Homeಸಿನಿಮಾಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

- Advertisement -
- Advertisement -

ಸೋಮಶೇಖರ್ ಚಲ್ಯ |

ಧರ್ಮೇಚ, ಅರ್ಥೇಚ, ಕಾಮೇಚ, ಮೋಕ್ಷೇಚ ಅಹಂ ಇವಮ್ ನಾತಿಚರಾಮಿ, ಈ ಪದಗಳು ಭಾರತೀಯ ಸಮಾಜದಲ್ಲಿ ಹೆಣ್ಣಿನ ಮನಸ್ಸಿನಲ್ಲಿ ಎಂದೆಂದಿಗೂ ತಲ್ಲಣವನ್ನುಂಟು ಮಾಡುವಂತಹವು. ಹೆಣ್ಣು ದಾಂಪತ್ಯ ಜೀವನಕ್ಕೆ ಕಾಲಿರಿಸುವ ಗಳಿಗೆಯಿಂದ ಆಕೆ ಧರ್ಮ, ಹಣ, ಕಾಮ ಮತ್ತು ಮೋಕ್ಷದವರೆಗೂ ಆತ್ಮಾರ್ಥವಾಗಿ ತನ್ನ ಗಂಡನಿಗೆ ಅಧೀನಳು ಎಂದು ಈ ಸಾಲುಗಳು ಹೇಳುತ್ತವೆ. ಇದೆಲ್ಲದಕ್ಕೂ ಉತ್ತರ ಹುಡುಕುವ ಹಾಗೂ ಹೆಣ್ಣಿನ ಮನಸ್ಸಿನ ತೊಳಲಾಟವನ್ನು ಬಿಚ್ಚಿಡುವ ಪ್ರಯತ್ನವನ್ನು ನಾತಿಚರಾಮಿ ಚಿತ್ರ ತಂಡ ಮಾಡಿದೆ.
ಭಾರತದ ಸಂಸ್ಕøತಿ, ಸಂಪ್ರದಾಯ, ಕಟ್ಟುಪಾಡುಗಳೆಲ್ಲವೂ ನಾನಾರೀತಿಯಲ್ಲಿ ಹೆಣ್ಣಿನ ಮೇಲೆ ಹೇರಲ್ಪಟ್ಟಿವೆ. ಗಂಡಿಗಿರುವ ಸ್ವಾತಂತ್ರ್ಯ ಹೆಣ್ಣಿಗಿಲ್ಲ. ಹೆಣ್ಣು ಗಂಡಿನ ಗುಲಾಮಳಾಗಿಯೇ ಬದುಕಬೇಕು, ಇಂತಹ ಕಟ್ಟಲೆಗಳು ಮೀರಿ ಬದುಕ ಬಯಸುವ, ಪ್ರಯತ್ನಿಸುವ ಹೆಣ್ಣು ಸಮಾಜದಿಂದ ದೂಷಿಸಲ್ಪಡುತ್ತಾಳೆ. ಮಹಿಳೆ ತನ್ನ ಗಂಡನನ್ನು ಕಳೆದುಕೊಂಡರೆ ಆಕೆ ತನ್ನ ಉಳಿದ ಬದುಕನ್ನು ಆತನ ನೆನಪಿನಲ್ಲಿಯೇ ಒಂಟಿಯಾಗಿ ಕಳೆಯಬೇಕು, ಮತ್ತೊಂದು ಮದುವೆಯಾಗಬಾರದು. ಹೆಣ್ಣು ತಾನೆ ಒಂಟಿ ಜೀವನವನ್ನು ಆಯ್ಕೆ ಮಾಡಿಕೊಂಡರೆ ಸರಿ, ಅದರೆ ಅದೂ ಹೇರಲ್ಪಡುವ ವಿಚಾರವೇ. ವಿಧವೆ ತನ್ನ ಅಗತ್ಯಗಳನ್ನು ಹೇಳಿಕೊಳ್ಳುವಂತಿಲ್ಲ, ಹೇಳಿ ಪೂರೈಸಿಕೊಳ್ಳುವಂತಿಲ್ಲ. ಹಾಗೇನಾದರು ತನ್ನ ಆಸೆಗಳನ್ನು ಹೊರಹಾಕಿದರೆ ಆಕೆ ನಡತೆಗೆಟ್ಟವಳೆಂದು ಹಣೆಪಟ್ಟಿ ಕಟ್ಟಿಕೊಳ್ಳುತ್ತಾಳೆ.
ನಾತಿಚರಾಮಿ ಚಿತ್ರದ ಮೂಲಕ ನಿರ್ದೇಶಕ ಮಂಸೋರೆ, ಚಿಕ್ಕ ವಯಸ್ಸಿನಲ್ಲಿಯೇ ಗಂಡನನ್ನು ಕಳೆದುಕೊಂಡು ಬದುಕುತ್ತಿರುವ ಗೌರಿ ಹಾಗೂ ವಿವಾಹವಾಗಿ ಐದು ವರ್ಷ ಕಳೆದರೂ ಹೊಂದಾಣಿಕೆಯಿಲ್ಲದ ಸುರೇಶನ ಸಂಸಾರವನ್ನು ಕಥೆಯಾಗಿ ಇಟ್ಟುಕೊಂಡು ಬದುಕಿನೊಳಗಿನ ತಲ್ಲಣಗಳು, ಸಮಸ್ಯೆ ಮತ್ತು ಸಂಬಂಧಗಳ ನಡುವಿನ ವೈರುಧ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಒಂದೆಡೆ ಮದುವೆಯಾಗಿ ಕೆಲ ವರ್ಷಗಳಲ್ಲೇ ಜೀವವೇ ಆಗಿದ್ದ ಗಂಡನನ್ನು ಕಳೆದುಕೊಂಡ ಗೌರಿಗೆ ಮತ್ತೊಂದು ಮದುವೆ ಮಾಡುವ ಅವಸರದಲ್ಲ್ಲಿರುವ ಗೌರಿಯ ತಂದೆತಾಯಿ, ಗಂಡನ ನೆನಪಲ್ಲೇ ಬದುಕ ಬಯಸುವ ಗೌರಿ. ಮತ್ತೊಂದೆಡೆ ಸಂಸಾರದಲ್ಲಿ ಹೊಂದಾಣಿಕೆ ಕಾಣದೆ, ತಮ್ಮ ದೈಹಿಕ ಸುಖದಿಂದಾಚೆಗಿನ ಬಯಕೆಗಳು, ಪ್ರೀತಿ-ಸಂಬಂಧಗಳ ಅನುಬಂಧವಿಲ್ಲದೆ ಪೇಚಾಡುವ ಯುವ ದಂಪತಿಗಳು ಬದುಕಿನ ವೈರುಧ್ಯಕ್ಕೆ ಮುಖಾಮುಖಿಯಾಗಿವೆ.
ಪ್ರೀತಿಸಿ ಮದುವೆಯಾದ ಗಂಡನನ್ನು ಮರೆಯಲಾಗದೇ ಆತ ಬದುಕಿದ್ದ ದಿನಗಳಲ್ಲಿದ್ದಂತೆಯೇ ತನ್ನ ಮನೆಯನ್ನೂ, ಮನವನ್ನೂ ಹೊಂದಿಸಿಕೊಂಡು ಒಂಟಿ ಬದುಕನ್ನು ಆತನ ಪ್ರೀತಿಯ ನೆನಪಿನಲ್ಲೇ ಮುಂದುವರೆಸುವ ಗೌರಿಗೆ ಮತ್ತೊಬ್ಬ ಗಂಡನೊಂದಿಗೆ ಬದುಕುವ ಮನಸ್ಸಿಲ್ಲ. ಆದರೆ ಆಕೆಯ ಮನಸ್ಸಿನ ತಳಮಳ ಅದರಾಚೆಗೆ ಅವಳನ್ನು ಕಾಡುತ್ತಿದೆ, ಅ ತಳಮಳಕ್ಕೆ ಕಾರಣ ಹುಡುವುದರಲ್ಲಿ ಆಕೆಯ ಒದ್ದಾಟ. ವಿಧವೆಯೆಂಬ ಕಾರಣಕ್ಕೆ ಅಡ್ವಾಂಟೇಜ್ ಪಡೆಯಲು ಯತ್ನಿಸುವ ಸಹೋದ್ಯೋಗಿಗಳ ಕಾಮಾಂಧ ಮನಸ್ಥಿತಿಯನ್ನು ಎದುರಿಸಿ ಬದುಕುವ ದಿನನಿತ್ಯದ ಪರಿತಾಪ.
ಮದುವೆಯಾಗಿ ಗಂಡನೊಂದಿಗೆ ಪ್ರೀತಿಯಿಲ್ಲದ ಸಿಡುಕು ಮಾತಿನಿಂದ ಬೇಸತ್ತ ಸುರೇಶನ ಹೆಂಡತಿ ಗಂಡನ ಪ್ರೀತಿಯ ಅಪ್ಪುಗೆಗಾಗಿ, ಸಾಂಗತ್ಯದ ಭಾವನೆಯ ಮಾತುಗಳಿಗಾಗಿ ತವಕಿಸುತ್ತಾ ಕಾಯುವ ಹೆಣ್ಣು. ಹಳ್ಳಿ ಹುಡುಗಿಯನ್ನು ಮದುವೆಯಗಿಬಿಟ್ಟಿದ್ದೇನೆಂಬ ಕಾರಣಕ್ಕೆ ಅವಳನ್ನು ಕೀಳರಿಮೆಯಿಂದ ಕಸದಂತೆ ನೋಡುವ ಗಂಡ. ಈ ಎರಡು ವೈರುಧ್ಯಗಳು ಹೆಣ್ಣಿನ ಬದುಕಿನ ಒಟ್ಟು ಸಾರವನ್ನು ಬಿಂಬಿಸಿವೆ. ಆಕೆಯ ಪ್ರೀತಿಗೆ ಬೆಲೆಕೊಡದ ಗಂಡ ಆಕೆಯೊಂದಿಗೆ ದೈಹಿಕ ಸುಖವನ್ನು ಮಾತ್ರ ಪಡೆಯುತ್ತಾನೆ. ಆದರೆ ಪ್ರೀತಿಯ ಆಸರೆಯೇ ಇಲ್ಲದ ಆ ಸುಖ ಹೆಣ್ಣಿಗೆ ಅನಗತ್ಯ. ಇದೂ ಕೂಡ ಲೀಗಲ್ ದೌರ್ಜನ್ಯವೇ ಆಗಿದೆ. ಇಂದಿಗೂ ಎಷ್ಟೋ ಸಂಸಾರಗಳು ಇರುವುದೂ ಹೀಗೆಯೇ, ಈ ವ್ಯವಸ್ಥೆಯೊಳಗೆ ಹೇಳಿಕೊಳ್ಳಲಾಗುತ್ತಿಲ್ಲವಷ್ಟೇ. ‘ನನ್ನನ್ನೇನು ಟಿವಿ ಅಂದುಕೊಂಡಿದ್ದೀರಾ ಬೇಕಾದಾಗ ಆನ್ ಮಾಡಿ, ಬೇಡವಾದಾಗ ಆಫ್ ಮಾಡೋಕೆ’ ಎನ್ನುವ ಆ ಹೆಣ್ಣಿನ ಮಾತು ಈ ಸಮಾಜಕ್ಕೆ ಸವಾಲೊಡ್ಡಿದಂತೆ ತೋರುತ್ತದೆ.
ಒಬ್ಬ ವಿಧವೆ ತನ್ನ ಅವಶ್ಯಕತೆಗಳನ್ನು, ನೋವು ಸಂಕಟಗಳನ್ನು ವ್ಯಕ್ತಪಡಿಸಿದರೆ ಆಗುವ ಕಷ್ಟಗಳನ್ನು ಈ ಚಿತ್ರ ತೆರೆದಿಡುವುದರ ಜೊತೆಗೆ ಆಕೆ ಇನ್ನುಳಿದ ಬದುಕಿನ ಪಯಣದಲ್ಲಿ ತನ್ನ ಕಷ್ಟಗಳನ್ನು ಯಾರಿಗೆ ಹೇಳಿಕೊಳ್ಳಬೇಕು, ಯಾರಿಂದ ಸಹಾಯ ಪಡೆಯಬೇಕು, ಆಕೆಯ ನೋವಿಗೆ ಸ್ಪಂದಿಸುವವರಾರು, ಆಕೆಯ ಅಗತ್ಯಗಳನ್ನು ಪೂರೈಸುವವರಾರು ಎಂಬ ನೂರಾರು ಪ್ರಶ್ನೆಗಳನ್ನು ಮುಂದಿಡುತ್ತದೆ. ಗಂಡು ತನ್ನ ಬಯಕೆಗಳನ್ನು ತೀರಿಸಿಕೊಳ್ಳಲು ಮುಂದಾಗುವ ರೀತಿಯಲ್ಲಿ ಹೆಣ್ಣಿಗೆ ಸಾಧ್ಯವಿಲ್ಲ.
ಸ್ನೇಹಿತರ ಒತ್ತಾಯದ ಮೇರೆಗೆ ಆಪ್ತ ಸಮಾಲೋಚನೆ ಪಡೆಯುವ ಗೌರಿಗೆ ತನಗೆ ಬೇಕಿರುವುದೇನು ಎಂಬುದರ ಅರಿವಾಗುತ್ತದೆ. ಆದರೆ ತನ್ನ ಗಂಡನನ್ನು ಮರೆಯಲಾಗದ ಸಂದರ್ಭದಲ್ಲಿ ಆಕಸ್ಮಿಕವಾಗಿ ಪರಿಚಯವಾಗುವ ಸುರೇಶ ಅಗತ್ಯವೆನಿಸುತ್ತಾನೆ. ತನ್ನ ಬಯಕೆಯನ್ನು ಹೇಳಿಕೊಂಡ ಕ್ಷಣವೇ ಪ್ರತಿಕ್ರಿಯೆಯಾಗಿ ಬರುವ ಮಾತು ‘ನೀನು ಒಳ್ಳೆ ಸಂಸ್ಕಾರವುಳ್ಳ ಮನೆತನದಿಂದ ಬಂದ ಹೆಣ್ಣು ಅಂದುಕೊಂಡಿದ್ದೆ ಆದರೆ ನೀನು ಛೀ’ ಎಂಬುದು. ಇಲ್ಲಿ ಆಕೆ ಬಲವಂತವನ್ನೇನು ಮಾಡಿಲ್ಲ, ಆಕೆಯ ಬಯಕೆಯನ್ನಷ್ಟೇ ಹೇಳಿಕೊಂಡಿದ್ದಾಳೆ. ಅಷ್ಟಕ್ಕೇ ಅವಳ ಸಂಸ್ಕಾರ, ಸಂಸ್ಕøತಿ, ಮನೆತನವೆಲ್ಲವೂ ಕೀಳಾಗಿಹೋಗುತ್ತವೆ. ‘ನಮ್ ದೇಹದ ಬಯಕೆನಾ ಡೈರೆಕ್ಟ್ ಆಗಿ, ಇನ್‍ಡೈರೆಕ್ಟ್ ಆಗಿ ಎಷ್ಟೇ ಸೂಕ್ಷ್ಮವಾಗಿ ಹೇಳಿದ್ರು ನಾವ್ ಚೀಪ್ ಆಗ್ತಿವಿ ಅಲ್ವಾ?’ ಎನ್ನುವ ಡೈಲಾಗ್ ಸಮಾಜದ ಅಂತಃಸಾಕ್ಷಿಯನ್ನೂ, ನಮ್ಮ ಮನಃಸಾಕ್ಷಿಯನ್ನೂ ಪ್ರಶ್ನಿಸುತ್ತದೆ.
ತನ್ನ ಸಂಗಾತಿಯ ಬಯಕೆಯೇನೆಂಬುದನ್ನು ಅರಿಯುವುದರಲ್ಲಿ ವಿಫಲನಾಗಿದ್ದ, ತನ್ನ ಹೆಂಡತಿಗೆ ಪ್ರೀತಿ ಕೊಡಲಾಗದ ಸುರೇಶ, ಗೌರಿಯ ಬಯಕೆಯನ್ನು ಪೂರೈಸುತ್ತಾನೆಯಾದರೂ, ‘ಹೆಂಗಸ್ರೂ ಕೂಡ ಮನುಷ್ಯರು ಅನ್ನೋದ ಅರ್ಥ ಮಾಡ್ಕೋಳಿ’ ಎಂದು ತನ್ನ ಪತ್ನಿ ಹೇಳಿದ್ದ ಮಾತಿಗೆ ಪುರುಷಾಧಿಪತ್ಯವೇ ಮೈವೆತ್ತಂತೆ ವರ್ತಿಸಿದ್ದ ಸುರೇಶನಿಗೆ ಆ ಮಾತು ನಿಜವಾಗಿಯೂ ಅರ್ಥವಾಗುವುದು ಗೌರಿಯ ಸಾಂಗತ್ಯ, ಸಂಬಂಧ ಮತ್ತು ಆಕೆಯ ನೋವಿನ ಪರಿಯಾಪದಿಂದ. ತನ್ನ ಬಾಳಸಂಗಾತಿ ಪ್ರೀತಿಯ ತವಕವನ್ನು ಅರಿತು ಬದಲಾಗುತ್ತಾನೆ. ತನ್ನ ಹೆಂಡತಿಯ ಪ್ರೀತಿಯನ್ನು ಅರಿತು ಆಕೆಯೊಂದಿಗೆ ಹೊಸ ಪ್ರೀತಿಯ ಬದುಕಿಗೇ ಮುಂದಾಗುತ್ತಾನೆ. ಗೌರಿ ತನ್ನ ದೈಹಿಕ ಬಯಕೆ ಪೂರೈಕೆಯಾದ ನಂತರ ಆಕೆಯೂ ಬದಲಾಗುತ್ತಾಳೆ, ಆದರೆ ಈ ಬದಲಾವಣೆ ಒಳ್ಳೆಯ ಪರಿಣಾಮಕಾರಿಯಾದ್ದಲ್ಲ, ಅದು ಕಾಮಕ್ಕೆ ಶರಣಾದಂತೆ ಕಾಣುತ್ತದೆ. ಗೌರಿ ಮನೆಯಲ್ಲಿ ಗಂಡನ ನೆನಪುಗಳನ್ನು ಹಾಗೆಯೇ ಉಳಿಸಿಕೊಂಡಿದ್ದ ಆಕೆ ಆ ನೆನಪುಗಳನ್ನು ನೆನಪಿಸದಂತೆ ವಾತಾವರಣವನ್ನೇ ಬದಲಾಯಿಸುತ್ತಾಳೆ. ಅಂದರೆ ದೈಹಿಕ ಬಯಕೆ ಪ್ರೀತಿಯನ್ನು ಮರೆಮಾಚುತ್ತದೆಯೇ? ಅಥವಾ ಕಾಮ ಎಂಬುದು ಪ್ರೀತಿಯನ್ನೂ ಮೀರಿದ್ದೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಕಾಮಕ್ಕಾಗಿ ಪ್ರೀತಿ ನಶಿಸಬಾರದು, ಎಲ್ಲವನ್ನೂ ಮೀರಿ ಬೆಳೆಯುವುದು ಪ್ರೀತಿ. ಅಂತಹ ಪ್ರೀತಿ ಕಾಮಕ್ಕೆ ಶರಣಾಗಬಾರದು. ಅದಷ್ಟೇ ಅಲ್ಲದೆ ಇಂತಹ ಬದಲಾವಣೆಗಳನ್ನೇ ಗುರಿಮಾಡಿ ಕೆಲವು ಮನಸ್ಥಿತಿಗಳು ಹೆಣ್ಣು ಅಗತ್ಯಕ್ಕೆ ತಕ್ಕಂತೆ ಬದಲಾಗಿಬಿಡುತ್ತಾಳೆ ಎಂದು ಬಿಂಬಿಸಿಬಿಡುವ ಅಪಾಯವೂ ಇದೆ.
ಇಡೀ ಸಿನಿಮಾ ಒಂಟಿ ಹೆಣ್ಣಿನ ಬದುಕು ಮತ್ತು ದೈಹಿಕ ಬಯಕೆಯ ಮೇಲೆಯೇ ಸಾಗುತ್ತದೆ. ಅದರಾಚೆಗೂ ಗಮನಿಸಬೇಕಾದ ಹಲವಾರು ವಿಚಾರಗಳು ಅದರೊಳಗಿವೆ. ಹೆಣ್ಣುತನ, ಕನ್ಯೆಯೆಂದು ಹೆಣ್ಣಿನ ಮೇಲೆ ಹೇರಲ್ಪಟ್ಟಿರುವ ಶೀಲವೆಂಬ ಹೆಮ್ಮರವನ್ನು ಎದುರಿಸುವ ಪ್ರಯತ್ನ ಈ ಚಿತ್ರದ್ದು. ಜೊತೆಗೆ ಹೆಣ್ಣು ಬಯಸುವ ಪ್ರೀತಿ, ಅಭಿವ್ಯಕ್ತಿ, ತಾನು ಕೆಲಸ ಮಾಡುವ ಸ್ಥಳಗಳಲ್ಲಿನ ಭದ್ರತೆ, ಒಂಟಿ ಹೆಣ್ಣಿಗೆ ಸಮಾಜದಲ್ಲಿ ಸಿಗುವ ಸ್ಥಾನಮಾನ, ವಿವಾಹ, ಸಂಬಂಧಗಳು, ಬದ್ಧತೆ ಹಾಗೂ ಹೆಣ್ಣಿಗೂ ಗಂಡಿನಂತೆಯೇ ಆಸೆ, ಆಕಾಂಕ್ಷೆ, ಆಲೋಚನೆಗಳಿವೆ ಎಂಬುದನ್ನು ಗುರುತಿಸಲೇಬೇಕು. ಕೆಲವು ದೃಶ್ಯಗಳ ಅಗತ್ಯವಿಲ್ಲದಿದ್ದರೂ ಗೌರಿ, ಸುರೇಶ, ಆತನ ಹೆಂಡತಿ. ಈ ಮೂರು ಪಾತ್ರಗಳು ಹೆಣ್ಣಿನ ಮನಸ್ಸಿನೊಳಗಿನ ತೊಳಲಾಟವನ್ನು ಈ ಚಿತ್ರದಲ್ಲಿ ಬಿಚ್ಚಿಟ್ಟಿವೆ. ಇಂದಿನ ಸಮಾಜಕ್ಕೆ ಅವಶ್ಯಕವಾದ ಸಿನಿಮಾ ನಾತಿಚರಾಮಿ. ಈ ಚಿತ್ರದ ಸೋಲು ಗೆಲುವು ನಿಂತಿರುವುದು ಬಾಕ್ಸ್ ಆಫೀಸಿನ ಕಲೆಕ್ಷನ್ ಮೇಲಲ್ಲ. ಸಿನಿಮಾ ನೋಡಿದ ಪ್ರತಿ ಗಂಡಸಿನ ಆತ್ಮವಿಮರ್ಶೆಯ ಮೇಲೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...