Homeರಾಷ್ಟ್ರೀಯರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸೂರರೈ ಪಟ್ರು ಅತ್ಯುತ್ತಮ ಚಿತ್ರ; ಸೂರ್ಯ, ಅಜಯ್ ದೇವಗನ್ ಮತ್ತು ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟರು

‘ಡೊಳ್ಳು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ

- Advertisement -
- Advertisement -

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ದೆಹಲಿಯಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ. ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸೂರರೈ ಪೊಟ್ರು ಮತ್ತು ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ನಲ್ಲಿನ ನಟನೆಗಾಗಿ ಸೂರ್ಯ ಮತ್ತು ಅಜಯ್ ದೇವಗನ್ ಅವರು ಹಂಚಿಕೊಂಡಿದ್ದಾರೆ.

ಸಿಂಪ್ಲಿಫ್ಲೈ ಡೆಕ್ಕನ್ ಸಂಸ್ಥಾಪಕ ಜಿ. ಗೋಪಿನಾಥ್ ಅವರ ಜೀವನವನ್ನು ಆಧರಿಸಿದ ‘ಸೂರರೈ ಪೊಟ್ರು’ ಅತ್ಯುತ್ತಮ ಚಲನಚಿತ್ರವೆಂದು ಆಯ್ಕೆಯಾಗಿದ್ದು, ಅದರಲ್ಲಿ ನಟಿಸಿದ್ದ ಅಪರ್ಣಾ ಬಾಲಮುರಳಿ ಅವರು ಅತ್ಯುತ್ತಮ ನಟಿ ಪ್ರಶಸ್ತಿ ವಿಜೇತರಾಗಿದ್ದಾರೆ. ಮರಾಠ ಯೋಧ ತಾನಾಜಿ ಮಾಲುಸರೆ ಕುರಿತ ಚಲನಚಿತ್ರವಾದ ‘ತಾನ್ಹಾಜಿ’ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಗೆದ್ದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜು ಮೆನನ್ ಅವರು ‘ಅಯ್ಯಪ್ಪನುಂ ಕೊಶಿಯುಂ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದರು. ‘ಶಿವರಂಜನಿಯಂ ಇನ್ನುಮ್ ಸಿಲಾ ಪೆಂಗಲುಮ್’ ಚಿತ್ರದಲ್ಲಿನ ನಟನೆಗಾಗಿ ‘ಲಕ್ಷ್ಮಿ ಪ್ರಿಯಾ’ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ನೀಡಲಾಯಿತು. ಈ ಚಿತ್ರವೂ ಇದು ಅತ್ಯುತ್ತಮ ತಮಿಳು ಚಲನಚಿತ್ರ ಮತ್ತು ಅತ್ಯುತ್ತಮ ಸಂಕಲನದ ಚಿತ್ರ ಪ್ರಶಸ್ತಿಯನ್ನೂ ಗೆದ್ದಿದೆ.

ಬಾಲನಟ ವರುಣ್ ಬುದ್ಧದೇವ್ ಅವರಿಗೆ ತೀರ್ಪುಗಾರರ ವಿಶೇಷ ಉಲ್ಲೇಖದೊಂದಿಗೆ ಟೂಲ್ಸಿದಾಸ್ ಜೂನಿಯರ್ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿಯನ್ನು ನೀಡಿದೆ.

ಇದನ್ನೂ ಓದಿ: ಹಿಪೊಕ್ರಸಿ ಜಗತ್ತಿನಲ್ಲಿ ಮತ್ತೊಂದು ಎದೆಯ ದನಿ ಸಾಯಿ ಪಲ್ಲವಿ

ಸಾಗರ್‌ ಪುರಾಣಿಕ್ ನಿರ್ದೇಶನದ ‘ಡೊಲ್ಲು’ ಚಿತ್ರವೂ ಕನ್ನಡದ ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ಸ್ಥಳ ಧ್ವನಿ ಚಿತ್ರವಾಗಿ ಹೊರ ಹೊಮ್ಮಿದೆ. ಅವಿಜಾಟ್ರಿಕ್ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದಿದೆ. ಕಲರ್ ಫೋಟೋ ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿಯನ್ನು ಪಡೆದರೆ, ‘ತಿಂಕಲಜ್ಚಾ ನಿಶ್ಚಯಂ’ ಅತ್ಯುತ್ತಮ ಮಲಯಾಳಂ ಚಿತ್ರ ಪ್ರಶಸ್ತಿ ಪಡೆದಿದೆ.

68ನೇ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಮುಖ ಪಟ್ಟಿ ಇಲ್ಲಿದೆ

  • ಅತ್ಯುತ್ತಮ ಚಲನ ಚಿತ್ರ: ಸೂರರೈ ಪೋಟ್ರು
  • ಸಂಪೂರ್ಣ ಮನರಂಜನಾ ಚಿತ್ರ: ತಾನಾಜಿ: ದಿ ಅನ್‌ಸಂಗ್ ವಾರಿಯರ್
  • ಅತ್ಯುತ್ತಮ ನಟಿ: ಅಪರ್ಣ ಬಾಲಮುರಳಿ ( ಸೂರರೈ ಪೋಟ್ರು)
  • ಅತ್ಯುತ್ತಮ ನಟ: ಸೂರ್ಯ( ಸೂರರೈ ಪೋಟ್ರು) ಹಾಗೂ ಅಜಯ್ ದೇವಗನ್(ತಾನಾಜಿ: ದಿ ಅನ್‌ಸಂಗ್ ವಾರಿಯರ್)
  • ಅತ್ಯುತ್ತಮ ಚಿತ್ರಕಥೆ: ಸೂರರೈ ಪೋಟ್ರು 
  • ಅತ್ಯುತ್ತಮ ನಿರ್ದೇಶನ: ಸಚ್ಚಿದಾನಂದನ್ ಕೆಆರ್ (ಅಯ್ಯಪ್ಪನುಂ ಕೋಶಿಯುಂ)
  • ಅತ್ಯುತ್ತಮ ಡೈಲಾಗ್: ಮಂಡೇಲಾ(ತಮಿಳು)
  • ಅತ್ಯುತ್ತಮ ಪರಿಸರ ಸಂರಕ್ಷಣಾ ಸಿನಿಮಾ: ತಲೆದಂಡ (ಕನ್ನಡ)
  • ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
  • ಅತ್ಯುತ್ತಮ ಆತ್ಮಚರಿತ್ರೆ: ನಾದದ ನವನೀತ (ಗಿರೀಶ್ ಕಾಸರವಳ್ಳಿ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...