Homeಮುಖಪುಟಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ...

ಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ ಮಂಡಳಿ

- Advertisement -
- Advertisement -

ಯಾವುದೆ ಸೂಕ್ತ ಕಾರಣ ನೀಡದೆ ಬಸವನಗುಡಿ ನ್ಯಾಷನಲ್ ಕಾಲೇಜಿನಿಂದ ಡಾ. ರವಿಕುಮಾರ್ ಬಾಗಿ ಅವರನ್ನು ವರ್ಗಾವಣೆ ಮಾಡಿದ್ದೂ ಅಲ್ಲದೆ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ‘ಸೇವಾ ಧೃಡೀಕರಣ’ ನೀಡದೆ ಕಿರುಕುಳ ನೀಡುತ್ತಿದ್ದ ಆಡಳಿತ ಮಂಡಳಿಯು ಇಂದು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ‘ವರ್ಗಾವಣೆ ಆದೇಶವನ್ನು ಹಿಂಪಡೆದು, ರವಿಯವರನ್ನು ಸ್ವಸ್ಥಾನದಲ್ಲೇ ಮುಂದುವರಿಸಲಾಗುವುದು. ಜತೆಗೆ, ಅವರ ಪಿಎಚ್‌ಡಿ ಮಾರ್ಗದರ್ಶನಕ್ಕೆ ಶೀಘ್ರದಲ್ಲೇ ಸೇವಾ ದೃಢೀಕರಣವನ್ನೂ ನೀಡಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಸುಬ್ರಮಣ್ಯ ಅವರು ಇಂದು ಘೋಷಿಸಿದರು.

ಡಾ. ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯ ಹಾಗೂ ದಲಿತ ಎಂಬ ಕಾರಣಕ್ಕೆ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಚಿಂತಕರಾದ ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ದಸಂಸ ಹಿರಿಯ ನಾಯಕರಾದ ಮಾವಳ್ಳಿ ಶಂಕರ್, ಬಿ.ಸಿ. ಬಸವರಾಜು ಸೇರಿಸಂತೆ 50ಕ್ಕೂ ಹೆಚ್ಚು ಜನ ಪ್ರಾಧ್ಯಾಪಕರು, ಪತ್ರಕರ್ತರು, ರಂಗಕರ್ಮಿಗಳು ಫೆ.2ರಂದು ಕಾಲೇಜಿನ ಆಡಳಿತ ಮಂಡಳಿ ಜತೆಗೆ ಮಾತುಕತೆ ನಡೆಸಿದ್ದರು. ಸೋಮವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದ ಆಡಳಿತ ಮಂಡಳಿ, ಹಿಂಬಡ್ತಿಯನ್ನು ಮಾತ್ರ ರದ್ದುಗೊಳಿಸಿ, ಜಯನಗರ ಪದವಿ ಕಾಲೇಜಿಗೆ ವರ್ಗಾವಣೆ ಆದೇಶವನ್ನು ಮುಂದುವರಿಸಿತ್ತು. ಆದರೆ, ಜಯನಗರ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಇಲ್ಲದಿರುವ ಕಾರಣಕ್ಕೆ, ಡಾ. ರವಿ ಅವರಿಗೆ ಬೆಂಗಳೂರು ವಿವಿ ನೀಡಿದ್ದ ಸಂಶೋಧನ ಮಾರ್ಗದರ್ಶಕರ ಸ್ಥಾನ ಕೈತಪ್ಪುವ ಬಗ್ಗೆ ಇಂದು ನಡೆದ ಸಭೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇಂದು ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಜತೆಗೆ ನಡೆದ ಸಭೆಯಲ್ಲಿ ಪ್ರೊ. ಬಿ.ಸಿ. ಬಸವರಾಜು, ಶ್ರೀಪಾದ್ ಭಟ್, ಹಿರಿಯ ವಕೀಲರಾದ ಡಾ. ಸಿ.ಎಸ್. ದ್ವಾರಕನಾಥ್, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್ ಅವರು  ಆಡಳಿತ ಮಂಡಳಿಯಿಂದ ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೊಮ್ಮೆ ವಿವರವಾಗಿ ಮನವರಿಕೆ ಮಾಡಿಕೊಟ್ಟರು. ಅಂತಿಮವಾಗಿ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯು ತನ್ನ ನಿರ್ಧಾರವನ್ನು ವಾಪಸ್ ಪಡೆಯುವುದಾಗಿ ಹೇಳಿದೆ.

ಸಭೆಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಬ್ರಮಣ್ಯ, ‘ಹಲವು ರೀತಿಯ ಸಂವಹನ ಕೊರತೆಯಿಂದಾಗಿ ಈ ಗೊಂದಲ ಉಂಟಾಗಿದೆ; ರವಿ ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ನಿರ್ಧಾರ ಮಾಡುತ್ತೇವೆ. ಹಿಂದಿನ ಮಾತುಕತೆ ನಂತರ ನಾವು ಅವರನ್ನು ಪಿಯು ಕಾಲೇಜಿನಿಂದ ಪದವಿ ಕಾಲೇಜಿಗೆ ನೇಮಿಸಿದ್ದೇವೆ. ಈಗ ನೀವು ಹೇಳುತ್ತಿರುವ ಹಲವು ವಿಚಾರಗಳು ನನ್ನ ಗಮನಕ್ಕೆ ಬಂದಿರಲಿಲ್ಲ; ಮಾತುಕತೆ ಮಾಡಿಕೊಂಡು ನಮ್ಮ ಹಂತದಲ್ಲೇ ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು, ಇಲ್ಲೀವರಗೆ ನಡೆದಿರುವುದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅವರನ್ನು ಇದೇ ಕಾಲೇಜಿನಲ್ಲಿ ಉಳಿಸಿಕೊಳ್ಳುತ್ತೇವೆ. ಆಡಳಿತ ಮಂಡಳಿಯಲ್ಲಿರುವ ನಾವೆಲ್ಲರೂ ಬೇರೆಬೇರೆ ಕ್ಷೇತ್ರದಿಂದ ಬಂದವರು, ನಮಗೆ ಈ ತಾಂತ್ರಿಕ ವಿಚಾರಗಳು ಬಗ್ಗೆ ತಿಳಿದಿರಲಿಲ್ಲ’ ಎಂದರು.

ಇದೀಗ ಕನ್ನಡ ಪ್ರಾಧ್ಯಾಪಕ ಡಾ. ರವಿಕುಮಾರ್ ಬಾಗಿ ಅವರ ಹಿಂಬಡ್ತಿ ಹಾಗೂ ವರ್ಗಾವಣೆ ಆದೇಶವನ್ನು ಆಡಳಿತ ಮಂಡಳಿ ವಾಪಸ್ ಪಡೆದಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.

ಡಾ. ರವಿ ಬಾಗಿಗೆ ಜನ ಬೆಂಬಲ:

ಡಾ. ರವಿ ಬಾಗಿ ಅವರಿಗೆ ಆಗುತ್ತಿದ್ದ ಅನ್ಯಾಯವನ್ನು ಪ್ರಶ್ನಿಸಲಿ ಇಂದು ನೂರಾರು ಜನ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮುಂದೆ ಸೇರಿದ್ದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಡಾ. ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ಮಾವಳ್ಳಿ ಶಂಕರ್, ಡಾ. ಸಿ.ಎಸ್. ದ್ವಾರಕನಾಥ್, ಜಿ.ಎನ್, ನಾಗರಾಜ್, ಪಿಚ್ಚಳ್ಳಿ ಶ್ರೀನಿವಾಸ್, ಬಿ.ಸಿ. ಬಸವರಾಜು ಸೇರಿದಂತೆ ಹಲವು ಪ್ರಮುಖರು ಆಗಮಿಸಿ ಗಂಟೆಗಳ ಕಾಲ ಬಿಸಿಲಿನಲ್ಲೆ ಕಾದರು. ಜೊತೆಗೆ, ದಲಿತ ಸಂಘಟನೆ, ರಂಗಭೂಮಿ, ವಿದ್ಯಾರ್ಥಿ ಮುಖಂಡರು, ಕಾರ್ಮಿಕ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಿ ರವಿ ಬಾಗಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ವರ್ತನೆ ಖಂಡಿಸಿ ಪ್ರತಿಭಟಿಸಿದ ಡಾ. ರವಿ ಬಾಗಿ

ನ್ಯಾಷನಲ್ ಕಾಲೇಜು ಆಡಳಿ ಮಂಡಳಿ ಜತೆಗೆ ಶಾಂತಿಯುತವಾಗಿಯೆ ಮಾತನಾಡಲು ಆಗಮಿಸಿದ್ದ ಹಿರಿಯ ಸಾಹಿತಿಗಳನ್ನು ಗಂಟೆಗಳ ಕಾಲ ಹೊರಗಡೆಯೇ ನಿಲ್ಲಿಸಲಾಗಿತ್ತು. ಯಾರನ್ನೂ ಕಾಲೇಜಿನ ಒಳಗೆ ಬಿಡದಂತೆ ಗೇಟಿಗೆ ಬೀಗ ಹಾಕಿಸಿದ್ದ ಆಡಳಿತ ಮಂಡಳಿಯ ‘ಕೆಲವರು’, ಪೊಲೀಸರನ್ನು ಕರೆಸಿ ಕಾಲೇಜು ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು. ಸಾಲದ್ದಕ್ಕೆ ವಯಸ್ಸಾಗಿ ನಿಲ್ಲಲೂ ಕಷ್ಟಪಡುತ್ತಿದ್ದ ಅಧ್ಯಕ್ಷರಾದ ಡಾ. ಸುಬ್ರಮಣ್ಯ ಅವರನ್ನು ಕಾಲೇಜಿನ ಹೊರಗಡೆ ಕರೆತಂದು ನ್ಯಾಯ ಕೇಳಲು ಬಂದಿದ್ದವರ ಮನವೊಲಿಸಲು ಪ್ರಯತ್ನಿಸಿದರು. ನ್ಯಾಷನಲ್ ಕಾಲೇಜು ಸ್ಥಾಪಕರಾದ ಎಚ್‌. ನರಸಿಂಹಯ್ಯ ಅವರ ಒಡನಾಡಿಗಳಾಗಿದ್ದ ಹಲವರು ಇಂದು ರವಿ ಬಾಗಿ ಪರವಾಗಿ ನ್ಯಾಯ ಕೇಳಲು ಬಂದಿದ್ದರು. ಜೊತೆಗೆ, ಸಾಹಿತ್ಯ, ಶೈಕ್ಷಣಿಕ, ಹೋರಾಟ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿರುವವರ ಬಗ್ಗೆ ಆಡಳಿತ ಮಂಡಳಿಗೆ ಕಿಂಚಿತ್ತೂ ತಿಳುವಳಿಕೆ ಇಲ್ಲದಿರುವುದು ಕಂಡುಬಂತು. ಪದಾಧಿಕಾರಿಗಳ ಈ ವರ್ತನೆ ಅಲ್ಲಿಗೆ ಬಂದಿದ್ದ ಹಿರಿಯ ಅಸಮಾಧಾನಕ್ಕೂ ಕಾರಣವಾಯಿತು.

ಬಸವನಗುಡಿಯಲ್ಲಿರುವ ನ್ಯಾಷನಲ್‌ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದ ಡಾ. ರವಿಕುಮಾರ್ ಬಾಗಿ ಅವರಿಗೆ ಹಿಂಬಡ್ತಿ ನೀಡಲಾಗಿತ್ತು. ಅಲ್ಲದೆ, ರವಿಕುಮಾರ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಲು ಸೇವಾ ಧೃಢೀಕರಣ ಪತ್ರವನ್ನೂ ಕಾಲೇಜಿನ ಪ್ರಾಂಶುಪಾಲರು ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ.

ರವಿಕುಮಾರ್ ಅವರ ಮೇಲೆ ಕಾಲೇಜು ಆಡಳಿತ ಮಂಡಳಿ ಎಸಗಿದ ಧೋರಣೆಯನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಕಾಲೇಜಿನ ಎದುರು ಫೆಬ್ರವರಿ 2ರಂದು ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ್ದರು. ಅಲ್ಲದೆ, ಫೆಬ್ರವರಿ 6ರ ಮಂಗಳವಾರ ಕೂಡ ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಮಣಿದಿರುವ ಕಾಲೇಜು ಆಡಳಿತ ಮಂಡಳಿ, ಪ್ರಾಧ್ಯಾಪಕ ರವಿಕುಮಾರ್ ಅವರಿಗೆ ನೀಡಿದ್ದ ಹಿಂಬಡ್ತಿಯನ್ನು ವಾಪಸ್‌ ಪಡೆದಿದೆ. ಪದವಿ ಬಸವನಗುಡಿ ಕಾಲೇಜಿನಲ್ಲಿಯೇ ಅವರನ್ನು ಮುಂದುವರಿಸಲು ಒಪ್ಪಿಕೊಂಡಿದೆ.

‘ಕಳೆದ 13 ವರ್ಷದಿಂದ ಬಸವನಗುಡಿಯ ಪದವಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪದವಿ, ಸ್ನಾತಕೋತ್ತರ ಪದವಿಗಳಿಗೆ ಬೋಧಿಸಿದ್ದೇನೆ. ಪಿಎಚ್‌ಡಿ ಪದವಿಯನ್ನು ಹೊಂದಿದ್ದೇನೆ. ಸ್ನಾತಕೋತ್ತರ ಕೇಂದ್ರದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾವ ಸೂಚನೆಯನ್ನು ನೀಡದೆ ಏಕಾಏಕಿ ದುರುದ್ದೇಶದಿಂದ ಜಯನಗರ ನ್ಯಾಷನಲ್ ಪಿಯುಸಿ ಕಾಲೇಜಿಗೆ ಹಿಂಬಡ್ತಿ ನೀಡಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಪ್ರಾಂಶುಪಾಲರಾದ ವೈ.ಸಿ.ಕಮಲಾ ಅವರು ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳಲ್ಲಿ ನೇರವಾಗಿಯೇ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದಾರೆ’ ಎಂದು ಪ್ರಾಧ್ಯಾಪಕ ರವಿಕುಮಾರ್ ತಮ್ಮ ನೋವು ತೋಡಿಕೊಂಡಿದ್ದರು.

ಇದನ್ನೂ ಓದಿ; ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...