯಾಲಯದ ಮುಂದೆ ನುಡಿದಿರುವ ವಿಷಯ ಅವರು ಯಾವುದೋ ಕೃತ್ಯಗಳನ್ನು ಮುಚ್ಚಿಡಲು ಆ ತಾರೀಕುಗಳಲ್ಲಿ ದಿಲ್ಲಿಯ ಹೋಟೆಲ್‌ಗಳಲ್ಲಿ ಇದ್ದುದ್ದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ ಎರಡು ದಿನ ಬೇರೆ ಬೇರೆ ಹೋಟೆಲ್‌ಗಳಲ್ಲಿ ಇದ್ದುದ್ದಾಗಿಯೂ ಎರಡು ಕಡೆ ಹೆಸರು ಬದಲಿಸಿಕೊಂಡು ಒಂದೊಂದು ಹೋಟೆಲ್‌ನಲ್ಲಿ ಬೇರೆ-ಬೇರೆ ಹೆಸರುಗಳನ್ನು ನಮೂದಿಸಿರುವುದಾಗಿ ಹೇಳಿದ್ದಾರೆ. ಈ ಹುಟ್ಟು ಸುಳ್ಳುಗಾರರ ಮಾತನ್ನು ಹೇಗೆ ನಂಬುವುದು? ಇವರು ಹೇಳಿರುವುದೆಲ್ಲ ಸುಳ್ಳು ಎಂಬುದನ್ನು ನಮ್ಮ ಪತ್ರಿಕೆಯಲ್ಲಿನ ವರದಿ ಖಚಿತಪಡಿಸುತ್ತದೆ.

ನೀವು ಕೊಲೆಗಡುಕರ ಮಾತನ್ನೇ ನಂಬಬೇಕೆನ್ನುತ್ತೀರಿ. ನಿಸ್ಪೃಹರಾಗಿ ಪೌರವಾಣಿ ಪತ್ರಿಕೆ ನಡೆಸಿದವರನ್ನು ನಂಬುವುದಿಲ್ಲ ಅನ್ನುತ್ತೀರಿ. ನಿಮಗೆ ನಿಮ್ಮ ದೇವರು ಸದ್ಬುದ್ಧಿ ಕೊಡಲಿ ಎಂದು ಆಶಿಸುತ್ತೇನೆ. ರುಮಾಲೆ ಚನ್ನಬಸಯ್ಯನವರು ಗಾಂಧಿಯನ್ನು ಕೊಂದ ಗೋಡ್ಸೆ ಆರ್‌ಎಸ್‌ಎಸ್ ಎಂದು ತಾಯಿನಾಡು ಪತ್ರಿಕೆಯಲ್ಲಿ ಪ್ರಕಟಿಸಿದ್ದಕ್ಕಾಗಿ ಅಂದಿನ ನಗರ ಬಿಜೆಪಿ ಅಧ್ಯಕ್ಷರಾಗಿದ್ದ ಭೀಮಾಚಾರ್ಯರು ಮಾನನಷ್ಟ ಮೊಕದ್ದಮೆಯನ್ನು ಸಿ.ಒ ಮ್ಯಾಜಿಸ್ಟ್ರೇಟ್‌ ಕೋರ್ಟ್‌‌ನಲ್ಲಿ ಹಾಕಿದ್ದರು. ತುಮಕೂರಿನ ಕೆ.ರಂಗಯ್ಯಗಾರ್ ರುಮಾಲೆ ಪರವಾಗಿ ವಕೀಲಿಕೆ ವಹಿಸಿದ್ದರು. ನಾನು ಪೌರವಾಣಿ ಸಂಪಾದಕನಾಗಿ ಗೋಡ್ಸೆ ಬೆಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ರ‍್ಯಾಲಿಗೆ ಬಂದಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾದ ಸುಪ್ರಸಿದ್ಧ ವಕೀಲರು ಆದ ಬೇಲಿವಾಸುದೇವಮೂರ್ತಿಯವರ ಆತಿಥ್ಯದಲ್ಲಿದ್ದ ಎಂಬುದನ್ನು ಪ್ರಕಟಿಸಿದ್ದೆ. ಆದ್ದರಿಂದ ಆ ಸುದ್ದಿಯಿದ್ದ ಪತ್ರಿಕೆಯ ಸಂಪುಟವನ್ನು ನ್ಯಾಯಾಲಯಕ್ಕೆ ಒಪ್ಪಿಸಿ, ನನ್ನ ಸಾಕ್ಷ್ಯ ನುಡಿದೆ. ನಾಲ್ಕಾರು ಹಿಯರಿಂಗ್‌ಗಳು ಆದವು. ಅಷ್ಟರಲ್ಲಿ ಬೆಂಗಳೂರಿನ ಮತ್ತೊಬ್ಬ ಸುಪ್ರಸಿದ್ಧ ವಕೀಲರಾದ ಎಸ್.ಕೆ. ವೆಂಕಟರಂಗಯ್ಯಗಾರರು ಮಧ್ಯಪ್ರವೇಶಿಸಿ ಭೀಮಾಚಾರ್ಯರಿಗೂ, ರುಮಾಲೆ ಚೆನ್ನಬಸವಯ್ಯನವರಿಗೂ ರಾಜಿ ಮಾಡಿಸಿ ಕೇಸನ್ನು ವಾಪಸ್ ತೆಗೆಸಿದ್ದರು. ನನ್ನ ಪೌರವಾಣಿ ಪತ್ರಿಕೆಯ ಸಂಪುಟ ನ್ಯಾಯಾಲಯದಲ್ಲಿಯೇ ಉಳಿಯಿತು. ಅಂದಿನ ಪೌರವಾಣಿ ಪತ್ರಿಕೆಯ ಪ್ರತಿ Information Department ನಲ್ಲಿ ಸಿಗಬಹುದು.

ಬೇಲಿ ವಾಸುದೇವಮೂರ್ತಿಯವರು ಭೀಮಾಚಾರ್ಯರ ಬೀಗರು ಎಂಬುದನ್ನೂ ನಾನು ತಿಳಿಸಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...