Homeಮುಖಪುಟಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ 'ನಾಥೂರಾಮ್ ಗೋಡ್ಸೆ ಜಿಂದಾಬಾದ್' ಟ್ರೆಂಡಿಂಗ್

ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

ಇದಕ್ಕೆ ಪ್ರತಿಯಾಗಿ ಕೆಲವರು 'ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ' ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಗಾಂಧಿ ಜಯಂತಿ. ಸತ್ಯ, ಶಾಂತಿ ಮತ್ತು ಅಹಿಂಸೆಯ ಪ್ರತಿಪಾದಕ, ದೇಶದ ಸ್ವಾತಂತ್ರ್ಯ ಚಳವಳಿಯ ನೇತಾರ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಇಡೀ ದೇಶ ಮಾತ್ರವಲ್ಲದೇ ಪ್ರಪಂಚವೇ ಸ್ಮರಿಸುತ್ತಿದೆ. ಆದರೆ ಗಾಂಧಿ ಹಂತಕ ಗೋಡ್ಸೆ ಸಂತತಿ ಇನ್ನು ದೇಶದಲ್ಲಿ ವಿಷಕಾರುತ್ತಿದ್ದು ಗಾಂಧಿ ಜನ್ಮದಿನವೇ ಟ್ವಿಟ್ಟರ್‌ನಲ್ಲಿ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್ ಮಾಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುವ ಡ್ರಾಗನ್‌ಫ್ಲೈ ಮತ್ತು ಶ್ವೇತ ಶ್ರೀವತ್ಸವ ಸೇರಿದಂತೆ ಹಲವರು ಬಹಿರಂಗವಾಗಿ ಗಾಂಧಿಯವರನ್ನು ತೆಗಳಿ, ಗೋಡ್ಸೆಗೆ ಜಿಂದಾಬಾದ್, ಗೋಡ್ಸೆ ಅಮರರಾಗಲಿ ಎಂದು ಹೇಳಿದ್ದಾರೆ! ಗಾಂಧಿಯವರ ದೇಶವಿಭಜಕ, ಅವರು ಸ್ವಾತಂತ್ರ್ಯ ತಂದುಕೊಟ್ಟಿಲ್ಲ ಎಂದೆಲ್ಲಾ ಟ್ವೀಟ್ ಮಾಡಲಾಗಿದೆ.

ಹಿಂದಿಯಲ್ಲಿ #नाथूराम_गोडसे_जिंदाबाद ಎಂಬ ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದ್ದು, ಬಹುತೇಕರು ಗಾಂಧಿಯನ್ನು ನಿಂದಿಸಿ, ಜೈ ಗೋಡ್ಸೆ ಎಂದು ಟ್ವೀಟ್ ಮಾಡಿ ತಮ್ಮ ವಿಕೃತಿ ಮೆರೆದಿದ್ದಾರೆ. ಸಂಘೀ ಎಸ್ಕೋಬಾರ್ ಎಂಬ ಖಾತೆಯಿಂದ ‘ಮರೆತುಹೋದ ದೇಶದ ಹೀರೋ’ ಎಂದು ಟ್ವೀಟ್ ಮಾಡಲಾಗಿದೆ.

ಈ ವರದಿ ಬರೆಯುವ ವೇಳೆಗೆ ಸುಮಾರು ಒಂದು ಲಕ್ಷ ಹದಿನಾರು ಸಾವಿರ ಬಾರಿ ನಾಥೂರಾಮ್ ಗೋಡ್ಸೆ ಜಿಂದಾಬಾದ್ ಹ್ಯಾಷ್‌ಟ್ಯಾಗ್ ಬಳಕೆಯ ಟ್ವೀಟ್‌ಗಳು ದಾಖಲಾಗಿವೆ. ಕೆಲವರು 1 ಲಕ್ಷ ಮುಟ್ಟಿದ್ದೇವೆ, ಇನ್ನೂ ಟ್ವೀಟ್ ಮಾಡಿ ಎಂದು ಕರೆ ನೀಡಿದ್ದಾರೆ. ಇದರ ಹಿಂದೆ ಐಟಿ ಸೆಲ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ.

ಗೋಡ್ಸೆ ಆರಾಧಕರಿಗೆ ಅದೇ ಪ್ರಮಾಣದಲ್ಲಿ ಬಹಳಷ್ಟು ಜನ ತಿರುಗೇಟು ನೀಡಿದ್ದು, “ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ” ಎಂದು ಕಿಡಿಕಾರಿದ್ದಾರೆ.

ಭಾರತದ ಸಂವಿಧಾನದ ಪ್ರಕಾರ “ಕೊಲೆಗಾರ ಕೊಲೆಗಾರನೇ ಹೊರತು ಅವರೆಂದೂ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರಿ ಆಗಲು ಸಾಧ್ಯವಿಲ್ಲ. ಅವರು ಕೊಂದಿದ್ದ ಸಾಮಾನ್ಯ ಮನುಷ್ಯನನ್ನಲ್ಲ ಬದಲಿಗೆ ರಾಷ್ಟ್ರಪಿತನನ್ನು” ಎಂದು ರುದ್ರ ಪ್ರತಾಪ್ ಸಿಂಗ್ ಎಂಬುವವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...