Homeರಾಷ್ಟ್ರೀಯರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟರು

‘ಡೊಳ್ಳು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ

- Advertisement -
- Advertisement -

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ದೆಹಲಿಯಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ. ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸೂರರೈ ಪೊಟ್ರು ಮತ್ತು ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ನಲ್ಲಿನ ನಟನೆಗಾಗಿ ಸೂರ್ಯ ಮತ್ತು ಅಜಯ್ ದೇವಗನ್ ಅವರು ಹಂಚಿಕೊಂಡಿದ್ದಾರೆ.

ಸಿಂಪ್ಲಿಫ್ಲೈ ಡೆಕ್ಕನ್ ಸಂಸ್ಥಾಪಕ ಜಿ. ಗೋಪಿನಾಥ್ ಅವರ ಜೀವನವನ್ನು ಆಧರಿಸಿದ ‘ಸೂರರೈ ಪೊಟ್ರು’ ಅತ್ಯುತ್ತಮ ಚಲನಚಿತ್ರವೆಂದು ಆಯ್ಕೆಯಾಗಿದ್ದು, ಅದರಲ್ಲಿ ನಟಿಸಿದ್ದ ಅಪರ್ಣಾ ಬಾಲಮುರಳಿ ಅವರು ಅತ್ಯುತ್ತಮ ನಟಿ ಪ್ರಶಸ್ತಿ ವಿಜೇತರಾಗಿದ್ದಾರೆ. ಮರಾಠ ಯೋಧ ತಾನಾಜಿ ಮಾಲುಸರೆ ಕುರಿತ ಚಲನಚಿತ್ರವಾದ ‘ತಾನ್ಹಾಜಿ’ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಗೆದ್ದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜು ಮೆನನ್ ಅವರು ‘ಅಯ್ಯಪ್ಪನುಂ ಕೊಶಿಯುಂ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದರು. ‘ಶಿವರಂಜನಿಯಂ ಇನ್ನುಮ್ ಸಿಲಾ ಪೆಂಗಲುಮ್’ ಚಿತ್ರದಲ್ಲಿನ ನಟನೆಗಾಗಿ ‘ಲಕ್ಷ್ಮಿ ಪ್ರಿಯಾ’ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ನೀಡಲಾಯಿತು. ಈ ಚಿತ್ರವೂ ಇದು ಅತ್ಯುತ್ತಮ ತಮಿಳು ಚಲನಚಿತ್ರ ಮತ್ತು ಅತ್ಯುತ್ತಮ ಸಂಕಲನದ ಚಿತ್ರ ಪ್ರಶಸ್ತಿಯನ್ನೂ ಗೆದ್ದಿದೆ.

ಬಾಲನಟ ವರುಣ್ ಬುದ್ಧದೇವ್ ಅವರಿಗೆ ತೀರ್ಪುಗಾರರ ವಿಶೇಷ ಉಲ್ಲೇಖದೊಂದಿಗೆ ಟೂಲ್ಸಿದಾಸ್ ಜೂನಿಯರ್ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿಯನ್ನು ನೀಡಿದೆ.

ಇದನ್ನೂ ಓದಿ: ಹಿಪೊಕ್ರಸಿ ಜಗತ್ತಿನಲ್ಲಿ ಮತ್ತೊಂದು ಎದೆಯ ದನಿ ಸಾಯಿ ಪಲ್ಲವಿ

ಸಾಗರ್‌ ಪುರಾಣಿಕ್ ನಿರ್ದೇಶನದ ‘ಡೊಲ್ಲು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ಸ್ಥಳ ಧ್ವನಿ ಚಿತ್ರವಾಗಿ ಹೊರ ಹೊಮ್ಮಿದೆ. ಅವಿಜಾಟ್ರಿಕ್ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದಿದೆ. ಕಲರ್ ಫೋಟೋ ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿಯನ್ನು ಪಡೆದರೆ, ‘ತಿಂಕಲಜ್ಚಾ ನಿಶ್ಚಯಂ’ ಅತ್ಯುತ್ತಮ ಮಲಯಾಳಂ ಚಿತ್ರ ಪ್ರಶಸ್ತಿ ಪಡೆದಿದೆ.

68ನೇ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಮುಖ ಪಟ್ಟಿ ಇಲ್ಲಿದೆ

  • ಅತ್ಯುತ್ತಮ ಚಲನ ಚಿತ್ರ: ಸೂರರೈ ಪೋಟ್ರು
  • ಸಂಪೂರ್ಣ ಮನರಂಜನಾ ಚಿತ್ರ: ತಾನಾಜಿ: ದಿ ಅನ್‌ಸಂಗ್ ವಾರಿಯರ್
  • ಅತ್ಯುತ್ತಮ ನಟಿ: ಅಪರ್ಣ ಬಾಲಮುರಳಿ ( ಸೂರರೈ ಪೋಟ್ರು)
  • ಅತ್ಯುತ್ತಮ ನಟ: ಸೂರ್ಯ( ಸೂರರೈ ಪೋಟ್ರು) ಹಾಗೂ ಅಜಯ್ ದೇವಗನ್(ತಾನಾಜಿ: ದಿ ಅನ್‌ಸಂಗ್ ವಾರಿಯರ್)
  • ಅತ್ಯುತ್ತಮ ಚಿತ್ರಕಥೆ: ಸೂರರೈ ಪೋಟ್ರು 
  • ಅತ್ಯುತ್ತಮ ನಿರ್ದೇಶನ: ಸಚ್ಚಿದಾನಂದನ್ ಕೆಆರ್ (ಅಯ್ಯಪ್ಪನುಂ ಕೋಶಿಯುಂ)
  • ಅತ್ಯುತ್ತಮ ಡೈಲಾಗ್: ಮಂಡೇಲಾ(ತಮಿಳು)
  • ಅತ್ಯುತ್ತಮ ಪರಿಸರ ಸಂರಕ್ಷಣಾ ಸಿನಿಮಾ: ತಲೆದಂಡ (ಕನ್ನಡ)
  • ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
  • ಅತ್ಯುತ್ತಮ ಆತ್ಮಚರಿತ್ರೆ: ನಾದದ ನವನೀತ (ಗಿರೀಶ್ ಕಾಸರವಳ್ಳಿ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...