Homeಮುಖಪುಟಬೈಡನ್‌ ಮುಂದೆ ಗಾಂಧಿ ಜಪ, ಭಾರತದಲ್ಲಿ ಗೋಡ್ಸೆ ಜಪ: ಕನ್ಹಯ್ಯಕುಮಾರ್‌

ಬೈಡನ್‌ ಮುಂದೆ ಗಾಂಧಿ ಜಪ, ಭಾರತದಲ್ಲಿ ಗೋಡ್ಸೆ ಜಪ: ಕನ್ಹಯ್ಯಕುಮಾರ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ನಾಥುರಾಮ್‌ ಗೋಡ್ಸೆ ವಿಚಾರಧಾರೆಯ ಪ್ರತಿಪಾದಕರಾಗಿದ್ದಾರೆ. ಮಹಾತ್ಮ ಗಾಂಧಿಯನ್ನು ಕೊಂದ ಬಲಪಂಥೀಯ ಗುಂಪುಗಳು ಬಿಜೆಪಿಯ ಅಂಗಸಂಸ್ಥೆಗಳಾಗಿವೆ. ರಾಷ್ಟ್ರಪಿತ ಗಾಂಧಿ ವಿಚಾರಗಳಿಗೆ ಬಿಜೆಪಿ ವಿರುದ್ಧವಿದೆ ಎಂದು ಕಾಂಗ್ರೆಸ್‌‌ ಸೇರಿರುವ ಯುವ ನಾಯಕ ಕನ್ಹಯ್ಯಕುಮಾರ್‌‌ ಪ್ರತಿಪಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಅವರು, “ಬಿಜೆಪಿ ನನ್ನನ್ನು  ತುಕ್ಡೆ, ತುಕ್ಡೆ ಗ್ಯಾಂಗ್‌ ಎಂದು ಕರೆಯುತ್ತದೆ. ಬಿಜೆಪಿಗೆ ನಾನು ತುಕ್ಡೆ ತುಕ್ಡೆ ಆಗಿದ್ದಾನೆ. ಬಿಜೆಪಿಯನ್ನು ‘ತುಕ್ಡೆ, ತುಕ್ಡೆ’ ಮಡುತ್ತೇನೆ. ಈ ಪಕ್ಷ ಗೋಡ್ಸೆಯನ್ನು ರಾಷ್ಟ್ರಪಿತ ಎಂದು ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ.  ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರ ಎದುರು ಮಾತ್ರ ಅವರು ಗಾಂಧೀಜಿಯನ್ನು ಹೊಗಳುತ್ತಾರೆ ಎಂದಿದ್ದಾರೆ.

ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪಕ್ಷವನ್ನು ಬಲಪಡಿಸಿ, ಸ್ವಾತಂತ್ರವನ್ನು ಉಳಿಸಬೇಕಿದೆ. ನನ್ನಂಥ ಅನೇಕ ಯುವಕರು ಈ ಕೆಲಸ ತಡವಾಗಿದೆ ಎಂದು ಭಾವಿಸಿದ್ದೇವೆ. ರಾಜಕೀಯ ಭವಿಷ್ಯವನ್ನು ಮಾತ್ರ ನೋಡುವವರು ಬಿಜೆಪಿಗೆ ಸೇರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

 ಕಾಂಗ್ರೆಸ್ ನಾಯಕತ್ವ ಟೀಕೆ: ಬಿಜೆಪಿಗೆ ವರದಾನ

ಕಾಂಗ್ರೆಸ್‌ ನಾಯಕತ್ವವನ್ನು ಟೀಕಿಸುವುದು, ಬಿಜೆಪಿಗೆ ವರದಾನವಾಗುತ್ತದೆ. ದೇಶದ ಅತಿದೊಡ್ಡ ವಿರೋಧ ಪಕ್ಷ ಕಾಂಗ್ರೆಸ್ ಆಗಿದ್ದಾಗ, ಬಿಜೆಪಿ ದೊಡ್ಡ ಸೋಲನ್ನು ಎದುರಿಸಲಿದೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಂಡಿದ್ದಾರೆ ಎಂದು ಕನ್ಹಯ್ಯಕುಮಾರ್‌ ತಿಳಿಸಿದ್ದಾರೆ.

ರಾಹುಲ್‌ಗಾಂಧಿ ಅವರು ಸಹಾನುಭೂತಿಯ ನಾಯಕ ಎಂಬುದು ಅವರೊಂದಿಗೆ ಸಂವಹನ ನಡೆಸಿದಾಗ ನನ್ನ ಅನುಭವಕ್ಕೆ ಬಂದಿತು. ಅವರು ಯಾವಾಗಲೂ ನನ್ನ ತಾಯಿಯ ಯೋಗಕ್ಷೇಮ, ತಂದೆಯ ಆರೋಗ್ಯದ ಬಗ್ಗೆ ವಿಚಾರಿಸುತ್ತಾರೆ. ಅವರ ಈ ಗುಣವನ್ನು ನಾನು ಮೆಚ್ಚುತ್ತೇನೆ. ಈ ಗುಣವೇ ಅವರತ್ತ ನಾನು ಆಕರ್ಷಿತನಾಗಲು ಕಾರಣವಾಯಿತು. ಅವರು ಪ್ರಾಮಾಣಿಕ, ಅವರ ಹೋರಾಟದಲ್ಲಿ ಪ್ರಾಮಾಣಿಕತೆ ಇದೆ. ಸತ್ಯವು ಮೇಲುಗೈ ಸಾಧಿಸಬೇಕೆಂದು ಬಯಸುವ ನಿರ್ಭೀತ  ವ್ಯಕ್ತಿ ರಾಹುಲ್‌ ಗಾಂಧಿ ಎಂದು ಅವರು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...