Homeಸಿನಿಮಾಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

- Advertisement -
- Advertisement -

ಸೋಮಶೇಖರ್ ಚಲ್ಯ |

ಧರ್ಮೇಚ, ಅರ್ಥೇಚ, ಕಾಮೇಚ, ಮೋಕ್ಷೇಚ ಅಹಂ ಇವಮ್ ನಾತಿಚರಾಮಿ, ಈ ಪದಗಳು ಭಾರತೀಯ ಸಮಾಜದಲ್ಲಿ ಹೆಣ್ಣಿನ ಮನಸ್ಸಿನಲ್ಲಿ ಎಂದೆಂದಿಗೂ ತಲ್ಲಣವನ್ನುಂಟು ಮಾಡುವಂತಹವು. ಹೆಣ್ಣು ದಾಂಪತ್ಯ ಜೀವನಕ್ಕೆ ಕಾಲಿರಿಸುವ ಗಳಿಗೆಯಿಂದ ಆಕೆ ಧರ್ಮ, ಹಣ, ಕಾಮ ಮತ್ತು ಮೋಕ್ಷದವರೆಗೂ ಆತ್ಮಾರ್ಥವಾಗಿ ತನ್ನ ಗಂಡನಿಗೆ ಅಧೀನಳು ಎಂದು ಈ ಸಾಲುಗಳು ಹೇಳುತ್ತವೆ. ಇದೆಲ್ಲದಕ್ಕೂ ಉತ್ತರ ಹುಡುಕುವ ಹಾಗೂ ಹೆಣ್ಣಿನ ಮನಸ್ಸಿನ ತೊಳಲಾಟವನ್ನು ಬಿಚ್ಚಿಡುವ ಪ್ರಯತ್ನವನ್ನು ನಾತಿಚರಾಮಿ ಚಿತ್ರ ತಂಡ ಮಾಡಿದೆ.
ಭಾರತದ ಸಂಸ್ಕøತಿ, ಸಂಪ್ರದಾಯ, ಕಟ್ಟುಪಾಡುಗಳೆಲ್ಲವೂ ನಾನಾರೀತಿಯಲ್ಲಿ ಹೆಣ್ಣಿನ ಮೇಲೆ ಹೇರಲ್ಪಟ್ಟಿವೆ. ಗಂಡಿಗಿರುವ ಸ್ವಾತಂತ್ರ್ಯ ಹೆಣ್ಣಿಗಿಲ್ಲ. ಹೆಣ್ಣು ಗಂಡಿನ ಗುಲಾಮಳಾಗಿಯೇ ಬದುಕಬೇಕು, ಇಂತಹ ಕಟ್ಟಲೆಗಳು ಮೀರಿ ಬದುಕ ಬಯಸುವ, ಪ್ರಯತ್ನಿಸುವ ಹೆಣ್ಣು ಸಮಾಜದಿಂದ ದೂಷಿಸಲ್ಪಡುತ್ತಾಳೆ. ಮಹಿಳೆ ತನ್ನ ಗಂಡನನ್ನು ಕಳೆದುಕೊಂಡರೆ ಆಕೆ ತನ್ನ ಉಳಿದ ಬದುಕನ್ನು ಆತನ ನೆನಪಿನಲ್ಲಿಯೇ ಒಂಟಿಯಾಗಿ ಕಳೆಯಬೇಕು, ಮತ್ತೊಂದು ಮದುವೆಯಾಗಬಾರದು. ಹೆಣ್ಣು ತಾನೆ ಒಂಟಿ ಜೀವನವನ್ನು ಆಯ್ಕೆ ಮಾಡಿಕೊಂಡರೆ ಸರಿ, ಅದರೆ ಅದೂ ಹೇರಲ್ಪಡುವ ವಿಚಾರವೇ. ವಿಧವೆ ತನ್ನ ಅಗತ್ಯಗಳನ್ನು ಹೇಳಿಕೊಳ್ಳುವಂತಿಲ್ಲ, ಹೇಳಿ ಪೂರೈಸಿಕೊಳ್ಳುವಂತಿಲ್ಲ. ಹಾಗೇನಾದರು ತನ್ನ ಆಸೆಗಳನ್ನು ಹೊರಹಾಕಿದರೆ ಆಕೆ ನಡತೆಗೆಟ್ಟವಳೆಂದು ಹಣೆಪಟ್ಟಿ ಕಟ್ಟಿಕೊಳ್ಳುತ್ತಾಳೆ.
ನಾತಿಚರಾಮಿ ಚಿತ್ರದ ಮೂಲಕ ನಿರ್ದೇಶಕ ಮಂಸೋರೆ, ಚಿಕ್ಕ ವಯಸ್ಸಿನಲ್ಲಿಯೇ ಗಂಡನನ್ನು ಕಳೆದುಕೊಂಡು ಬದುಕುತ್ತಿರುವ ಗೌರಿ ಹಾಗೂ ವಿವಾಹವಾಗಿ ಐದು ವರ್ಷ ಕಳೆದರೂ ಹೊಂದಾಣಿಕೆಯಿಲ್ಲದ ಸುರೇಶನ ಸಂಸಾರವನ್ನು ಕಥೆಯಾಗಿ ಇಟ್ಟುಕೊಂಡು ಬದುಕಿನೊಳಗಿನ ತಲ್ಲಣಗಳು, ಸಮಸ್ಯೆ ಮತ್ತು ಸಂಬಂಧಗಳ ನಡುವಿನ ವೈರುಧ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಒಂದೆಡೆ ಮದುವೆಯಾಗಿ ಕೆಲ ವರ್ಷಗಳಲ್ಲೇ ಜೀವವೇ ಆಗಿದ್ದ ಗಂಡನನ್ನು ಕಳೆದುಕೊಂಡ ಗೌರಿಗೆ ಮತ್ತೊಂದು ಮದುವೆ ಮಾಡುವ ಅವಸರದಲ್ಲ್ಲಿರುವ ಗೌರಿಯ ತಂದೆತಾಯಿ, ಗಂಡನ ನೆನಪಲ್ಲೇ ಬದುಕ ಬಯಸುವ ಗೌರಿ. ಮತ್ತೊಂದೆಡೆ ಸಂಸಾರದಲ್ಲಿ ಹೊಂದಾಣಿಕೆ ಕಾಣದೆ, ತಮ್ಮ ದೈಹಿಕ ಸುಖದಿಂದಾಚೆಗಿನ ಬಯಕೆಗಳು, ಪ್ರೀತಿ-ಸಂಬಂಧಗಳ ಅನುಬಂಧವಿಲ್ಲದೆ ಪೇಚಾಡುವ ಯುವ ದಂಪತಿಗಳು ಬದುಕಿನ ವೈರುಧ್ಯಕ್ಕೆ ಮುಖಾಮುಖಿಯಾಗಿವೆ.
ಪ್ರೀತಿಸಿ ಮದುವೆಯಾದ ಗಂಡನನ್ನು ಮರೆಯಲಾಗದೇ ಆತ ಬದುಕಿದ್ದ ದಿನಗಳಲ್ಲಿದ್ದಂತೆಯೇ ತನ್ನ ಮನೆಯನ್ನೂ, ಮನವನ್ನೂ ಹೊಂದಿಸಿಕೊಂಡು ಒಂಟಿ ಬದುಕನ್ನು ಆತನ ಪ್ರೀತಿಯ ನೆನಪಿನಲ್ಲೇ ಮುಂದುವರೆಸುವ ಗೌರಿಗೆ ಮತ್ತೊಬ್ಬ ಗಂಡನೊಂದಿಗೆ ಬದುಕುವ ಮನಸ್ಸಿಲ್ಲ. ಆದರೆ ಆಕೆಯ ಮನಸ್ಸಿನ ತಳಮಳ ಅದರಾಚೆಗೆ ಅವಳನ್ನು ಕಾಡುತ್ತಿದೆ, ಅ ತಳಮಳಕ್ಕೆ ಕಾರಣ ಹುಡುವುದರಲ್ಲಿ ಆಕೆಯ ಒದ್ದಾಟ. ವಿಧವೆಯೆಂಬ ಕಾರಣಕ್ಕೆ ಅಡ್ವಾಂಟೇಜ್ ಪಡೆಯಲು ಯತ್ನಿಸುವ ಸಹೋದ್ಯೋಗಿಗಳ ಕಾಮಾಂಧ ಮನಸ್ಥಿತಿಯನ್ನು ಎದುರಿಸಿ ಬದುಕುವ ದಿನನಿತ್ಯದ ಪರಿತಾಪ.
ಮದುವೆಯಾಗಿ ಗಂಡನೊಂದಿಗೆ ಪ್ರೀತಿಯಿಲ್ಲದ ಸಿಡುಕು ಮಾತಿನಿಂದ ಬೇಸತ್ತ ಸುರೇಶನ ಹೆಂಡತಿ ಗಂಡನ ಪ್ರೀತಿಯ ಅಪ್ಪುಗೆಗಾಗಿ, ಸಾಂಗತ್ಯದ ಭಾವನೆಯ ಮಾತುಗಳಿಗಾಗಿ ತವಕಿಸುತ್ತಾ ಕಾಯುವ ಹೆಣ್ಣು. ಹಳ್ಳಿ ಹುಡುಗಿಯನ್ನು ಮದುವೆಯಗಿಬಿಟ್ಟಿದ್ದೇನೆಂಬ ಕಾರಣಕ್ಕೆ ಅವಳನ್ನು ಕೀಳರಿಮೆಯಿಂದ ಕಸದಂತೆ ನೋಡುವ ಗಂಡ. ಈ ಎರಡು ವೈರುಧ್ಯಗಳು ಹೆಣ್ಣಿನ ಬದುಕಿನ ಒಟ್ಟು ಸಾರವನ್ನು ಬಿಂಬಿಸಿವೆ. ಆಕೆಯ ಪ್ರೀತಿಗೆ ಬೆಲೆಕೊಡದ ಗಂಡ ಆಕೆಯೊಂದಿಗೆ ದೈಹಿಕ ಸುಖವನ್ನು ಮಾತ್ರ ಪಡೆಯುತ್ತಾನೆ. ಆದರೆ ಪ್ರೀತಿಯ ಆಸರೆಯೇ ಇಲ್ಲದ ಆ ಸುಖ ಹೆಣ್ಣಿಗೆ ಅನಗತ್ಯ. ಇದೂ ಕೂಡ ಲೀಗಲ್ ದೌರ್ಜನ್ಯವೇ ಆಗಿದೆ. ಇಂದಿಗೂ ಎಷ್ಟೋ ಸಂಸಾರಗಳು ಇರುವುದೂ ಹೀಗೆಯೇ, ಈ ವ್ಯವಸ್ಥೆಯೊಳಗೆ ಹೇಳಿಕೊಳ್ಳಲಾಗುತ್ತಿಲ್ಲವಷ್ಟೇ. ‘ನನ್ನನ್ನೇನು ಟಿವಿ ಅಂದುಕೊಂಡಿದ್ದೀರಾ ಬೇಕಾದಾಗ ಆನ್ ಮಾಡಿ, ಬೇಡವಾದಾಗ ಆಫ್ ಮಾಡೋಕೆ’ ಎನ್ನುವ ಆ ಹೆಣ್ಣಿನ ಮಾತು ಈ ಸಮಾಜಕ್ಕೆ ಸವಾಲೊಡ್ಡಿದಂತೆ ತೋರುತ್ತದೆ.
ಒಬ್ಬ ವಿಧವೆ ತನ್ನ ಅವಶ್ಯಕತೆಗಳನ್ನು, ನೋವು ಸಂಕಟಗಳನ್ನು ವ್ಯಕ್ತಪಡಿಸಿದರೆ ಆಗುವ ಕಷ್ಟಗಳನ್ನು ಈ ಚಿತ್ರ ತೆರೆದಿಡುವುದರ ಜೊತೆಗೆ ಆಕೆ ಇನ್ನುಳಿದ ಬದುಕಿನ ಪಯಣದಲ್ಲಿ ತನ್ನ ಕಷ್ಟಗಳನ್ನು ಯಾರಿಗೆ ಹೇಳಿಕೊಳ್ಳಬೇಕು, ಯಾರಿಂದ ಸಹಾಯ ಪಡೆಯಬೇಕು, ಆಕೆಯ ನೋವಿಗೆ ಸ್ಪಂದಿಸುವವರಾರು, ಆಕೆಯ ಅಗತ್ಯಗಳನ್ನು ಪೂರೈಸುವವರಾರು ಎಂಬ ನೂರಾರು ಪ್ರಶ್ನೆಗಳನ್ನು ಮುಂದಿಡುತ್ತದೆ. ಗಂಡು ತನ್ನ ಬಯಕೆಗಳನ್ನು ತೀರಿಸಿಕೊಳ್ಳಲು ಮುಂದಾಗುವ ರೀತಿಯಲ್ಲಿ ಹೆಣ್ಣಿಗೆ ಸಾಧ್ಯವಿಲ್ಲ.
ಸ್ನೇಹಿತರ ಒತ್ತಾಯದ ಮೇರೆಗೆ ಆಪ್ತ ಸಮಾಲೋಚನೆ ಪಡೆಯುವ ಗೌರಿಗೆ ತನಗೆ ಬೇಕಿರುವುದೇನು ಎಂಬುದರ ಅರಿವಾಗುತ್ತದೆ. ಆದರೆ ತನ್ನ ಗಂಡನನ್ನು ಮರೆಯಲಾಗದ ಸಂದರ್ಭದಲ್ಲಿ ಆಕಸ್ಮಿಕವಾಗಿ ಪರಿಚಯವಾಗುವ ಸುರೇಶ ಅಗತ್ಯವೆನಿಸುತ್ತಾನೆ. ತನ್ನ ಬಯಕೆಯನ್ನು ಹೇಳಿಕೊಂಡ ಕ್ಷಣವೇ ಪ್ರತಿಕ್ರಿಯೆಯಾಗಿ ಬರುವ ಮಾತು ‘ನೀನು ಒಳ್ಳೆ ಸಂಸ್ಕಾರವುಳ್ಳ ಮನೆತನದಿಂದ ಬಂದ ಹೆಣ್ಣು ಅಂದುಕೊಂಡಿದ್ದೆ ಆದರೆ ನೀನು ಛೀ’ ಎಂಬುದು. ಇಲ್ಲಿ ಆಕೆ ಬಲವಂತವನ್ನೇನು ಮಾಡಿಲ್ಲ, ಆಕೆಯ ಬಯಕೆಯನ್ನಷ್ಟೇ ಹೇಳಿಕೊಂಡಿದ್ದಾಳೆ. ಅಷ್ಟಕ್ಕೇ ಅವಳ ಸಂಸ್ಕಾರ, ಸಂಸ್ಕøತಿ, ಮನೆತನವೆಲ್ಲವೂ ಕೀಳಾಗಿಹೋಗುತ್ತವೆ. ‘ನಮ್ ದೇಹದ ಬಯಕೆನಾ ಡೈರೆಕ್ಟ್ ಆಗಿ, ಇನ್‍ಡೈರೆಕ್ಟ್ ಆಗಿ ಎಷ್ಟೇ ಸೂಕ್ಷ್ಮವಾಗಿ ಹೇಳಿದ್ರು ನಾವ್ ಚೀಪ್ ಆಗ್ತಿವಿ ಅಲ್ವಾ?’ ಎನ್ನುವ ಡೈಲಾಗ್ ಸಮಾಜದ ಅಂತಃಸಾಕ್ಷಿಯನ್ನೂ, ನಮ್ಮ ಮನಃಸಾಕ್ಷಿಯನ್ನೂ ಪ್ರಶ್ನಿಸುತ್ತದೆ.
ತನ್ನ ಸಂಗಾತಿಯ ಬಯಕೆಯೇನೆಂಬುದನ್ನು ಅರಿಯುವುದರಲ್ಲಿ ವಿಫಲನಾಗಿದ್ದ, ತನ್ನ ಹೆಂಡತಿಗೆ ಪ್ರೀತಿ ಕೊಡಲಾಗದ ಸುರೇಶ, ಗೌರಿಯ ಬಯಕೆಯನ್ನು ಪೂರೈಸುತ್ತಾನೆಯಾದರೂ, ‘ಹೆಂಗಸ್ರೂ ಕೂಡ ಮನುಷ್ಯರು ಅನ್ನೋದ ಅರ್ಥ ಮಾಡ್ಕೋಳಿ’ ಎಂದು ತನ್ನ ಪತ್ನಿ ಹೇಳಿದ್ದ ಮಾತಿಗೆ ಪುರುಷಾಧಿಪತ್ಯವೇ ಮೈವೆತ್ತಂತೆ ವರ್ತಿಸಿದ್ದ ಸುರೇಶನಿಗೆ ಆ ಮಾತು ನಿಜವಾಗಿಯೂ ಅರ್ಥವಾಗುವುದು ಗೌರಿಯ ಸಾಂಗತ್ಯ, ಸಂಬಂಧ ಮತ್ತು ಆಕೆಯ ನೋವಿನ ಪರಿಯಾಪದಿಂದ. ತನ್ನ ಬಾಳಸಂಗಾತಿ ಪ್ರೀತಿಯ ತವಕವನ್ನು ಅರಿತು ಬದಲಾಗುತ್ತಾನೆ. ತನ್ನ ಹೆಂಡತಿಯ ಪ್ರೀತಿಯನ್ನು ಅರಿತು ಆಕೆಯೊಂದಿಗೆ ಹೊಸ ಪ್ರೀತಿಯ ಬದುಕಿಗೇ ಮುಂದಾಗುತ್ತಾನೆ. ಗೌರಿ ತನ್ನ ದೈಹಿಕ ಬಯಕೆ ಪೂರೈಕೆಯಾದ ನಂತರ ಆಕೆಯೂ ಬದಲಾಗುತ್ತಾಳೆ, ಆದರೆ ಈ ಬದಲಾವಣೆ ಒಳ್ಳೆಯ ಪರಿಣಾಮಕಾರಿಯಾದ್ದಲ್ಲ, ಅದು ಕಾಮಕ್ಕೆ ಶರಣಾದಂತೆ ಕಾಣುತ್ತದೆ. ಗೌರಿ ಮನೆಯಲ್ಲಿ ಗಂಡನ ನೆನಪುಗಳನ್ನು ಹಾಗೆಯೇ ಉಳಿಸಿಕೊಂಡಿದ್ದ ಆಕೆ ಆ ನೆನಪುಗಳನ್ನು ನೆನಪಿಸದಂತೆ ವಾತಾವರಣವನ್ನೇ ಬದಲಾಯಿಸುತ್ತಾಳೆ. ಅಂದರೆ ದೈಹಿಕ ಬಯಕೆ ಪ್ರೀತಿಯನ್ನು ಮರೆಮಾಚುತ್ತದೆಯೇ? ಅಥವಾ ಕಾಮ ಎಂಬುದು ಪ್ರೀತಿಯನ್ನೂ ಮೀರಿದ್ದೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಕಾಮಕ್ಕಾಗಿ ಪ್ರೀತಿ ನಶಿಸಬಾರದು, ಎಲ್ಲವನ್ನೂ ಮೀರಿ ಬೆಳೆಯುವುದು ಪ್ರೀತಿ. ಅಂತಹ ಪ್ರೀತಿ ಕಾಮಕ್ಕೆ ಶರಣಾಗಬಾರದು. ಅದಷ್ಟೇ ಅಲ್ಲದೆ ಇಂತಹ ಬದಲಾವಣೆಗಳನ್ನೇ ಗುರಿಮಾಡಿ ಕೆಲವು ಮನಸ್ಥಿತಿಗಳು ಹೆಣ್ಣು ಅಗತ್ಯಕ್ಕೆ ತಕ್ಕಂತೆ ಬದಲಾಗಿಬಿಡುತ್ತಾಳೆ ಎಂದು ಬಿಂಬಿಸಿಬಿಡುವ ಅಪಾಯವೂ ಇದೆ.
ಇಡೀ ಸಿನಿಮಾ ಒಂಟಿ ಹೆಣ್ಣಿನ ಬದುಕು ಮತ್ತು ದೈಹಿಕ ಬಯಕೆಯ ಮೇಲೆಯೇ ಸಾಗುತ್ತದೆ. ಅದರಾಚೆಗೂ ಗಮನಿಸಬೇಕಾದ ಹಲವಾರು ವಿಚಾರಗಳು ಅದರೊಳಗಿವೆ. ಹೆಣ್ಣುತನ, ಕನ್ಯೆಯೆಂದು ಹೆಣ್ಣಿನ ಮೇಲೆ ಹೇರಲ್ಪಟ್ಟಿರುವ ಶೀಲವೆಂಬ ಹೆಮ್ಮರವನ್ನು ಎದುರಿಸುವ ಪ್ರಯತ್ನ ಈ ಚಿತ್ರದ್ದು. ಜೊತೆಗೆ ಹೆಣ್ಣು ಬಯಸುವ ಪ್ರೀತಿ, ಅಭಿವ್ಯಕ್ತಿ, ತಾನು ಕೆಲಸ ಮಾಡುವ ಸ್ಥಳಗಳಲ್ಲಿನ ಭದ್ರತೆ, ಒಂಟಿ ಹೆಣ್ಣಿಗೆ ಸಮಾಜದಲ್ಲಿ ಸಿಗುವ ಸ್ಥಾನಮಾನ, ವಿವಾಹ, ಸಂಬಂಧಗಳು, ಬದ್ಧತೆ ಹಾಗೂ ಹೆಣ್ಣಿಗೂ ಗಂಡಿನಂತೆಯೇ ಆಸೆ, ಆಕಾಂಕ್ಷೆ, ಆಲೋಚನೆಗಳಿವೆ ಎಂಬುದನ್ನು ಗುರುತಿಸಲೇಬೇಕು. ಕೆಲವು ದೃಶ್ಯಗಳ ಅಗತ್ಯವಿಲ್ಲದಿದ್ದರೂ ಗೌರಿ, ಸುರೇಶ, ಆತನ ಹೆಂಡತಿ. ಈ ಮೂರು ಪಾತ್ರಗಳು ಹೆಣ್ಣಿನ ಮನಸ್ಸಿನೊಳಗಿನ ತೊಳಲಾಟವನ್ನು ಈ ಚಿತ್ರದಲ್ಲಿ ಬಿಚ್ಚಿಟ್ಟಿವೆ. ಇಂದಿನ ಸಮಾಜಕ್ಕೆ ಅವಶ್ಯಕವಾದ ಸಿನಿಮಾ ನಾತಿಚರಾಮಿ. ಈ ಚಿತ್ರದ ಸೋಲು ಗೆಲುವು ನಿಂತಿರುವುದು ಬಾಕ್ಸ್ ಆಫೀಸಿನ ಕಲೆಕ್ಷನ್ ಮೇಲಲ್ಲ. ಸಿನಿಮಾ ನೋಡಿದ ಪ್ರತಿ ಗಂಡಸಿನ ಆತ್ಮವಿಮರ್ಶೆಯ ಮೇಲೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...