Homeಮುಖಪುಟಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ 'ನಾಥೂರಾಮ್ ಗೋಡ್ಸೆ ಜಿಂದಾಬಾದ್' ಟ್ರೆಂಡಿಂಗ್

ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

ಇದಕ್ಕೆ ಪ್ರತಿಯಾಗಿ ಕೆಲವರು 'ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ' ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಗಾಂಧಿ ಜಯಂತಿ. ಸತ್ಯ, ಶಾಂತಿ ಮತ್ತು ಅಹಿಂಸೆಯ ಪ್ರತಿಪಾದಕ, ದೇಶದ ಸ್ವಾತಂತ್ರ್ಯ ಚಳವಳಿಯ ನೇತಾರ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಇಡೀ ದೇಶ ಮಾತ್ರವಲ್ಲದೇ ಪ್ರಪಂಚವೇ ಸ್ಮರಿಸುತ್ತಿದೆ. ಆದರೆ ಗಾಂಧಿ ಹಂತಕ ಗೋಡ್ಸೆ ಸಂತತಿ ಇನ್ನು ದೇಶದಲ್ಲಿ ವಿಷಕಾರುತ್ತಿದ್ದು ಗಾಂಧಿ ಜನ್ಮದಿನವೇ ಟ್ವಿಟ್ಟರ್‌ನಲ್ಲಿ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್ ಮಾಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುವ ಡ್ರಾಗನ್‌ಫ್ಲೈ ಮತ್ತು ಶ್ವೇತ ಶ್ರೀವತ್ಸವ ಸೇರಿದಂತೆ ಹಲವರು ಬಹಿರಂಗವಾಗಿ ಗಾಂಧಿಯವರನ್ನು ತೆಗಳಿ, ಗೋಡ್ಸೆಗೆ ಜಿಂದಾಬಾದ್, ಗೋಡ್ಸೆ ಅಮರರಾಗಲಿ ಎಂದು ಹೇಳಿದ್ದಾರೆ! ಗಾಂಧಿಯವರ ದೇಶವಿಭಜಕ, ಅವರು ಸ್ವಾತಂತ್ರ್ಯ ತಂದುಕೊಟ್ಟಿಲ್ಲ ಎಂದೆಲ್ಲಾ ಟ್ವೀಟ್ ಮಾಡಲಾಗಿದೆ.

ಹಿಂದಿಯಲ್ಲಿ #नाथूराम_गोडसे_जिंदाबाद ಎಂಬ ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದ್ದು, ಬಹುತೇಕರು ಗಾಂಧಿಯನ್ನು ನಿಂದಿಸಿ, ಜೈ ಗೋಡ್ಸೆ ಎಂದು ಟ್ವೀಟ್ ಮಾಡಿ ತಮ್ಮ ವಿಕೃತಿ ಮೆರೆದಿದ್ದಾರೆ. ಸಂಘೀ ಎಸ್ಕೋಬಾರ್ ಎಂಬ ಖಾತೆಯಿಂದ ‘ಮರೆತುಹೋದ ದೇಶದ ಹೀರೋ’ ಎಂದು ಟ್ವೀಟ್ ಮಾಡಲಾಗಿದೆ.

ಈ ವರದಿ ಬರೆಯುವ ವೇಳೆಗೆ ಸುಮಾರು ಒಂದು ಲಕ್ಷ ಹದಿನಾರು ಸಾವಿರ ಬಾರಿ ನಾಥೂರಾಮ್ ಗೋಡ್ಸೆ ಜಿಂದಾಬಾದ್ ಹ್ಯಾಷ್‌ಟ್ಯಾಗ್ ಬಳಕೆಯ ಟ್ವೀಟ್‌ಗಳು ದಾಖಲಾಗಿವೆ. ಕೆಲವರು 1 ಲಕ್ಷ ಮುಟ್ಟಿದ್ದೇವೆ, ಇನ್ನೂ ಟ್ವೀಟ್ ಮಾಡಿ ಎಂದು ಕರೆ ನೀಡಿದ್ದಾರೆ. ಇದರ ಹಿಂದೆ ಐಟಿ ಸೆಲ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ.

ಗೋಡ್ಸೆ ಆರಾಧಕರಿಗೆ ಅದೇ ಪ್ರಮಾಣದಲ್ಲಿ ಬಹಳಷ್ಟು ಜನ ತಿರುಗೇಟು ನೀಡಿದ್ದು, “ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ” ಎಂದು ಕಿಡಿಕಾರಿದ್ದಾರೆ.

ಭಾರತದ ಸಂವಿಧಾನದ ಪ್ರಕಾರ “ಕೊಲೆಗಾರ ಕೊಲೆಗಾರನೇ ಹೊರತು ಅವರೆಂದೂ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರಿ ಆಗಲು ಸಾಧ್ಯವಿಲ್ಲ. ಅವರು ಕೊಂದಿದ್ದ ಸಾಮಾನ್ಯ ಮನುಷ್ಯನನ್ನಲ್ಲ ಬದಲಿಗೆ ರಾಷ್ಟ್ರಪಿತನನ್ನು” ಎಂದು ರುದ್ರ ಪ್ರತಾಪ್ ಸಿಂಗ್ ಎಂಬುವವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...