Homeಮುಖಪುಟಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ 'ನಾಥೂರಾಮ್ ಗೋಡ್ಸೆ ಜಿಂದಾಬಾದ್' ಟ್ರೆಂಡಿಂಗ್

ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

ಇದಕ್ಕೆ ಪ್ರತಿಯಾಗಿ ಕೆಲವರು 'ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ' ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಗಾಂಧಿ ಜಯಂತಿ. ಸತ್ಯ, ಶಾಂತಿ ಮತ್ತು ಅಹಿಂಸೆಯ ಪ್ರತಿಪಾದಕ, ದೇಶದ ಸ್ವಾತಂತ್ರ್ಯ ಚಳವಳಿಯ ನೇತಾರ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಇಡೀ ದೇಶ ಮಾತ್ರವಲ್ಲದೇ ಪ್ರಪಂಚವೇ ಸ್ಮರಿಸುತ್ತಿದೆ. ಆದರೆ ಗಾಂಧಿ ಹಂತಕ ಗೋಡ್ಸೆ ಸಂತತಿ ಇನ್ನು ದೇಶದಲ್ಲಿ ವಿಷಕಾರುತ್ತಿದ್ದು ಗಾಂಧಿ ಜನ್ಮದಿನವೇ ಟ್ವಿಟ್ಟರ್‌ನಲ್ಲಿ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್ ಮಾಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುವ ಡ್ರಾಗನ್‌ಫ್ಲೈ ಮತ್ತು ಶ್ವೇತ ಶ್ರೀವತ್ಸವ ಸೇರಿದಂತೆ ಹಲವರು ಬಹಿರಂಗವಾಗಿ ಗಾಂಧಿಯವರನ್ನು ತೆಗಳಿ, ಗೋಡ್ಸೆಗೆ ಜಿಂದಾಬಾದ್, ಗೋಡ್ಸೆ ಅಮರರಾಗಲಿ ಎಂದು ಹೇಳಿದ್ದಾರೆ! ಗಾಂಧಿಯವರ ದೇಶವಿಭಜಕ, ಅವರು ಸ್ವಾತಂತ್ರ್ಯ ತಂದುಕೊಟ್ಟಿಲ್ಲ ಎಂದೆಲ್ಲಾ ಟ್ವೀಟ್ ಮಾಡಲಾಗಿದೆ.

ಹಿಂದಿಯಲ್ಲಿ #नाथूराम_गोडसे_जिंदाबाद ಎಂಬ ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದ್ದು, ಬಹುತೇಕರು ಗಾಂಧಿಯನ್ನು ನಿಂದಿಸಿ, ಜೈ ಗೋಡ್ಸೆ ಎಂದು ಟ್ವೀಟ್ ಮಾಡಿ ತಮ್ಮ ವಿಕೃತಿ ಮೆರೆದಿದ್ದಾರೆ. ಸಂಘೀ ಎಸ್ಕೋಬಾರ್ ಎಂಬ ಖಾತೆಯಿಂದ ‘ಮರೆತುಹೋದ ದೇಶದ ಹೀರೋ’ ಎಂದು ಟ್ವೀಟ್ ಮಾಡಲಾಗಿದೆ.

ಈ ವರದಿ ಬರೆಯುವ ವೇಳೆಗೆ ಸುಮಾರು ಒಂದು ಲಕ್ಷ ಹದಿನಾರು ಸಾವಿರ ಬಾರಿ ನಾಥೂರಾಮ್ ಗೋಡ್ಸೆ ಜಿಂದಾಬಾದ್ ಹ್ಯಾಷ್‌ಟ್ಯಾಗ್ ಬಳಕೆಯ ಟ್ವೀಟ್‌ಗಳು ದಾಖಲಾಗಿವೆ. ಕೆಲವರು 1 ಲಕ್ಷ ಮುಟ್ಟಿದ್ದೇವೆ, ಇನ್ನೂ ಟ್ವೀಟ್ ಮಾಡಿ ಎಂದು ಕರೆ ನೀಡಿದ್ದಾರೆ. ಇದರ ಹಿಂದೆ ಐಟಿ ಸೆಲ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ.

ಗೋಡ್ಸೆ ಆರಾಧಕರಿಗೆ ಅದೇ ಪ್ರಮಾಣದಲ್ಲಿ ಬಹಳಷ್ಟು ಜನ ತಿರುಗೇಟು ನೀಡಿದ್ದು, “ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ” ಎಂದು ಕಿಡಿಕಾರಿದ್ದಾರೆ.

ಭಾರತದ ಸಂವಿಧಾನದ ಪ್ರಕಾರ “ಕೊಲೆಗಾರ ಕೊಲೆಗಾರನೇ ಹೊರತು ಅವರೆಂದೂ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರಿ ಆಗಲು ಸಾಧ್ಯವಿಲ್ಲ. ಅವರು ಕೊಂದಿದ್ದ ಸಾಮಾನ್ಯ ಮನುಷ್ಯನನ್ನಲ್ಲ ಬದಲಿಗೆ ರಾಷ್ಟ್ರಪಿತನನ್ನು” ಎಂದು ರುದ್ರ ಪ್ರತಾಪ್ ಸಿಂಗ್ ಎಂಬುವವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...