Homeಮುಖಪುಟಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ 'ನಾಥೂರಾಮ್ ಗೋಡ್ಸೆ ಜಿಂದಾಬಾದ್' ಟ್ರೆಂಡಿಂಗ್

ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

ಇದಕ್ಕೆ ಪ್ರತಿಯಾಗಿ ಕೆಲವರು 'ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ' ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಇಂದು ಗಾಂಧಿ ಜಯಂತಿ. ಸತ್ಯ, ಶಾಂತಿ ಮತ್ತು ಅಹಿಂಸೆಯ ಪ್ರತಿಪಾದಕ, ದೇಶದ ಸ್ವಾತಂತ್ರ್ಯ ಚಳವಳಿಯ ನೇತಾರ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಇಡೀ ದೇಶ ಮಾತ್ರವಲ್ಲದೇ ಪ್ರಪಂಚವೇ ಸ್ಮರಿಸುತ್ತಿದೆ. ಆದರೆ ಗಾಂಧಿ ಹಂತಕ ಗೋಡ್ಸೆ ಸಂತತಿ ಇನ್ನು ದೇಶದಲ್ಲಿ ವಿಷಕಾರುತ್ತಿದ್ದು ಗಾಂಧಿ ಜನ್ಮದಿನವೇ ಟ್ವಿಟ್ಟರ್‌ನಲ್ಲಿ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್ ಮಾಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುವ ಡ್ರಾಗನ್‌ಫ್ಲೈ ಮತ್ತು ಶ್ವೇತ ಶ್ರೀವತ್ಸವ ಸೇರಿದಂತೆ ಹಲವರು ಬಹಿರಂಗವಾಗಿ ಗಾಂಧಿಯವರನ್ನು ತೆಗಳಿ, ಗೋಡ್ಸೆಗೆ ಜಿಂದಾಬಾದ್, ಗೋಡ್ಸೆ ಅಮರರಾಗಲಿ ಎಂದು ಹೇಳಿದ್ದಾರೆ! ಗಾಂಧಿಯವರ ದೇಶವಿಭಜಕ, ಅವರು ಸ್ವಾತಂತ್ರ್ಯ ತಂದುಕೊಟ್ಟಿಲ್ಲ ಎಂದೆಲ್ಲಾ ಟ್ವೀಟ್ ಮಾಡಲಾಗಿದೆ.

ಹಿಂದಿಯಲ್ಲಿ #नाथूराम_गोडसे_जिंदाबाद ಎಂಬ ಹ್ಯಾಸ್‌ಟ್ಯಾಗ್ ಟ್ರೆಂಡ್ ಆಗಿದ್ದು, ಬಹುತೇಕರು ಗಾಂಧಿಯನ್ನು ನಿಂದಿಸಿ, ಜೈ ಗೋಡ್ಸೆ ಎಂದು ಟ್ವೀಟ್ ಮಾಡಿ ತಮ್ಮ ವಿಕೃತಿ ಮೆರೆದಿದ್ದಾರೆ. ಸಂಘೀ ಎಸ್ಕೋಬಾರ್ ಎಂಬ ಖಾತೆಯಿಂದ ‘ಮರೆತುಹೋದ ದೇಶದ ಹೀರೋ’ ಎಂದು ಟ್ವೀಟ್ ಮಾಡಲಾಗಿದೆ.

ಈ ವರದಿ ಬರೆಯುವ ವೇಳೆಗೆ ಸುಮಾರು ಒಂದು ಲಕ್ಷ ಹದಿನಾರು ಸಾವಿರ ಬಾರಿ ನಾಥೂರಾಮ್ ಗೋಡ್ಸೆ ಜಿಂದಾಬಾದ್ ಹ್ಯಾಷ್‌ಟ್ಯಾಗ್ ಬಳಕೆಯ ಟ್ವೀಟ್‌ಗಳು ದಾಖಲಾಗಿವೆ. ಕೆಲವರು 1 ಲಕ್ಷ ಮುಟ್ಟಿದ್ದೇವೆ, ಇನ್ನೂ ಟ್ವೀಟ್ ಮಾಡಿ ಎಂದು ಕರೆ ನೀಡಿದ್ದಾರೆ. ಇದರ ಹಿಂದೆ ಐಟಿ ಸೆಲ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ.

ಗೋಡ್ಸೆ ಆರಾಧಕರಿಗೆ ಅದೇ ಪ್ರಮಾಣದಲ್ಲಿ ಬಹಳಷ್ಟು ಜನ ತಿರುಗೇಟು ನೀಡಿದ್ದು, “ನಾಥೂರಾಮ್ ಗೋಡ್ಸೆ ಭಾರತದ ಪ್ರಥಮ ಭಯೋತ್ಪಾದಕನಾಗಿದ್ದು, ಆತನ ಅನುಯಾಯಿಗಳು ಸಹ ಭಯೋತ್ಪಾದಕರೆ” ಎಂದು ಕಿಡಿಕಾರಿದ್ದಾರೆ.

ಭಾರತದ ಸಂವಿಧಾನದ ಪ್ರಕಾರ “ಕೊಲೆಗಾರ ಕೊಲೆಗಾರನೇ ಹೊರತು ಅವರೆಂದೂ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರಿ ಆಗಲು ಸಾಧ್ಯವಿಲ್ಲ. ಅವರು ಕೊಂದಿದ್ದ ಸಾಮಾನ್ಯ ಮನುಷ್ಯನನ್ನಲ್ಲ ಬದಲಿಗೆ ರಾಷ್ಟ್ರಪಿತನನ್ನು” ಎಂದು ರುದ್ರ ಪ್ರತಾಪ್ ಸಿಂಗ್ ಎಂಬುವವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಅತ್ಯುನ್ನತ ಭಾರತ ರತ್ನವನ್ನು ಸಾವರ್ಕರ್‌ಗೆ ಅಷ್ಟೇ ಯಾಕೆ, ಗೋಡ್ಸೆಗೂ ಕೊಟ್ಟಬಿಡಿ’..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...