Homeರಾಷ್ಟ್ರೀಯರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟರು

‘ಡೊಳ್ಳು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ

- Advertisement -
- Advertisement -

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ದೆಹಲಿಯಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ. ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸೂರರೈ ಪೊಟ್ರು ಮತ್ತು ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ನಲ್ಲಿನ ನಟನೆಗಾಗಿ ಸೂರ್ಯ ಮತ್ತು ಅಜಯ್ ದೇವಗನ್ ಅವರು ಹಂಚಿಕೊಂಡಿದ್ದಾರೆ.

ಸಿಂಪ್ಲಿಫ್ಲೈ ಡೆಕ್ಕನ್ ಸಂಸ್ಥಾಪಕ ಜಿ. ಗೋಪಿನಾಥ್ ಅವರ ಜೀವನವನ್ನು ಆಧರಿಸಿದ ‘ಸೂರರೈ ಪೊಟ್ರು’ ಅತ್ಯುತ್ತಮ ಚಲನಚಿತ್ರವೆಂದು ಆಯ್ಕೆಯಾಗಿದ್ದು, ಅದರಲ್ಲಿ ನಟಿಸಿದ್ದ ಅಪರ್ಣಾ ಬಾಲಮುರಳಿ ಅವರು ಅತ್ಯುತ್ತಮ ನಟಿ ಪ್ರಶಸ್ತಿ ವಿಜೇತರಾಗಿದ್ದಾರೆ. ಮರಾಠ ಯೋಧ ತಾನಾಜಿ ಮಾಲುಸರೆ ಕುರಿತ ಚಲನಚಿತ್ರವಾದ ‘ತಾನ್ಹಾಜಿ’ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಗೆದ್ದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜು ಮೆನನ್ ಅವರು ‘ಅಯ್ಯಪ್ಪನುಂ ಕೊಶಿಯುಂ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದರು. ‘ಶಿವರಂಜನಿಯಂ ಇನ್ನುಮ್ ಸಿಲಾ ಪೆಂಗಲುಮ್’ ಚಿತ್ರದಲ್ಲಿನ ನಟನೆಗಾಗಿ ‘ಲಕ್ಷ್ಮಿ ಪ್ರಿಯಾ’ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ನೀಡಲಾಯಿತು. ಈ ಚಿತ್ರವೂ ಇದು ಅತ್ಯುತ್ತಮ ತಮಿಳು ಚಲನಚಿತ್ರ ಮತ್ತು ಅತ್ಯುತ್ತಮ ಸಂಕಲನದ ಚಿತ್ರ ಪ್ರಶಸ್ತಿಯನ್ನೂ ಗೆದ್ದಿದೆ.

ಬಾಲನಟ ವರುಣ್ ಬುದ್ಧದೇವ್ ಅವರಿಗೆ ತೀರ್ಪುಗಾರರ ವಿಶೇಷ ಉಲ್ಲೇಖದೊಂದಿಗೆ ಟೂಲ್ಸಿದಾಸ್ ಜೂನಿಯರ್ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿಯನ್ನು ನೀಡಿದೆ.

ಇದನ್ನೂ ಓದಿ: ಹಿಪೊಕ್ರಸಿ ಜಗತ್ತಿನಲ್ಲಿ ಮತ್ತೊಂದು ಎದೆಯ ದನಿ ಸಾಯಿ ಪಲ್ಲವಿ

ಸಾಗರ್‌ ಪುರಾಣಿಕ್ ನಿರ್ದೇಶನದ ‘ಡೊಲ್ಲು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ಸ್ಥಳ ಧ್ವನಿ ಚಿತ್ರವಾಗಿ ಹೊರ ಹೊಮ್ಮಿದೆ. ಅವಿಜಾಟ್ರಿಕ್ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದಿದೆ. ಕಲರ್ ಫೋಟೋ ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿಯನ್ನು ಪಡೆದರೆ, ‘ತಿಂಕಲಜ್ಚಾ ನಿಶ್ಚಯಂ’ ಅತ್ಯುತ್ತಮ ಮಲಯಾಳಂ ಚಿತ್ರ ಪ್ರಶಸ್ತಿ ಪಡೆದಿದೆ.

68ನೇ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಮುಖ ಪಟ್ಟಿ ಇಲ್ಲಿದೆ

  • ಅತ್ಯುತ್ತಮ ಚಲನ ಚಿತ್ರ: ಸೂರರೈ ಪೋಟ್ರು
  • ಸಂಪೂರ್ಣ ಮನರಂಜನಾ ಚಿತ್ರ: ತಾನಾಜಿ: ದಿ ಅನ್‌ಸಂಗ್ ವಾರಿಯರ್
  • ಅತ್ಯುತ್ತಮ ನಟಿ: ಅಪರ್ಣ ಬಾಲಮುರಳಿ ( ಸೂರರೈ ಪೋಟ್ರು)
  • ಅತ್ಯುತ್ತಮ ನಟ: ಸೂರ್ಯ( ಸೂರರೈ ಪೋಟ್ರು) ಹಾಗೂ ಅಜಯ್ ದೇವಗನ್(ತಾನಾಜಿ: ದಿ ಅನ್‌ಸಂಗ್ ವಾರಿಯರ್)
  • ಅತ್ಯುತ್ತಮ ಚಿತ್ರಕಥೆ: ಸೂರರೈ ಪೋಟ್ರು 
  • ಅತ್ಯುತ್ತಮ ನಿರ್ದೇಶನ: ಸಚ್ಚಿದಾನಂದನ್ ಕೆಆರ್ (ಅಯ್ಯಪ್ಪನುಂ ಕೋಶಿಯುಂ)
  • ಅತ್ಯುತ್ತಮ ಡೈಲಾಗ್: ಮಂಡೇಲಾ(ತಮಿಳು)
  • ಅತ್ಯುತ್ತಮ ಪರಿಸರ ಸಂರಕ್ಷಣಾ ಸಿನಿಮಾ: ತಲೆದಂಡ (ಕನ್ನಡ)
  • ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
  • ಅತ್ಯುತ್ತಮ ಆತ್ಮಚರಿತ್ರೆ: ನಾದದ ನವನೀತ (ಗಿರೀಶ್ ಕಾಸರವಳ್ಳಿ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...