Homeಕರ್ನಾಟಕಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

- Advertisement -
- Advertisement -

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟ ಪ್ರಕಟವಾಗಿದ್ದು ಕನ್ನಡಕ್ಕೆ ಗರಿಷ್ಟ 11 ರಾಷ್ಟ್ರಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಅಭಿನಯಕ್ಕಾಗಿ ವಿಶೇಷ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್ ಅಭಿನಯದ ನಾತಿಚರಾಮಿ ಸಿನೆಮಾವೊಂದೇ 5 ಪ್ರಶಸ್ತಿಗಳನ್ನು ಗಳಿಸಿದ್ದು ಕೆ.ಜಿ.ಎಫ್ ಎರಡು ಪ್ರಶಸ್ತಿ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಸದ್ದು ಮಾಡಿದೆ.

ನವದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಆಯುಷ್ಮಾನ್ ಖುರಾನ ( ಅಂಧಾದುನ್)

ಆಯುಷ್ಮಾನ್ ಖುರಾನ ಅಭಿನಯದ ಅಂಧಾದುನ್, ಬದಾಯಿ ಹೋ ಮತ್ತು ತೆಲುಗಿನ ಕೀರ್ತಿ ಸುರೇಶ್ ಅಭಿನಯದ ಮಹಾನಟಿ ಸಿನೆಮಾಗಳು ಅತಿ ಹೆಚ್ಚು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿವೆ. ಉರಿ ಸಿನೆಮಾದ ನಿರ್ದೇಶಕ ಆದಿತ್ಯ ಧರ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಜಯಿಸಿದ್ದಾರೆ.

ಮಹಾನಟಿ ಸಿನೆಮಾದಲ್ಲಿ ಕೀರ್ತಿ ಸುರೇಶ್

 

ಕನ್ನಡದಲ್ಲಿ ನಾತಿಚರಾಮೀ ಸಿನಿಮಾವೊಂದೇ ಅತ್ಯುತ್ತುಮ ಪ್ರಾದೇಶಿಕ ಚಿತ್ರ, ಅತ್ಯುತ್ತಮ ಮಹಿಳಾ ಗಾಯಕಿ (ಮಾಯಾವಿ ಮನವೆ ಹಾಡು-ಗಾಯಕಿ ಬಿಂದು ಮಾಲಿನಿ), ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ, ಅತ್ಯುತ್ತಮ ಸಂಕಲನ ಮತ್ತು ಅತ್ಯುತ್ತಮ ಅಭಿನಯಕ್ಕಾಗಿ ಶೃತಿ ಹರಿಹರನ್ ಗೆ ವಿಶೇಷ ಪ್ರಶಸ್ತಿ ಲಭಿಸಿದೆ.

ಇನ್ನು ಕೆ.ಜಿ.ಎಫ್ ಅತ್ಯುತ್ತಮ ಸಾಹಸ ಚಿತ್ರ ಮತ್ತು ಅತ್ಯುತ್ತಮ ವಿ.ಎಫ್.ಎಕ್ಸ್ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅದೇ ರೀತಿ ಅತ್ಯುತ್ತಮ ರಾಷ್ಟ್ರೀಯ ಏಕತಾ ಚಿತ್ರ ಮತ್ತು ಅತ್ಯುತ್ತಮ ಬಾಲ ಕಲಾವಿದ ವಿಭಾಗದಲ್ಲಿ ಕನ್ನಡದ ‘ಒಂದಲ್ಲ ಎರಡಲ್ಲ’ ಚಿತ್ರ ಪ್ರಶಸ್ತಿ ಜಯಿಸಿದೆ. ‘ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು’ ಅತ್ಯುತ್ತಮ್ ಮಕ್ಕಳ ಚಿತ್ರ ವಿಭಾಗದಲ್ಲಿ ಹಾಗೆಯೇ ಅತ್ಯುತ್ತಮ ರಾಷ್ಟ್ರೀಯ ಆಕ್ಸ್ರೂಸ್ ಚಿತ್ರ ವಿಭಾಗದಲ್ಲಿ ‘ ಮೂಕಜ್ಜಿಯ ಕನಸುಗಳು’ ಚಿತ್ರ ಪ್ರಶಸ್ತಿ ಜಯಿಸಿವೆ.

ಇದೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಇಷ್ಟೊಂದು ಪ್ರಶಸ್ತಿಗಳು ಕನ್ನಡಕ್ಕೆ ಲಭಿಸಿವೆ. ಮುಖ್ಯವಾಗಿ ನಾತಿಚರಾಮಿ ಸಿನೆಮಾ 5 ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ, ಉಳಿದ ಸಿನೆಮಾಗಳು ಸಹ ಪ್ರಶಸ್ತಿ ಜಯಿಸುವ ಮೂಲಕ ಕನ್ನಡಕ್ಕೆ ಗೌರವ ತಂದುಕೊಟ್ಟಿದೆ. ಎಲ್ಲರಿಗೂ ಅಭಿನಂದನೆಗಳು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...