Homeರಾಷ್ಟ್ರೀಯರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟರು

‘ಡೊಳ್ಳು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ

- Advertisement -
- Advertisement -

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ದೆಹಲಿಯಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ. ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸೂರರೈ ಪೊಟ್ರು ಮತ್ತು ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ನಲ್ಲಿನ ನಟನೆಗಾಗಿ ಸೂರ್ಯ ಮತ್ತು ಅಜಯ್ ದೇವಗನ್ ಅವರು ಹಂಚಿಕೊಂಡಿದ್ದಾರೆ.

ಸಿಂಪ್ಲಿಫ್ಲೈ ಡೆಕ್ಕನ್ ಸಂಸ್ಥಾಪಕ ಜಿ. ಗೋಪಿನಾಥ್ ಅವರ ಜೀವನವನ್ನು ಆಧರಿಸಿದ ‘ಸೂರರೈ ಪೊಟ್ರು’ ಅತ್ಯುತ್ತಮ ಚಲನಚಿತ್ರವೆಂದು ಆಯ್ಕೆಯಾಗಿದ್ದು, ಅದರಲ್ಲಿ ನಟಿಸಿದ್ದ ಅಪರ್ಣಾ ಬಾಲಮುರಳಿ ಅವರು ಅತ್ಯುತ್ತಮ ನಟಿ ಪ್ರಶಸ್ತಿ ವಿಜೇತರಾಗಿದ್ದಾರೆ. ಮರಾಠ ಯೋಧ ತಾನಾಜಿ ಮಾಲುಸರೆ ಕುರಿತ ಚಲನಚಿತ್ರವಾದ ‘ತಾನ್ಹಾಜಿ’ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಗೆದ್ದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜು ಮೆನನ್ ಅವರು ‘ಅಯ್ಯಪ್ಪನುಂ ಕೊಶಿಯುಂ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದರು. ‘ಶಿವರಂಜನಿಯಂ ಇನ್ನುಮ್ ಸಿಲಾ ಪೆಂಗಲುಮ್’ ಚಿತ್ರದಲ್ಲಿನ ನಟನೆಗಾಗಿ ‘ಲಕ್ಷ್ಮಿ ಪ್ರಿಯಾ’ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ನೀಡಲಾಯಿತು. ಈ ಚಿತ್ರವೂ ಇದು ಅತ್ಯುತ್ತಮ ತಮಿಳು ಚಲನಚಿತ್ರ ಮತ್ತು ಅತ್ಯುತ್ತಮ ಸಂಕಲನದ ಚಿತ್ರ ಪ್ರಶಸ್ತಿಯನ್ನೂ ಗೆದ್ದಿದೆ.

ಬಾಲನಟ ವರುಣ್ ಬುದ್ಧದೇವ್ ಅವರಿಗೆ ತೀರ್ಪುಗಾರರ ವಿಶೇಷ ಉಲ್ಲೇಖದೊಂದಿಗೆ ಟೂಲ್ಸಿದಾಸ್ ಜೂನಿಯರ್ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿಯನ್ನು ನೀಡಿದೆ.

ಇದನ್ನೂ ಓದಿ: ಹಿಪೊಕ್ರಸಿ ಜಗತ್ತಿನಲ್ಲಿ ಮತ್ತೊಂದು ಎದೆಯ ದನಿ ಸಾಯಿ ಪಲ್ಲವಿ

ಸಾಗರ್‌ ಪುರಾಣಿಕ್ ನಿರ್ದೇಶನದ ‘ಡೊಲ್ಲು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ಸ್ಥಳ ಧ್ವನಿ ಚಿತ್ರವಾಗಿ ಹೊರ ಹೊಮ್ಮಿದೆ. ಅವಿಜಾಟ್ರಿಕ್ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದಿದೆ. ಕಲರ್ ಫೋಟೋ ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿಯನ್ನು ಪಡೆದರೆ, ‘ತಿಂಕಲಜ್ಚಾ ನಿಶ್ಚಯಂ’ ಅತ್ಯುತ್ತಮ ಮಲಯಾಳಂ ಚಿತ್ರ ಪ್ರಶಸ್ತಿ ಪಡೆದಿದೆ.

68ನೇ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಮುಖ ಪಟ್ಟಿ ಇಲ್ಲಿದೆ

  • ಅತ್ಯುತ್ತಮ ಚಲನ ಚಿತ್ರ: ಸೂರರೈ ಪೋಟ್ರು
  • ಸಂಪೂರ್ಣ ಮನರಂಜನಾ ಚಿತ್ರ: ತಾನಾಜಿ: ದಿ ಅನ್‌ಸಂಗ್ ವಾರಿಯರ್
  • ಅತ್ಯುತ್ತಮ ನಟಿ: ಅಪರ್ಣ ಬಾಲಮುರಳಿ ( ಸೂರರೈ ಪೋಟ್ರು)
  • ಅತ್ಯುತ್ತಮ ನಟ: ಸೂರ್ಯ( ಸೂರರೈ ಪೋಟ್ರು) ಹಾಗೂ ಅಜಯ್ ದೇವಗನ್(ತಾನಾಜಿ: ದಿ ಅನ್‌ಸಂಗ್ ವಾರಿಯರ್)
  • ಅತ್ಯುತ್ತಮ ಚಿತ್ರಕಥೆ: ಸೂರರೈ ಪೋಟ್ರು 
  • ಅತ್ಯುತ್ತಮ ನಿರ್ದೇಶನ: ಸಚ್ಚಿದಾನಂದನ್ ಕೆಆರ್ (ಅಯ್ಯಪ್ಪನುಂ ಕೋಶಿಯುಂ)
  • ಅತ್ಯುತ್ತಮ ಡೈಲಾಗ್: ಮಂಡೇಲಾ(ತಮಿಳು)
  • ಅತ್ಯುತ್ತಮ ಪರಿಸರ ಸಂರಕ್ಷಣಾ ಸಿನಿಮಾ: ತಲೆದಂಡ (ಕನ್ನಡ)
  • ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
  • ಅತ್ಯುತ್ತಮ ಆತ್ಮಚರಿತ್ರೆ: ನಾದದ ನವನೀತ (ಗಿರೀಶ್ ಕಾಸರವಳ್ಳಿ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....