Homeಮುಖಪುಟರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ಎಸ್.ಪಿ. ಜನನಾಥನ್‌ ನಿಧನ

ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ಎಸ್.ಪಿ. ಜನನಾಥನ್‌ ನಿಧನ

ಅವರು ಇದುವರೆಗೂ ಇಯಾರ್‌‌ಕೈ, ಇ, ಪೇರಾನ್‌ಮೈ, ಪುರಂಬೊಕ್ಕು ಮತ್ತು ಲಾಬಮ್ ಸೇರಿದಂತೆ ಒಟ್ಟು 5 ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.

- Advertisement -
- Advertisement -

ಸಿನಿಮಾ ನಿರ್ದೇಶಕ ಎಸ್.‌ಪಿ. ಜನನಾಥನ್(61) ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಹೃದಯಾಘಾತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೇ 7, 1959 ರಂದು ಜನಿಸಿರುವ ಜನನಾಥನ್ 2003 ರಲ್ಲಿ ‘ಇಯಾರ್ಕೈ’ ಸಿನಿಮಾದೊಂದಿಗೆ ಸಿನಿಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದರು. ಇದು ತಮಿಳು ಭಾಷೆಯಲ್ಲಿ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ವಿಜಯ್ ಸೇತುಪತಿ ಮತ್ತು ಶ್ರುತಿ ಹಾಸನ್ ಅಭಿನಯದ ಲಾಬಮ್ ಅವರ ಕೊನೆಯ ಸಿನಿಮಾವಾಗಿದ್ದು, ಈ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ. ಅವರು ಇದುವರೆಗೂ ಇಯಾರ್‌‌ಕೈ, , ಪೆರಾನ್‌ಮೈ, ಪುರಂಬೊಕ್ಕು ಮತ್ತು ಲಾಬಮ್ ಸೇರಿದಂತೆ ಒಟ್ಟು 5 ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಲಾಬಮ್ ಸಿನಿಮಾ ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಟಿಕ್ರಿ ಗಡಿಯಲ್ಲಿ ಪ್ರಾಣಬಿಟ್ಟ ಮತ್ತೊಬ್ಬ ರೈತ!

ಸಂಗೀತ ಸಂಯೋಜಕ ಡಿ. ಇಮ್ಮನ್, “ಲಾಬಮ್ ನಿರ್ದೇಶಕ ಎಸ್.‌ಪಿ. ಜನನಾಥನ್‌ ಇನ್ನಿಲ್ಲ. ಕಾಕತಾಲಿಯವೆಂದರೆ, ಅವರ ಸ್ಪೂರ್ತಿಯಾಗಿರುವ ಸಾಮಾಜಿಕ ಕ್ರಾಂತಿಕಾರಿ ಕಾರ್ಲ್‌ಮಾರ್ಕ್ಸ್ ಮರಣಿಸಿದ ದಿನದಂದೆ ಅವರು ನಿಧನರಾಗಿದ್ದಾರೆ. ನಾವು ನಿಮ್ಮನ್ನು ಮಿಸ್‌ ಮಾಡುತ್ತಿದ್ದೇವೆ ಸರ್‌” ಎಂದು ಹೇಳಿದ್ದಾರೆ.

ನಿರ್ದೇಶಕ ಜನನಾಥನ್‌ ಅವರ ನಿಧನಕ್ಕೆ ಲಾಬಮ್ ನಟ ವಿಜಯ್ ಸೇತುಪತಿ ನಮನ ಸಲ್ಲಿಸಿದ್ದಾರೆ.

ನಟಿ ಶ್ರುತಿ ಹಾಸನ್, “ಭಾರವಾದ ಹೃದಯದಿಂದ ನಾವು ಎಸ್.‌ಪಿ. ಜನನಾಥನ್ ಸರ್ ಅವರಿಗೆ ವಿದಾಯ ಹೇಳುತ್ತೇವೆ. ನಿಮ್ಮೊಂದಿಗೆ ಕೆಲಸ ಮಾಡಿರುವುದರಲ್ಲಿ ಖುಷಿಯಿದೆ. ನಮ್ಮ ನೆನಪುಗಳಲ್ಲಿ ನೀವು ಯಾವಾಗಲೂ ಇರುತ್ತೀರಿ! ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.

ನಟ ಹರೀಶ್ ಕಲ್ಯಾಣ್ ಕೂಡ ಟ್ವಿಟರ್ ಮೂಲಕ ಗೌರವ ಸಲ್ಲಿಸಿದ್ದು, “ಎಸ್.‌ಪಿ. ಜನನಾಥನ್ ಸರ್ ಅವರ ನಿಧನದ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ಅವರು ಅತ್ಯಂತ ಸಂವೇದನಾಶೀಲ ಮತ್ತು ಸಾಮಾಜಿಕವಾಗಿ ಜವಾಬ್ದಾರಿಯುತ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಕೆ ಟಾಕೀಸ್ 02: ಅರ್ಥಕ್ಕಿಂತಲೂ ಅನುಭವಕ್ಕೆ ಸಿಕ್ಕುವ – ಮಾನವೀಯತೆಯನ್ನು ಕಲಕುವ ಥಿಯೋಡೊರಸ್ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...