Homeಮುಖಪುಟಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ...

ಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ ಮಂಡಳಿ

- Advertisement -
- Advertisement -

ಯಾವುದೆ ಸೂಕ್ತ ಕಾರಣ ನೀಡದೆ ಬಸವನಗುಡಿ ನ್ಯಾಷನಲ್ ಕಾಲೇಜಿನಿಂದ ಡಾ. ರವಿಕುಮಾರ್ ಬಾಗಿ ಅವರನ್ನು ವರ್ಗಾವಣೆ ಮಾಡಿದ್ದೂ ಅಲ್ಲದೆ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ‘ಸೇವಾ ಧೃಡೀಕರಣ’ ನೀಡದೆ ಕಿರುಕುಳ ನೀಡುತ್ತಿದ್ದ ಆಡಳಿತ ಮಂಡಳಿಯು ಇಂದು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ‘ವರ್ಗಾವಣೆ ಆದೇಶವನ್ನು ಹಿಂಪಡೆದು, ರವಿಯವರನ್ನು ಸ್ವಸ್ಥಾನದಲ್ಲೇ ಮುಂದುವರಿಸಲಾಗುವುದು. ಜತೆಗೆ, ಅವರ ಪಿಎಚ್‌ಡಿ ಮಾರ್ಗದರ್ಶನಕ್ಕೆ ಶೀಘ್ರದಲ್ಲೇ ಸೇವಾ ದೃಢೀಕರಣವನ್ನೂ ನೀಡಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಸುಬ್ರಮಣ್ಯ ಅವರು ಇಂದು ಘೋಷಿಸಿದರು.

ಡಾ. ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯ ಹಾಗೂ ದಲಿತ ಎಂಬ ಕಾರಣಕ್ಕೆ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಚಿಂತಕರಾದ ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ದಸಂಸ ಹಿರಿಯ ನಾಯಕರಾದ ಮಾವಳ್ಳಿ ಶಂಕರ್, ಬಿ.ಸಿ. ಬಸವರಾಜು ಸೇರಿಸಂತೆ 50ಕ್ಕೂ ಹೆಚ್ಚು ಜನ ಪ್ರಾಧ್ಯಾಪಕರು, ಪತ್ರಕರ್ತರು, ರಂಗಕರ್ಮಿಗಳು ಫೆ.2ರಂದು ಕಾಲೇಜಿನ ಆಡಳಿತ ಮಂಡಳಿ ಜತೆಗೆ ಮಾತುಕತೆ ನಡೆಸಿದ್ದರು. ಸೋಮವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದ ಆಡಳಿತ ಮಂಡಳಿ, ಹಿಂಬಡ್ತಿಯನ್ನು ಮಾತ್ರ ರದ್ದುಗೊಳಿಸಿ, ಜಯನಗರ ಪದವಿ ಕಾಲೇಜಿಗೆ ವರ್ಗಾವಣೆ ಆದೇಶವನ್ನು ಮುಂದುವರಿಸಿತ್ತು. ಆದರೆ, ಜಯನಗರ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಇಲ್ಲದಿರುವ ಕಾರಣಕ್ಕೆ, ಡಾ. ರವಿ ಅವರಿಗೆ ಬೆಂಗಳೂರು ವಿವಿ ನೀಡಿದ್ದ ಸಂಶೋಧನ ಮಾರ್ಗದರ್ಶಕರ ಸ್ಥಾನ ಕೈತಪ್ಪುವ ಬಗ್ಗೆ ಇಂದು ನಡೆದ ಸಭೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇಂದು ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಜತೆಗೆ ನಡೆದ ಸಭೆಯಲ್ಲಿ ಪ್ರೊ. ಬಿ.ಸಿ. ಬಸವರಾಜು, ಶ್ರೀಪಾದ್ ಭಟ್, ಹಿರಿಯ ವಕೀಲರಾದ ಡಾ. ಸಿ.ಎಸ್. ದ್ವಾರಕನಾಥ್, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್ ಅವರು  ಆಡಳಿತ ಮಂಡಳಿಯಿಂದ ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೊಮ್ಮೆ ವಿವರವಾಗಿ ಮನವರಿಕೆ ಮಾಡಿಕೊಟ್ಟರು. ಅಂತಿಮವಾಗಿ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯು ತನ್ನ ನಿರ್ಧಾರವನ್ನು ವಾಪಸ್ ಪಡೆಯುವುದಾಗಿ ಹೇಳಿದೆ.

ಸಭೆಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಬ್ರಮಣ್ಯ, ‘ಹಲವು ರೀತಿಯ ಸಂವಹನ ಕೊರತೆಯಿಂದಾಗಿ ಈ ಗೊಂದಲ ಉಂಟಾಗಿದೆ; ರವಿ ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ನಿರ್ಧಾರ ಮಾಡುತ್ತೇವೆ. ಹಿಂದಿನ ಮಾತುಕತೆ ನಂತರ ನಾವು ಅವರನ್ನು ಪಿಯು ಕಾಲೇಜಿನಿಂದ ಪದವಿ ಕಾಲೇಜಿಗೆ ನೇಮಿಸಿದ್ದೇವೆ. ಈಗ ನೀವು ಹೇಳುತ್ತಿರುವ ಹಲವು ವಿಚಾರಗಳು ನನ್ನ ಗಮನಕ್ಕೆ ಬಂದಿರಲಿಲ್ಲ; ಮಾತುಕತೆ ಮಾಡಿಕೊಂಡು ನಮ್ಮ ಹಂತದಲ್ಲೇ ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು, ಇಲ್ಲೀವರಗೆ ನಡೆದಿರುವುದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅವರನ್ನು ಇದೇ ಕಾಲೇಜಿನಲ್ಲಿ ಉಳಿಸಿಕೊಳ್ಳುತ್ತೇವೆ. ಆಡಳಿತ ಮಂಡಳಿಯಲ್ಲಿರುವ ನಾವೆಲ್ಲರೂ ಬೇರೆಬೇರೆ ಕ್ಷೇತ್ರದಿಂದ ಬಂದವರು, ನಮಗೆ ಈ ತಾಂತ್ರಿಕ ವಿಚಾರಗಳು ಬಗ್ಗೆ ತಿಳಿದಿರಲಿಲ್ಲ’ ಎಂದರು.

ಇದೀಗ ಕನ್ನಡ ಪ್ರಾಧ್ಯಾಪಕ ಡಾ. ರವಿಕುಮಾರ್ ಬಾಗಿ ಅವರ ಹಿಂಬಡ್ತಿ ಹಾಗೂ ವರ್ಗಾವಣೆ ಆದೇಶವನ್ನು ಆಡಳಿತ ಮಂಡಳಿ ವಾಪಸ್ ಪಡೆದಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.

ಡಾ. ರವಿ ಬಾಗಿಗೆ ಜನ ಬೆಂಬಲ:

ಡಾ. ರವಿ ಬಾಗಿ ಅವರಿಗೆ ಆಗುತ್ತಿದ್ದ ಅನ್ಯಾಯವನ್ನು ಪ್ರಶ್ನಿಸಲಿ ಇಂದು ನೂರಾರು ಜನ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮುಂದೆ ಸೇರಿದ್ದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಡಾ. ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ಮಾವಳ್ಳಿ ಶಂಕರ್, ಡಾ. ಸಿ.ಎಸ್. ದ್ವಾರಕನಾಥ್, ಜಿ.ಎನ್, ನಾಗರಾಜ್, ಪಿಚ್ಚಳ್ಳಿ ಶ್ರೀನಿವಾಸ್, ಬಿ.ಸಿ. ಬಸವರಾಜು ಸೇರಿದಂತೆ ಹಲವು ಪ್ರಮುಖರು ಆಗಮಿಸಿ ಗಂಟೆಗಳ ಕಾಲ ಬಿಸಿಲಿನಲ್ಲೆ ಕಾದರು. ಜೊತೆಗೆ, ದಲಿತ ಸಂಘಟನೆ, ರಂಗಭೂಮಿ, ವಿದ್ಯಾರ್ಥಿ ಮುಖಂಡರು, ಕಾರ್ಮಿಕ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಿ ರವಿ ಬಾಗಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ವರ್ತನೆ ಖಂಡಿಸಿ ಪ್ರತಿಭಟಿಸಿದ ಡಾ. ರವಿ ಬಾಗಿ

ನ್ಯಾಷನಲ್ ಕಾಲೇಜು ಆಡಳಿ ಮಂಡಳಿ ಜತೆಗೆ ಶಾಂತಿಯುತವಾಗಿಯೆ ಮಾತನಾಡಲು ಆಗಮಿಸಿದ್ದ ಹಿರಿಯ ಸಾಹಿತಿಗಳನ್ನು ಗಂಟೆಗಳ ಕಾಲ ಹೊರಗಡೆಯೇ ನಿಲ್ಲಿಸಲಾಗಿತ್ತು. ಯಾರನ್ನೂ ಕಾಲೇಜಿನ ಒಳಗೆ ಬಿಡದಂತೆ ಗೇಟಿಗೆ ಬೀಗ ಹಾಕಿಸಿದ್ದ ಆಡಳಿತ ಮಂಡಳಿಯ ‘ಕೆಲವರು’, ಪೊಲೀಸರನ್ನು ಕರೆಸಿ ಕಾಲೇಜು ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು. ಸಾಲದ್ದಕ್ಕೆ ವಯಸ್ಸಾಗಿ ನಿಲ್ಲಲೂ ಕಷ್ಟಪಡುತ್ತಿದ್ದ ಅಧ್ಯಕ್ಷರಾದ ಡಾ. ಸುಬ್ರಮಣ್ಯ ಅವರನ್ನು ಕಾಲೇಜಿನ ಹೊರಗಡೆ ಕರೆತಂದು ನ್ಯಾಯ ಕೇಳಲು ಬಂದಿದ್ದವರ ಮನವೊಲಿಸಲು ಪ್ರಯತ್ನಿಸಿದರು. ನ್ಯಾಷನಲ್ ಕಾಲೇಜು ಸ್ಥಾಪಕರಾದ ಎಚ್‌. ನರಸಿಂಹಯ್ಯ ಅವರ ಒಡನಾಡಿಗಳಾಗಿದ್ದ ಹಲವರು ಇಂದು ರವಿ ಬಾಗಿ ಪರವಾಗಿ ನ್ಯಾಯ ಕೇಳಲು ಬಂದಿದ್ದರು. ಜೊತೆಗೆ, ಸಾಹಿತ್ಯ, ಶೈಕ್ಷಣಿಕ, ಹೋರಾಟ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿರುವವರ ಬಗ್ಗೆ ಆಡಳಿತ ಮಂಡಳಿಗೆ ಕಿಂಚಿತ್ತೂ ತಿಳುವಳಿಕೆ ಇಲ್ಲದಿರುವುದು ಕಂಡುಬಂತು. ಪದಾಧಿಕಾರಿಗಳ ಈ ವರ್ತನೆ ಅಲ್ಲಿಗೆ ಬಂದಿದ್ದ ಹಿರಿಯ ಅಸಮಾಧಾನಕ್ಕೂ ಕಾರಣವಾಯಿತು.

ಬಸವನಗುಡಿಯಲ್ಲಿರುವ ನ್ಯಾಷನಲ್‌ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದ ಡಾ. ರವಿಕುಮಾರ್ ಬಾಗಿ ಅವರಿಗೆ ಹಿಂಬಡ್ತಿ ನೀಡಲಾಗಿತ್ತು. ಅಲ್ಲದೆ, ರವಿಕುಮಾರ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಲು ಸೇವಾ ಧೃಢೀಕರಣ ಪತ್ರವನ್ನೂ ಕಾಲೇಜಿನ ಪ್ರಾಂಶುಪಾಲರು ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ.

ರವಿಕುಮಾರ್ ಅವರ ಮೇಲೆ ಕಾಲೇಜು ಆಡಳಿತ ಮಂಡಳಿ ಎಸಗಿದ ಧೋರಣೆಯನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಕಾಲೇಜಿನ ಎದುರು ಫೆಬ್ರವರಿ 2ರಂದು ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ್ದರು. ಅಲ್ಲದೆ, ಫೆಬ್ರವರಿ 6ರ ಮಂಗಳವಾರ ಕೂಡ ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಮಣಿದಿರುವ ಕಾಲೇಜು ಆಡಳಿತ ಮಂಡಳಿ, ಪ್ರಾಧ್ಯಾಪಕ ರವಿಕುಮಾರ್ ಅವರಿಗೆ ನೀಡಿದ್ದ ಹಿಂಬಡ್ತಿಯನ್ನು ವಾಪಸ್‌ ಪಡೆದಿದೆ. ಪದವಿ ಬಸವನಗುಡಿ ಕಾಲೇಜಿನಲ್ಲಿಯೇ ಅವರನ್ನು ಮುಂದುವರಿಸಲು ಒಪ್ಪಿಕೊಂಡಿದೆ.

‘ಕಳೆದ 13 ವರ್ಷದಿಂದ ಬಸವನಗುಡಿಯ ಪದವಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪದವಿ, ಸ್ನಾತಕೋತ್ತರ ಪದವಿಗಳಿಗೆ ಬೋಧಿಸಿದ್ದೇನೆ. ಪಿಎಚ್‌ಡಿ ಪದವಿಯನ್ನು ಹೊಂದಿದ್ದೇನೆ. ಸ್ನಾತಕೋತ್ತರ ಕೇಂದ್ರದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾವ ಸೂಚನೆಯನ್ನು ನೀಡದೆ ಏಕಾಏಕಿ ದುರುದ್ದೇಶದಿಂದ ಜಯನಗರ ನ್ಯಾಷನಲ್ ಪಿಯುಸಿ ಕಾಲೇಜಿಗೆ ಹಿಂಬಡ್ತಿ ನೀಡಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಪ್ರಾಂಶುಪಾಲರಾದ ವೈ.ಸಿ.ಕಮಲಾ ಅವರು ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳಲ್ಲಿ ನೇರವಾಗಿಯೇ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದಾರೆ’ ಎಂದು ಪ್ರಾಧ್ಯಾಪಕ ರವಿಕುಮಾರ್ ತಮ್ಮ ನೋವು ತೋಡಿಕೊಂಡಿದ್ದರು.

ಇದನ್ನೂ ಓದಿ; ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...