Homeಮುಖಪುಟಬೈಡನ್‌ ಮುಂದೆ ಗಾಂಧಿ ಜಪ, ಭಾರತದಲ್ಲಿ ಗೋಡ್ಸೆ ಜಪ: ಕನ್ಹಯ್ಯಕುಮಾರ್‌

ಬೈಡನ್‌ ಮುಂದೆ ಗಾಂಧಿ ಜಪ, ಭಾರತದಲ್ಲಿ ಗೋಡ್ಸೆ ಜಪ: ಕನ್ಹಯ್ಯಕುಮಾರ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ನಾಥುರಾಮ್‌ ಗೋಡ್ಸೆ ವಿಚಾರಧಾರೆಯ ಪ್ರತಿಪಾದಕರಾಗಿದ್ದಾರೆ. ಮಹಾತ್ಮ ಗಾಂಧಿಯನ್ನು ಕೊಂದ ಬಲಪಂಥೀಯ ಗುಂಪುಗಳು ಬಿಜೆಪಿಯ ಅಂಗಸಂಸ್ಥೆಗಳಾಗಿವೆ. ರಾಷ್ಟ್ರಪಿತ ಗಾಂಧಿ ವಿಚಾರಗಳಿಗೆ ಬಿಜೆಪಿ ವಿರುದ್ಧವಿದೆ ಎಂದು ಕಾಂಗ್ರೆಸ್‌‌ ಸೇರಿರುವ ಯುವ ನಾಯಕ ಕನ್ಹಯ್ಯಕುಮಾರ್‌‌ ಪ್ರತಿಪಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಅವರು, “ಬಿಜೆಪಿ ನನ್ನನ್ನು  ತುಕ್ಡೆ, ತುಕ್ಡೆ ಗ್ಯಾಂಗ್‌ ಎಂದು ಕರೆಯುತ್ತದೆ. ಬಿಜೆಪಿಗೆ ನಾನು ತುಕ್ಡೆ ತುಕ್ಡೆ ಆಗಿದ್ದಾನೆ. ಬಿಜೆಪಿಯನ್ನು ‘ತುಕ್ಡೆ, ತುಕ್ಡೆ’ ಮಡುತ್ತೇನೆ. ಈ ಪಕ್ಷ ಗೋಡ್ಸೆಯನ್ನು ರಾಷ್ಟ್ರಪಿತ ಎಂದು ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ.  ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರ ಎದುರು ಮಾತ್ರ ಅವರು ಗಾಂಧೀಜಿಯನ್ನು ಹೊಗಳುತ್ತಾರೆ ಎಂದಿದ್ದಾರೆ.

ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪಕ್ಷವನ್ನು ಬಲಪಡಿಸಿ, ಸ್ವಾತಂತ್ರವನ್ನು ಉಳಿಸಬೇಕಿದೆ. ನನ್ನಂಥ ಅನೇಕ ಯುವಕರು ಈ ಕೆಲಸ ತಡವಾಗಿದೆ ಎಂದು ಭಾವಿಸಿದ್ದೇವೆ. ರಾಜಕೀಯ ಭವಿಷ್ಯವನ್ನು ಮಾತ್ರ ನೋಡುವವರು ಬಿಜೆಪಿಗೆ ಸೇರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

 ಕಾಂಗ್ರೆಸ್ ನಾಯಕತ್ವ ಟೀಕೆ: ಬಿಜೆಪಿಗೆ ವರದಾನ

ಕಾಂಗ್ರೆಸ್‌ ನಾಯಕತ್ವವನ್ನು ಟೀಕಿಸುವುದು, ಬಿಜೆಪಿಗೆ ವರದಾನವಾಗುತ್ತದೆ. ದೇಶದ ಅತಿದೊಡ್ಡ ವಿರೋಧ ಪಕ್ಷ ಕಾಂಗ್ರೆಸ್ ಆಗಿದ್ದಾಗ, ಬಿಜೆಪಿ ದೊಡ್ಡ ಸೋಲನ್ನು ಎದುರಿಸಲಿದೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಂಡಿದ್ದಾರೆ ಎಂದು ಕನ್ಹಯ್ಯಕುಮಾರ್‌ ತಿಳಿಸಿದ್ದಾರೆ.

ರಾಹುಲ್‌ಗಾಂಧಿ ಅವರು ಸಹಾನುಭೂತಿಯ ನಾಯಕ ಎಂಬುದು ಅವರೊಂದಿಗೆ ಸಂವಹನ ನಡೆಸಿದಾಗ ನನ್ನ ಅನುಭವಕ್ಕೆ ಬಂದಿತು. ಅವರು ಯಾವಾಗಲೂ ನನ್ನ ತಾಯಿಯ ಯೋಗಕ್ಷೇಮ, ತಂದೆಯ ಆರೋಗ್ಯದ ಬಗ್ಗೆ ವಿಚಾರಿಸುತ್ತಾರೆ. ಅವರ ಈ ಗುಣವನ್ನು ನಾನು ಮೆಚ್ಚುತ್ತೇನೆ. ಈ ಗುಣವೇ ಅವರತ್ತ ನಾನು ಆಕರ್ಷಿತನಾಗಲು ಕಾರಣವಾಯಿತು. ಅವರು ಪ್ರಾಮಾಣಿಕ, ಅವರ ಹೋರಾಟದಲ್ಲಿ ಪ್ರಾಮಾಣಿಕತೆ ಇದೆ. ಸತ್ಯವು ಮೇಲುಗೈ ಸಾಧಿಸಬೇಕೆಂದು ಬಯಸುವ ನಿರ್ಭೀತ  ವ್ಯಕ್ತಿ ರಾಹುಲ್‌ ಗಾಂಧಿ ಎಂದು ಅವರು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...