Homeಸಿನಿಮಾಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

- Advertisement -
- Advertisement -

ಸೋಮಶೇಖರ್ ಚಲ್ಯ |

ಧರ್ಮೇಚ, ಅರ್ಥೇಚ, ಕಾಮೇಚ, ಮೋಕ್ಷೇಚ ಅಹಂ ಇವಮ್ ನಾತಿಚರಾಮಿ, ಈ ಪದಗಳು ಭಾರತೀಯ ಸಮಾಜದಲ್ಲಿ ಹೆಣ್ಣಿನ ಮನಸ್ಸಿನಲ್ಲಿ ಎಂದೆಂದಿಗೂ ತಲ್ಲಣವನ್ನುಂಟು ಮಾಡುವಂತಹವು. ಹೆಣ್ಣು ದಾಂಪತ್ಯ ಜೀವನಕ್ಕೆ ಕಾಲಿರಿಸುವ ಗಳಿಗೆಯಿಂದ ಆಕೆ ಧರ್ಮ, ಹಣ, ಕಾಮ ಮತ್ತು ಮೋಕ್ಷದವರೆಗೂ ಆತ್ಮಾರ್ಥವಾಗಿ ತನ್ನ ಗಂಡನಿಗೆ ಅಧೀನಳು ಎಂದು ಈ ಸಾಲುಗಳು ಹೇಳುತ್ತವೆ. ಇದೆಲ್ಲದಕ್ಕೂ ಉತ್ತರ ಹುಡುಕುವ ಹಾಗೂ ಹೆಣ್ಣಿನ ಮನಸ್ಸಿನ ತೊಳಲಾಟವನ್ನು ಬಿಚ್ಚಿಡುವ ಪ್ರಯತ್ನವನ್ನು ನಾತಿಚರಾಮಿ ಚಿತ್ರ ತಂಡ ಮಾಡಿದೆ.
ಭಾರತದ ಸಂಸ್ಕøತಿ, ಸಂಪ್ರದಾಯ, ಕಟ್ಟುಪಾಡುಗಳೆಲ್ಲವೂ ನಾನಾರೀತಿಯಲ್ಲಿ ಹೆಣ್ಣಿನ ಮೇಲೆ ಹೇರಲ್ಪಟ್ಟಿವೆ. ಗಂಡಿಗಿರುವ ಸ್ವಾತಂತ್ರ್ಯ ಹೆಣ್ಣಿಗಿಲ್ಲ. ಹೆಣ್ಣು ಗಂಡಿನ ಗುಲಾಮಳಾಗಿಯೇ ಬದುಕಬೇಕು, ಇಂತಹ ಕಟ್ಟಲೆಗಳು ಮೀರಿ ಬದುಕ ಬಯಸುವ, ಪ್ರಯತ್ನಿಸುವ ಹೆಣ್ಣು ಸಮಾಜದಿಂದ ದೂಷಿಸಲ್ಪಡುತ್ತಾಳೆ. ಮಹಿಳೆ ತನ್ನ ಗಂಡನನ್ನು ಕಳೆದುಕೊಂಡರೆ ಆಕೆ ತನ್ನ ಉಳಿದ ಬದುಕನ್ನು ಆತನ ನೆನಪಿನಲ್ಲಿಯೇ ಒಂಟಿಯಾಗಿ ಕಳೆಯಬೇಕು, ಮತ್ತೊಂದು ಮದುವೆಯಾಗಬಾರದು. ಹೆಣ್ಣು ತಾನೆ ಒಂಟಿ ಜೀವನವನ್ನು ಆಯ್ಕೆ ಮಾಡಿಕೊಂಡರೆ ಸರಿ, ಅದರೆ ಅದೂ ಹೇರಲ್ಪಡುವ ವಿಚಾರವೇ. ವಿಧವೆ ತನ್ನ ಅಗತ್ಯಗಳನ್ನು ಹೇಳಿಕೊಳ್ಳುವಂತಿಲ್ಲ, ಹೇಳಿ ಪೂರೈಸಿಕೊಳ್ಳುವಂತಿಲ್ಲ. ಹಾಗೇನಾದರು ತನ್ನ ಆಸೆಗಳನ್ನು ಹೊರಹಾಕಿದರೆ ಆಕೆ ನಡತೆಗೆಟ್ಟವಳೆಂದು ಹಣೆಪಟ್ಟಿ ಕಟ್ಟಿಕೊಳ್ಳುತ್ತಾಳೆ.
ನಾತಿಚರಾಮಿ ಚಿತ್ರದ ಮೂಲಕ ನಿರ್ದೇಶಕ ಮಂಸೋರೆ, ಚಿಕ್ಕ ವಯಸ್ಸಿನಲ್ಲಿಯೇ ಗಂಡನನ್ನು ಕಳೆದುಕೊಂಡು ಬದುಕುತ್ತಿರುವ ಗೌರಿ ಹಾಗೂ ವಿವಾಹವಾಗಿ ಐದು ವರ್ಷ ಕಳೆದರೂ ಹೊಂದಾಣಿಕೆಯಿಲ್ಲದ ಸುರೇಶನ ಸಂಸಾರವನ್ನು ಕಥೆಯಾಗಿ ಇಟ್ಟುಕೊಂಡು ಬದುಕಿನೊಳಗಿನ ತಲ್ಲಣಗಳು, ಸಮಸ್ಯೆ ಮತ್ತು ಸಂಬಂಧಗಳ ನಡುವಿನ ವೈರುಧ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಒಂದೆಡೆ ಮದುವೆಯಾಗಿ ಕೆಲ ವರ್ಷಗಳಲ್ಲೇ ಜೀವವೇ ಆಗಿದ್ದ ಗಂಡನನ್ನು ಕಳೆದುಕೊಂಡ ಗೌರಿಗೆ ಮತ್ತೊಂದು ಮದುವೆ ಮಾಡುವ ಅವಸರದಲ್ಲ್ಲಿರುವ ಗೌರಿಯ ತಂದೆತಾಯಿ, ಗಂಡನ ನೆನಪಲ್ಲೇ ಬದುಕ ಬಯಸುವ ಗೌರಿ. ಮತ್ತೊಂದೆಡೆ ಸಂಸಾರದಲ್ಲಿ ಹೊಂದಾಣಿಕೆ ಕಾಣದೆ, ತಮ್ಮ ದೈಹಿಕ ಸುಖದಿಂದಾಚೆಗಿನ ಬಯಕೆಗಳು, ಪ್ರೀತಿ-ಸಂಬಂಧಗಳ ಅನುಬಂಧವಿಲ್ಲದೆ ಪೇಚಾಡುವ ಯುವ ದಂಪತಿಗಳು ಬದುಕಿನ ವೈರುಧ್ಯಕ್ಕೆ ಮುಖಾಮುಖಿಯಾಗಿವೆ.
ಪ್ರೀತಿಸಿ ಮದುವೆಯಾದ ಗಂಡನನ್ನು ಮರೆಯಲಾಗದೇ ಆತ ಬದುಕಿದ್ದ ದಿನಗಳಲ್ಲಿದ್ದಂತೆಯೇ ತನ್ನ ಮನೆಯನ್ನೂ, ಮನವನ್ನೂ ಹೊಂದಿಸಿಕೊಂಡು ಒಂಟಿ ಬದುಕನ್ನು ಆತನ ಪ್ರೀತಿಯ ನೆನಪಿನಲ್ಲೇ ಮುಂದುವರೆಸುವ ಗೌರಿಗೆ ಮತ್ತೊಬ್ಬ ಗಂಡನೊಂದಿಗೆ ಬದುಕುವ ಮನಸ್ಸಿಲ್ಲ. ಆದರೆ ಆಕೆಯ ಮನಸ್ಸಿನ ತಳಮಳ ಅದರಾಚೆಗೆ ಅವಳನ್ನು ಕಾಡುತ್ತಿದೆ, ಅ ತಳಮಳಕ್ಕೆ ಕಾರಣ ಹುಡುವುದರಲ್ಲಿ ಆಕೆಯ ಒದ್ದಾಟ. ವಿಧವೆಯೆಂಬ ಕಾರಣಕ್ಕೆ ಅಡ್ವಾಂಟೇಜ್ ಪಡೆಯಲು ಯತ್ನಿಸುವ ಸಹೋದ್ಯೋಗಿಗಳ ಕಾಮಾಂಧ ಮನಸ್ಥಿತಿಯನ್ನು ಎದುರಿಸಿ ಬದುಕುವ ದಿನನಿತ್ಯದ ಪರಿತಾಪ.
ಮದುವೆಯಾಗಿ ಗಂಡನೊಂದಿಗೆ ಪ್ರೀತಿಯಿಲ್ಲದ ಸಿಡುಕು ಮಾತಿನಿಂದ ಬೇಸತ್ತ ಸುರೇಶನ ಹೆಂಡತಿ ಗಂಡನ ಪ್ರೀತಿಯ ಅಪ್ಪುಗೆಗಾಗಿ, ಸಾಂಗತ್ಯದ ಭಾವನೆಯ ಮಾತುಗಳಿಗಾಗಿ ತವಕಿಸುತ್ತಾ ಕಾಯುವ ಹೆಣ್ಣು. ಹಳ್ಳಿ ಹುಡುಗಿಯನ್ನು ಮದುವೆಯಗಿಬಿಟ್ಟಿದ್ದೇನೆಂಬ ಕಾರಣಕ್ಕೆ ಅವಳನ್ನು ಕೀಳರಿಮೆಯಿಂದ ಕಸದಂತೆ ನೋಡುವ ಗಂಡ. ಈ ಎರಡು ವೈರುಧ್ಯಗಳು ಹೆಣ್ಣಿನ ಬದುಕಿನ ಒಟ್ಟು ಸಾರವನ್ನು ಬಿಂಬಿಸಿವೆ. ಆಕೆಯ ಪ್ರೀತಿಗೆ ಬೆಲೆಕೊಡದ ಗಂಡ ಆಕೆಯೊಂದಿಗೆ ದೈಹಿಕ ಸುಖವನ್ನು ಮಾತ್ರ ಪಡೆಯುತ್ತಾನೆ. ಆದರೆ ಪ್ರೀತಿಯ ಆಸರೆಯೇ ಇಲ್ಲದ ಆ ಸುಖ ಹೆಣ್ಣಿಗೆ ಅನಗತ್ಯ. ಇದೂ ಕೂಡ ಲೀಗಲ್ ದೌರ್ಜನ್ಯವೇ ಆಗಿದೆ. ಇಂದಿಗೂ ಎಷ್ಟೋ ಸಂಸಾರಗಳು ಇರುವುದೂ ಹೀಗೆಯೇ, ಈ ವ್ಯವಸ್ಥೆಯೊಳಗೆ ಹೇಳಿಕೊಳ್ಳಲಾಗುತ್ತಿಲ್ಲವಷ್ಟೇ. ‘ನನ್ನನ್ನೇನು ಟಿವಿ ಅಂದುಕೊಂಡಿದ್ದೀರಾ ಬೇಕಾದಾಗ ಆನ್ ಮಾಡಿ, ಬೇಡವಾದಾಗ ಆಫ್ ಮಾಡೋಕೆ’ ಎನ್ನುವ ಆ ಹೆಣ್ಣಿನ ಮಾತು ಈ ಸಮಾಜಕ್ಕೆ ಸವಾಲೊಡ್ಡಿದಂತೆ ತೋರುತ್ತದೆ.
ಒಬ್ಬ ವಿಧವೆ ತನ್ನ ಅವಶ್ಯಕತೆಗಳನ್ನು, ನೋವು ಸಂಕಟಗಳನ್ನು ವ್ಯಕ್ತಪಡಿಸಿದರೆ ಆಗುವ ಕಷ್ಟಗಳನ್ನು ಈ ಚಿತ್ರ ತೆರೆದಿಡುವುದರ ಜೊತೆಗೆ ಆಕೆ ಇನ್ನುಳಿದ ಬದುಕಿನ ಪಯಣದಲ್ಲಿ ತನ್ನ ಕಷ್ಟಗಳನ್ನು ಯಾರಿಗೆ ಹೇಳಿಕೊಳ್ಳಬೇಕು, ಯಾರಿಂದ ಸಹಾಯ ಪಡೆಯಬೇಕು, ಆಕೆಯ ನೋವಿಗೆ ಸ್ಪಂದಿಸುವವರಾರು, ಆಕೆಯ ಅಗತ್ಯಗಳನ್ನು ಪೂರೈಸುವವರಾರು ಎಂಬ ನೂರಾರು ಪ್ರಶ್ನೆಗಳನ್ನು ಮುಂದಿಡುತ್ತದೆ. ಗಂಡು ತನ್ನ ಬಯಕೆಗಳನ್ನು ತೀರಿಸಿಕೊಳ್ಳಲು ಮುಂದಾಗುವ ರೀತಿಯಲ್ಲಿ ಹೆಣ್ಣಿಗೆ ಸಾಧ್ಯವಿಲ್ಲ.
ಸ್ನೇಹಿತರ ಒತ್ತಾಯದ ಮೇರೆಗೆ ಆಪ್ತ ಸಮಾಲೋಚನೆ ಪಡೆಯುವ ಗೌರಿಗೆ ತನಗೆ ಬೇಕಿರುವುದೇನು ಎಂಬುದರ ಅರಿವಾಗುತ್ತದೆ. ಆದರೆ ತನ್ನ ಗಂಡನನ್ನು ಮರೆಯಲಾಗದ ಸಂದರ್ಭದಲ್ಲಿ ಆಕಸ್ಮಿಕವಾಗಿ ಪರಿಚಯವಾಗುವ ಸುರೇಶ ಅಗತ್ಯವೆನಿಸುತ್ತಾನೆ. ತನ್ನ ಬಯಕೆಯನ್ನು ಹೇಳಿಕೊಂಡ ಕ್ಷಣವೇ ಪ್ರತಿಕ್ರಿಯೆಯಾಗಿ ಬರುವ ಮಾತು ‘ನೀನು ಒಳ್ಳೆ ಸಂಸ್ಕಾರವುಳ್ಳ ಮನೆತನದಿಂದ ಬಂದ ಹೆಣ್ಣು ಅಂದುಕೊಂಡಿದ್ದೆ ಆದರೆ ನೀನು ಛೀ’ ಎಂಬುದು. ಇಲ್ಲಿ ಆಕೆ ಬಲವಂತವನ್ನೇನು ಮಾಡಿಲ್ಲ, ಆಕೆಯ ಬಯಕೆಯನ್ನಷ್ಟೇ ಹೇಳಿಕೊಂಡಿದ್ದಾಳೆ. ಅಷ್ಟಕ್ಕೇ ಅವಳ ಸಂಸ್ಕಾರ, ಸಂಸ್ಕøತಿ, ಮನೆತನವೆಲ್ಲವೂ ಕೀಳಾಗಿಹೋಗುತ್ತವೆ. ‘ನಮ್ ದೇಹದ ಬಯಕೆನಾ ಡೈರೆಕ್ಟ್ ಆಗಿ, ಇನ್‍ಡೈರೆಕ್ಟ್ ಆಗಿ ಎಷ್ಟೇ ಸೂಕ್ಷ್ಮವಾಗಿ ಹೇಳಿದ್ರು ನಾವ್ ಚೀಪ್ ಆಗ್ತಿವಿ ಅಲ್ವಾ?’ ಎನ್ನುವ ಡೈಲಾಗ್ ಸಮಾಜದ ಅಂತಃಸಾಕ್ಷಿಯನ್ನೂ, ನಮ್ಮ ಮನಃಸಾಕ್ಷಿಯನ್ನೂ ಪ್ರಶ್ನಿಸುತ್ತದೆ.
ತನ್ನ ಸಂಗಾತಿಯ ಬಯಕೆಯೇನೆಂಬುದನ್ನು ಅರಿಯುವುದರಲ್ಲಿ ವಿಫಲನಾಗಿದ್ದ, ತನ್ನ ಹೆಂಡತಿಗೆ ಪ್ರೀತಿ ಕೊಡಲಾಗದ ಸುರೇಶ, ಗೌರಿಯ ಬಯಕೆಯನ್ನು ಪೂರೈಸುತ್ತಾನೆಯಾದರೂ, ‘ಹೆಂಗಸ್ರೂ ಕೂಡ ಮನುಷ್ಯರು ಅನ್ನೋದ ಅರ್ಥ ಮಾಡ್ಕೋಳಿ’ ಎಂದು ತನ್ನ ಪತ್ನಿ ಹೇಳಿದ್ದ ಮಾತಿಗೆ ಪುರುಷಾಧಿಪತ್ಯವೇ ಮೈವೆತ್ತಂತೆ ವರ್ತಿಸಿದ್ದ ಸುರೇಶನಿಗೆ ಆ ಮಾತು ನಿಜವಾಗಿಯೂ ಅರ್ಥವಾಗುವುದು ಗೌರಿಯ ಸಾಂಗತ್ಯ, ಸಂಬಂಧ ಮತ್ತು ಆಕೆಯ ನೋವಿನ ಪರಿಯಾಪದಿಂದ. ತನ್ನ ಬಾಳಸಂಗಾತಿ ಪ್ರೀತಿಯ ತವಕವನ್ನು ಅರಿತು ಬದಲಾಗುತ್ತಾನೆ. ತನ್ನ ಹೆಂಡತಿಯ ಪ್ರೀತಿಯನ್ನು ಅರಿತು ಆಕೆಯೊಂದಿಗೆ ಹೊಸ ಪ್ರೀತಿಯ ಬದುಕಿಗೇ ಮುಂದಾಗುತ್ತಾನೆ. ಗೌರಿ ತನ್ನ ದೈಹಿಕ ಬಯಕೆ ಪೂರೈಕೆಯಾದ ನಂತರ ಆಕೆಯೂ ಬದಲಾಗುತ್ತಾಳೆ, ಆದರೆ ಈ ಬದಲಾವಣೆ ಒಳ್ಳೆಯ ಪರಿಣಾಮಕಾರಿಯಾದ್ದಲ್ಲ, ಅದು ಕಾಮಕ್ಕೆ ಶರಣಾದಂತೆ ಕಾಣುತ್ತದೆ. ಗೌರಿ ಮನೆಯಲ್ಲಿ ಗಂಡನ ನೆನಪುಗಳನ್ನು ಹಾಗೆಯೇ ಉಳಿಸಿಕೊಂಡಿದ್ದ ಆಕೆ ಆ ನೆನಪುಗಳನ್ನು ನೆನಪಿಸದಂತೆ ವಾತಾವರಣವನ್ನೇ ಬದಲಾಯಿಸುತ್ತಾಳೆ. ಅಂದರೆ ದೈಹಿಕ ಬಯಕೆ ಪ್ರೀತಿಯನ್ನು ಮರೆಮಾಚುತ್ತದೆಯೇ? ಅಥವಾ ಕಾಮ ಎಂಬುದು ಪ್ರೀತಿಯನ್ನೂ ಮೀರಿದ್ದೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಕಾಮಕ್ಕಾಗಿ ಪ್ರೀತಿ ನಶಿಸಬಾರದು, ಎಲ್ಲವನ್ನೂ ಮೀರಿ ಬೆಳೆಯುವುದು ಪ್ರೀತಿ. ಅಂತಹ ಪ್ರೀತಿ ಕಾಮಕ್ಕೆ ಶರಣಾಗಬಾರದು. ಅದಷ್ಟೇ ಅಲ್ಲದೆ ಇಂತಹ ಬದಲಾವಣೆಗಳನ್ನೇ ಗುರಿಮಾಡಿ ಕೆಲವು ಮನಸ್ಥಿತಿಗಳು ಹೆಣ್ಣು ಅಗತ್ಯಕ್ಕೆ ತಕ್ಕಂತೆ ಬದಲಾಗಿಬಿಡುತ್ತಾಳೆ ಎಂದು ಬಿಂಬಿಸಿಬಿಡುವ ಅಪಾಯವೂ ಇದೆ.
ಇಡೀ ಸಿನಿಮಾ ಒಂಟಿ ಹೆಣ್ಣಿನ ಬದುಕು ಮತ್ತು ದೈಹಿಕ ಬಯಕೆಯ ಮೇಲೆಯೇ ಸಾಗುತ್ತದೆ. ಅದರಾಚೆಗೂ ಗಮನಿಸಬೇಕಾದ ಹಲವಾರು ವಿಚಾರಗಳು ಅದರೊಳಗಿವೆ. ಹೆಣ್ಣುತನ, ಕನ್ಯೆಯೆಂದು ಹೆಣ್ಣಿನ ಮೇಲೆ ಹೇರಲ್ಪಟ್ಟಿರುವ ಶೀಲವೆಂಬ ಹೆಮ್ಮರವನ್ನು ಎದುರಿಸುವ ಪ್ರಯತ್ನ ಈ ಚಿತ್ರದ್ದು. ಜೊತೆಗೆ ಹೆಣ್ಣು ಬಯಸುವ ಪ್ರೀತಿ, ಅಭಿವ್ಯಕ್ತಿ, ತಾನು ಕೆಲಸ ಮಾಡುವ ಸ್ಥಳಗಳಲ್ಲಿನ ಭದ್ರತೆ, ಒಂಟಿ ಹೆಣ್ಣಿಗೆ ಸಮಾಜದಲ್ಲಿ ಸಿಗುವ ಸ್ಥಾನಮಾನ, ವಿವಾಹ, ಸಂಬಂಧಗಳು, ಬದ್ಧತೆ ಹಾಗೂ ಹೆಣ್ಣಿಗೂ ಗಂಡಿನಂತೆಯೇ ಆಸೆ, ಆಕಾಂಕ್ಷೆ, ಆಲೋಚನೆಗಳಿವೆ ಎಂಬುದನ್ನು ಗುರುತಿಸಲೇಬೇಕು. ಕೆಲವು ದೃಶ್ಯಗಳ ಅಗತ್ಯವಿಲ್ಲದಿದ್ದರೂ ಗೌರಿ, ಸುರೇಶ, ಆತನ ಹೆಂಡತಿ. ಈ ಮೂರು ಪಾತ್ರಗಳು ಹೆಣ್ಣಿನ ಮನಸ್ಸಿನೊಳಗಿನ ತೊಳಲಾಟವನ್ನು ಈ ಚಿತ್ರದಲ್ಲಿ ಬಿಚ್ಚಿಟ್ಟಿವೆ. ಇಂದಿನ ಸಮಾಜಕ್ಕೆ ಅವಶ್ಯಕವಾದ ಸಿನಿಮಾ ನಾತಿಚರಾಮಿ. ಈ ಚಿತ್ರದ ಸೋಲು ಗೆಲುವು ನಿಂತಿರುವುದು ಬಾಕ್ಸ್ ಆಫೀಸಿನ ಕಲೆಕ್ಷನ್ ಮೇಲಲ್ಲ. ಸಿನಿಮಾ ನೋಡಿದ ಪ್ರತಿ ಗಂಡಸಿನ ಆತ್ಮವಿಮರ್ಶೆಯ ಮೇಲೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...