Homeಮುಖಪುಟಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ 'ನಾಥೂರಾಮ್ ಗೋಡ್ಸೆ ಜಿಂದಾಬಾದ್' ಟ್ರೆಂಡಿಂಗ್

ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

ಇದಕ್ಕೆ ಪ್ರತಿಯಾಗಿ ಕೆಲವರು 'ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ' ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಗಾಂಧಿ ಜಯಂತಿ. ಸತ್ಯ, ಶಾಂತಿ ಮತ್ತು ಅಹಿಂಸೆಯ ಪ್ರತಿಪಾದಕ, ದೇಶದ ಸ್ವಾತಂತ್ರ್ಯ ಚಳವಳಿಯ ನೇತಾರ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಇಡೀ ದೇಶ ಮಾತ್ರವಲ್ಲದೇ ಪ್ರಪಂಚವೇ ಸ್ಮರಿಸುತ್ತಿದೆ. ಆದರೆ ಗಾಂಧಿ ಹಂತಕ ಗೋಡ್ಸೆ ಸಂತತಿ ಇನ್ನು ದೇಶದಲ್ಲಿ ವಿಷಕಾರುತ್ತಿದ್ದು ಗಾಂಧಿ ಜನ್ಮದಿನವೇ ಟ್ವಿಟ್ಟರ್‌ನಲ್ಲಿ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್ ಮಾಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುವ ಡ್ರಾಗನ್‌ಫ್ಲೈ ಮತ್ತು ಶ್ವೇತ ಶ್ರೀವತ್ಸವ ಸೇರಿದಂತೆ ಹಲವರು ಬಹಿರಂಗವಾಗಿ ಗಾಂಧಿಯವರನ್ನು ತೆಗಳಿ, ಗೋಡ್ಸೆಗೆ ಜಿಂದಾಬಾದ್, ಗೋಡ್ಸೆ ಅಮರರಾಗಲಿ ಎಂದು ಹೇಳಿದ್ದಾರೆ! ಗಾಂಧಿಯವರ ದೇಶವಿಭಜಕ, ಅವರು ಸ್ವಾತಂತ್ರ್ಯ ತಂದುಕೊಟ್ಟಿಲ್ಲ ಎಂದೆಲ್ಲಾ ಟ್ವೀಟ್ ಮಾಡಲಾಗಿದೆ.

ಹಿಂದಿಯಲ್ಲಿ #नाथूराम_गोडसे_जिंदाबाद ಎಂಬ ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದ್ದು, ಬಹುತೇಕರು ಗಾಂಧಿಯನ್ನು ನಿಂದಿಸಿ, ಜೈ ಗೋಡ್ಸೆ ಎಂದು ಟ್ವೀಟ್ ಮಾಡಿ ತಮ್ಮ ವಿಕೃತಿ ಮೆರೆದಿದ್ದಾರೆ. ಸಂಘೀ ಎಸ್ಕೋಬಾರ್ ಎಂಬ ಖಾತೆಯಿಂದ ‘ಮರೆತುಹೋದ ದೇಶದ ಹೀರೋ’ ಎಂದು ಟ್ವೀಟ್ ಮಾಡಲಾಗಿದೆ.

ಈ ವರದಿ ಬರೆಯುವ ವೇಳೆಗೆ ಸುಮಾರು ಒಂದು ಲಕ್ಷ ಹದಿನಾರು ಸಾವಿರ ಬಾರಿ ನಾಥೂರಾಮ್ ಗೋಡ್ಸೆ ಜಿಂದಾಬಾದ್ ಹ್ಯಾಷ್‌ಟ್ಯಾಗ್ ಬಳಕೆಯ ಟ್ವೀಟ್‌ಗಳು ದಾಖಲಾಗಿವೆ. ಕೆಲವರು 1 ಲಕ್ಷ ಮುಟ್ಟಿದ್ದೇವೆ, ಇನ್ನೂ ಟ್ವೀಟ್ ಮಾಡಿ ಎಂದು ಕರೆ ನೀಡಿದ್ದಾರೆ. ಇದರ ಹಿಂದೆ ಐಟಿ ಸೆಲ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ.

ಗೋಡ್ಸೆ ಆರಾಧಕರಿಗೆ ಅದೇ ಪ್ರಮಾಣದಲ್ಲಿ ಬಹಳಷ್ಟು ಜನ ತಿರುಗೇಟು ನೀಡಿದ್ದು, “ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ” ಎಂದು ಕಿಡಿಕಾರಿದ್ದಾರೆ.

ಭಾರತದ ಸಂವಿಧಾನದ ಪ್ರಕಾರ “ಕೊಲೆಗಾರ ಕೊಲೆಗಾರನೇ ಹೊರತು ಅವರೆಂದೂ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರಿ ಆಗಲು ಸಾಧ್ಯವಿಲ್ಲ. ಅವರು ಕೊಂದಿದ್ದ ಸಾಮಾನ್ಯ ಮನುಷ್ಯನನ್ನಲ್ಲ ಬದಲಿಗೆ ರಾಷ್ಟ್ರಪಿತನನ್ನು” ಎಂದು ರುದ್ರ ಪ್ರತಾಪ್ ಸಿಂಗ್ ಎಂಬುವವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....