Homeಮುಖಪುಟನಾವಿಬ್ಬರು, ನಮಗಿಬ್ಬರು ಎಂದು 4 ಜನರು ದೇಶ ಆಳುತ್ತಿದ್ದಾರೆ: ರಾಹುಲ್ ಗಾಂಧಿ

ನಾವಿಬ್ಬರು, ನಮಗಿಬ್ಬರು ಎಂದು 4 ಜನರು ದೇಶ ಆಳುತ್ತಿದ್ದಾರೆ: ರಾಹುಲ್ ಗಾಂಧಿ

- Advertisement -
- Advertisement -

ಕುಟುಂಬ ಯೋಜನೆಯೊಂದರ ಘೋಷಣೆಯಾದ ’ನಾವಿಬ್ಬರು ನಮಗಿಬ್ಬರು’ ಎಂಬ ಆಧಾರದಲ್ಲಿ, ದೇಶವನ್ನು ನಾಲ್ಕು ಜನರು ನಡೆಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿಗಳಾದ ಅಂಬಾನಿ-ಅದಾನಿಯ ಹೆಸರನ್ನು ಉಲ್ಲೇಖಿಸದೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಿನ್ನೆ ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರತಿಪಕ್ಷಗಳು ರೈತರ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿವೆ ಆದರೆ ಕೃಷಿ ಕಾನೂನುಗಳ ವಿಷಯ ಮತ್ತು ಉದ್ದೇಶದ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಇಂದು ನಾನು ಅವರನ್ನು ಸಂತೋಷಪಡಿಸಬೇಕು ಮತ್ತು ಕಾನೂನುಗಳ ವಿಷಯ ಮತ್ತು ಉದ್ದೇಶದ ಬಗ್ಗೆ ಮಾತನಾಡಬೇಕು ಭಾವಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

“ಮೊದಲ ಕಾನೂನು ದೇಶದಲ್ಲಿ ಎಲ್ಲಿ ಬೇಕಾದರೂ ಆಹಾರ ಧಾನ್ಯಗಳು, ಹಣ್ಣುಗಳು ಮತ್ತು ತರಕಾರಿಗಳನ್ನು ಖರೀದಿಸಬಹುದು ಎಂದು ಹೇಳುತ್ತದೆ. ದೇಶದಲ್ಲಿ ಎಲ್ಲಿಯಾದರೂ ಖರೀದಿ ಮಾಡಬಹುದಾಗಿದ್ದರೆ, ಮಂಡಿಗಳಿಗೆ ಯಾರು ಹೋಗುತ್ತಾರೆ? ಮೊದಲ ಕಾನೂನಿನ ವಿಷಯವೇನೆಂದರೆ ಮಂಡಿಗಳನ್ನು ಮುಗಿಸುವುದು” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ಜಗತ್ತಿನ ಸರ್ವಾಧಿಕಾರಿಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

“ಎರಡನೆಯ ಕಾನೂನಿನ ವಿಷಯವೆಂದರೆ ದೊಡ್ಡ ಉದ್ಯಮಿಗಳು ತಮಗೆ ಬೇಕಾದಷ್ಟು ಆಹಾರ ಧಾನ್ಯಗಳು, ಹಣ್ಣುಗಳು ಮತ್ತು ತರಕಾರಿಗಳನ್ನು ಅವರು ಬಯಸಿದಷ್ಟು ಸಂಗ್ರಹಿಸಬಹುದು. ಈ ಮೂಲಕ ಅಗತ್ಯ ಸರಕುಗಳ ಕಾಯ್ದೆಯನ್ನು ಕೊನೆಗೊಳಿಸಿ, ಭಾರತದಲ್ಲಿ ಅನಿಯಂತ್ರಿತ ಸಂಗ್ರಹಣೆ ಪ್ರಾರಂಭಿಸುವುದು ಎರಡನೆ ಕಾನೂನಿನ ವಿಷಯವಾಗಿದೆ

ಮೂರನೆಯ ಕಾನೂನಿನ ವಿಷಯವೆಂದರೆ, ಒಬ್ಬ ರೈತ ತನ್ನ ಬೆಳೆಗಳಿಗೆ ಸರಿಯಾದ ಬೆಲೆ ನೀಡುವಂತೆ ಭಾರತದ ದೊಡ್ಡ ಉದ್ಯಮಿ ಮುಂದೆ ಹೋದಾಗ, ಅವನನ್ನು ನ್ಯಾಯಾಲಯಕ್ಕೆ ಹೋಗದಂತೆ ತಡೆಯುವುದಾಗಿದೆ” ಎಂದು ರಾಹುಲ್ ಗಾಂಧಿ ಸದನದಲ್ಲಿ ಹೇಳಿದರು.

“ಕುಟುಂಬ ಯೋಜನೆಗಾಗಿ ‘ನಾವಿಬ್ಬರು ನಮಗಿಬ್ಬರು’ ಎಂಬ ಘೋಷಣೆ ಇತ್ತು. ಕೊರೊನಾ ಮತ್ತೊಂದು ರೂಪದಲ್ಲಿ ಬಂದಂತೆ ಈ ಘೋಷಣೆಯು ಬೇರೆ ರೂಪದಲ್ಲಿ ಬಂದಿದೆ. ’ನಾವಿಬ್ಬರು ನಮಗಿಬ್ಬರು’ ಎಂಬಂತೆ ದೇಶವನ್ನು 4 ಜನರು ನಡೆಸುತ್ತಿದ್ದಾರೆ. ಎಲ್ಲರಿಗೂ ಅವರ ಹೆಸರು ತಿಳಿದಿದೆ, ಇದು ‘ನಾವಿಬ್ಬರು ನಮಗಿಬ್ಬರು’ ಸರ್ಕಾರ” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...