Homeಮುಖಪುಟಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

"ಚುನಾವಣೆಯಲ್ಲಿ ಸೋಲಿಸಲಾಗದ ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ" -ಕೇಜ್ರಿವಾಲ್

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಬಿಜೆಪಿ ಕಾರ್ಯಕರ್ತರು ತಮ್ಮ ಮನೆಯ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ’ ಎಂದಿದ್ದಾರೆ.

“ಪ್ರಪಂಚದ ಅತಿ ದೊಡ್ಡ ಪಕ್ಷ ಮತ್ತು ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿಯು ಈ ರೀತಿಯ ಗೂಂಡಾಗಿರಿ ನಡೆಸಿದರೆ ದೇಶದ ಯುವಜನರಿಗೆ ಯಾವ ಸಂದೇಶ ನೀಡಿದಂತಾಗುತ್ತದೆ? ಈ ರೀತಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಏಕೆಂದರೆ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ” ಕೇಜ್ರಿವಾಲ್ ಹೇಳಿದ್ದಾರೆ.

ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್‌ ನೀಡಿದ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು ಕೇಜ್ರಿವಾಲ್ ಮನಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸಿದೆ ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ) ಆರೋಪಿಸಿದ್ದು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ.

ಪಂಜಾಬ್ ವಿಧಾನಸಭೆಯಲ್ಲಿ ಎಎಪಿ ಗೆಲುವು ಬಿಜೆಪಿಯನ್ನು ಕಂಗೆಡಿಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪಂಜಾಬ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಈಗ ಅವರನ್ನು ಕೊಲ್ಲಲು ಬಯಸಿದೆ ಎಂದಿದ್ದಾರೆ.

ಬುಧವಾರ ಮುಖ್ಯಮಂತ್ರಿಯವರ ಮನೆ ಮೇಲೆ ನಡೆದ ದಾಳಿಯು, ಪೊಲೀಸರ ಸಹಾಯದಿಂದ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸುತ್ತಿದೆ ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಔಪಚಾರಿಕ ದೂರು ನೀಡುತ್ತೇವೆ ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಕೇಜ್ರಿವಾಲ್ ಮೇಲೆ ನಡೆದಿರುವ ಜೀವ ಬೆದರಿಕೆಯ ದಾಳಿ ಇದಾಗಿದೆ. ದಾಳಿಯನ್ನು ವ್ಯವಸ್ಥಿತವಾಗಿ ಯೋಜಿಸಲಾಗಿದೆ” ಎಂದು ಅವರು ದೂರಿದ್ದಾರೆ.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಸಂಸದರ ನೇತೃತ್ವದಲ್ಲಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿಯವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು. ಕಾಶ್ಮೀರಿ ಪಂಡಿತರ ದುಸ್ಥಿತಿಯನ್ನು ಕೇಜ್ರಿವಾಲ್ ಅಣಕಿಸಿದ್ದಾರೆಂದು ಆರೋಪಿಸಿ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಸೂರ್ಯ ಸೇರಿದಂತೆ ಕೆಲವು ಸದಸ್ಯರು ಸಿಎಂ ನಿವಾಸದ ಮುಖ್ಯ ಗೇಟ್ ತಲುಪಲು ಯಶಸ್ವಿಯಾದರು. ಸ್ಟೀಲ್ ಬಾಗಿಲಿಗೆ ಬಣ್ಣ ಎಸೆದರು. ಗೇಟ್ ಬಳಿ ಅಳವಡಿಸಲಾದ ಸಿಸಿಟಿವಿಯನ್ನು ಹಾನಿಗೊಳಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದಾರೆ.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದರು.

‘ಇದು ಕೇಜ್ರಿವಾಲ್ ಅವರನ್ನು ಕೊಲ್ಲುವ ಪ್ರಯತ್ನವಾಗಿದೆ’ ಎಂಬ ಸಿಸೋಡಿಯಾ ಹೇಳಿಕೆಯನ್ನು ಉಲ್ಲೇಖಿಸಿದ ಸೂರ್ಯ, “ನಾವು ಅವರನ್ನು (ಕೇಜ್ರಿವಾಲ್) ಭೇಟಿ ಮಾಡಿ ನಮ್ಮ ದುಃಖವನ್ನು ವ್ಯಕ್ತಪಡಿಸಲು ಬಯಸಿದ್ದೇವೆ. ಇದು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವ ಯತ್ನ ಎಂದಿರುವುದು ಉನ್ಮಾದ ಮತ್ತು ಕಲ್ಪನೆಯಿಂದ ಕೂಡಿದೆ” ಎಂದಿದ್ದಾರೆ.

ಎಎಪಿ ಶಾಸಕ ಅತಿಶಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಿಎಂ ಮನೆಗೆ ಹೇಗೆ ತಲುಪಲು ಸಾಧ್ಯವಾಯಿತು ಎಂದು ಕೇಳಿದ್ದಾರೆ. “ಶಾಕಿಂಗ್! ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಆಕ್ರೋಶ ವ್ಯಕ್ತಪಡಿಸಿದಾಗ ದೆಹಲಿ ಪೊಲೀಸರು ಏನು ಮಾಡುತ್ತಿದ್ದರು?” ಎಂದು ಟ್ವೀಟ್ ಮಾಡಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 70 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ಐಪಿ ಕಾಲೇಜು ಬಳಿಯ ಲಿಂಕ್ ರಸ್ತೆಯಲ್ಲಿರುವ ಸಿಎಂ ನಿವಾಸದ ಹೊರಗೆ ಬಿಜೆವೈಎಂನ ಸುಮಾರು 150-200 ಪ್ರತಿಭಟನಾಕಾರರು ಧರಣಿ ಆರಂಭಿಸಿದರು ಎಂದು ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಮಾಹಿತಿ ನೀಡಿದ್ದಾರೆ.

“ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ದೆಹಲಿ ಸಿಎಂ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಸಿಎಂ ನಿವಾಸದ ಹೊರಗೆ ಬಂದು ಗದ್ದಲ ಎಬ್ಬಿಸಿ ಘೋಷಣೆಗಳನ್ನು ಕೂಗಿದರು. ಸಿಎಂ ಮನೆ ಬಾಗಿಲಿಗೂ ಬಣ್ಣ ಎರಚಿದ್ದಾರೆ. ಬೂಮ್ ತಡೆಗೋಡೆ ಮತ್ತು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಧ್ವಂಸಗೊಳಿಸಲಾಗಿದೆ” ಎಂದು ಹೇಳಿದರು.

ಕಳೆದ ಗುರುವಾರ, ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ಕಾಶ್ಮೀರಿ ಪಂಡಿತರ ನಿರ್ಗಮನವನ್ನು “ದೊಡ್ಡ ದುರಂತ” ಮತ್ತು “ಅನ್ಯಾಯ” ಎಂದು ಕರೆದಿರುವ ಕೇಜ್ರಿವಾಲ್, “ಬಿಜೆಪಿಗೆ ಕಾಶ್ಮೀರ ಫೈಲ್‌ಗಳು ಮುಖ್ಯವಾಗಿದೆ. ನನಗೆ ಕಾಶ್ಮೀರಿ ಪಂಡಿತರು ಹೆಚ್ಚು ಮುಖ್ಯ. ಕಾಶ್ಮೀರದಿಂದ ಪಂಡಿತರು ವಲಸೆ ಬಂದಾಗ 1993ರಲ್ಲಿ 233 ಪಂಡಿತರು ದೆಹಲಿ ಸರ್ಕಾರಕ್ಕೆ ಗುತ್ತಿಗೆ ಶಿಕ್ಷಕರಾಗಿ ಸೇರಿದ್ದರು. ನಮ್ಮ ಸರ್ಕಾರ ಬಂದಾಗ ಅವರನ್ನೆಲ್ಲ ಖಾಯಂ ಮಾಡಿದೆವು. ನಾವು ಅವರ ಮೇಲೆ ಸಿನಿಮಾ ಮಾಡಿಲ್ಲ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...