Homeಮುಖಪುಟಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ...

ಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ ಮಂಡಳಿ

- Advertisement -
- Advertisement -

ಯಾವುದೆ ಸೂಕ್ತ ಕಾರಣ ನೀಡದೆ ಬಸವನಗುಡಿ ನ್ಯಾಷನಲ್ ಕಾಲೇಜಿನಿಂದ ಡಾ. ರವಿಕುಮಾರ್ ಬಾಗಿ ಅವರನ್ನು ವರ್ಗಾವಣೆ ಮಾಡಿದ್ದೂ ಅಲ್ಲದೆ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ‘ಸೇವಾ ಧೃಡೀಕರಣ’ ನೀಡದೆ ಕಿರುಕುಳ ನೀಡುತ್ತಿದ್ದ ಆಡಳಿತ ಮಂಡಳಿಯು ಇಂದು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ‘ವರ್ಗಾವಣೆ ಆದೇಶವನ್ನು ಹಿಂಪಡೆದು, ರವಿಯವರನ್ನು ಸ್ವಸ್ಥಾನದಲ್ಲೇ ಮುಂದುವರಿಸಲಾಗುವುದು. ಜತೆಗೆ, ಅವರ ಪಿಎಚ್‌ಡಿ ಮಾರ್ಗದರ್ಶನಕ್ಕೆ ಶೀಘ್ರದಲ್ಲೇ ಸೇವಾ ದೃಢೀಕರಣವನ್ನೂ ನೀಡಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಸುಬ್ರಮಣ್ಯ ಅವರು ಇಂದು ಘೋಷಿಸಿದರು.

ಡಾ. ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯ ಹಾಗೂ ದಲಿತ ಎಂಬ ಕಾರಣಕ್ಕೆ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಚಿಂತಕರಾದ ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ದಸಂಸ ಹಿರಿಯ ನಾಯಕರಾದ ಮಾವಳ್ಳಿ ಶಂಕರ್, ಬಿ.ಸಿ. ಬಸವರಾಜು ಸೇರಿಸಂತೆ 50ಕ್ಕೂ ಹೆಚ್ಚು ಜನ ಪ್ರಾಧ್ಯಾಪಕರು, ಪತ್ರಕರ್ತರು, ರಂಗಕರ್ಮಿಗಳು ಫೆ.2ರಂದು ಕಾಲೇಜಿನ ಆಡಳಿತ ಮಂಡಳಿ ಜತೆಗೆ ಮಾತುಕತೆ ನಡೆಸಿದ್ದರು. ಸೋಮವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದ ಆಡಳಿತ ಮಂಡಳಿ, ಹಿಂಬಡ್ತಿಯನ್ನು ಮಾತ್ರ ರದ್ದುಗೊಳಿಸಿ, ಜಯನಗರ ಪದವಿ ಕಾಲೇಜಿಗೆ ವರ್ಗಾವಣೆ ಆದೇಶವನ್ನು ಮುಂದುವರಿಸಿತ್ತು. ಆದರೆ, ಜಯನಗರ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಇಲ್ಲದಿರುವ ಕಾರಣಕ್ಕೆ, ಡಾ. ರವಿ ಅವರಿಗೆ ಬೆಂಗಳೂರು ವಿವಿ ನೀಡಿದ್ದ ಸಂಶೋಧನ ಮಾರ್ಗದರ್ಶಕರ ಸ್ಥಾನ ಕೈತಪ್ಪುವ ಬಗ್ಗೆ ಇಂದು ನಡೆದ ಸಭೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇಂದು ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಜತೆಗೆ ನಡೆದ ಸಭೆಯಲ್ಲಿ ಪ್ರೊ. ಬಿ.ಸಿ. ಬಸವರಾಜು, ಶ್ರೀಪಾದ್ ಭಟ್, ಹಿರಿಯ ವಕೀಲರಾದ ಡಾ. ಸಿ.ಎಸ್. ದ್ವಾರಕನಾಥ್, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್ ಅವರು  ಆಡಳಿತ ಮಂಡಳಿಯಿಂದ ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೊಮ್ಮೆ ವಿವರವಾಗಿ ಮನವರಿಕೆ ಮಾಡಿಕೊಟ್ಟರು. ಅಂತಿಮವಾಗಿ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯು ತನ್ನ ನಿರ್ಧಾರವನ್ನು ವಾಪಸ್ ಪಡೆಯುವುದಾಗಿ ಹೇಳಿದೆ.

ಸಭೆಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಬ್ರಮಣ್ಯ, ‘ಹಲವು ರೀತಿಯ ಸಂವಹನ ಕೊರತೆಯಿಂದಾಗಿ ಈ ಗೊಂದಲ ಉಂಟಾಗಿದೆ; ರವಿ ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ನಿರ್ಧಾರ ಮಾಡುತ್ತೇವೆ. ಹಿಂದಿನ ಮಾತುಕತೆ ನಂತರ ನಾವು ಅವರನ್ನು ಪಿಯು ಕಾಲೇಜಿನಿಂದ ಪದವಿ ಕಾಲೇಜಿಗೆ ನೇಮಿಸಿದ್ದೇವೆ. ಈಗ ನೀವು ಹೇಳುತ್ತಿರುವ ಹಲವು ವಿಚಾರಗಳು ನನ್ನ ಗಮನಕ್ಕೆ ಬಂದಿರಲಿಲ್ಲ; ಮಾತುಕತೆ ಮಾಡಿಕೊಂಡು ನಮ್ಮ ಹಂತದಲ್ಲೇ ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು, ಇಲ್ಲೀವರಗೆ ನಡೆದಿರುವುದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅವರನ್ನು ಇದೇ ಕಾಲೇಜಿನಲ್ಲಿ ಉಳಿಸಿಕೊಳ್ಳುತ್ತೇವೆ. ಆಡಳಿತ ಮಂಡಳಿಯಲ್ಲಿರುವ ನಾವೆಲ್ಲರೂ ಬೇರೆಬೇರೆ ಕ್ಷೇತ್ರದಿಂದ ಬಂದವರು, ನಮಗೆ ಈ ತಾಂತ್ರಿಕ ವಿಚಾರಗಳು ಬಗ್ಗೆ ತಿಳಿದಿರಲಿಲ್ಲ’ ಎಂದರು.

ಇದೀಗ ಕನ್ನಡ ಪ್ರಾಧ್ಯಾಪಕ ಡಾ. ರವಿಕುಮಾರ್ ಬಾಗಿ ಅವರ ಹಿಂಬಡ್ತಿ ಹಾಗೂ ವರ್ಗಾವಣೆ ಆದೇಶವನ್ನು ಆಡಳಿತ ಮಂಡಳಿ ವಾಪಸ್ ಪಡೆದಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.

ಡಾ. ರವಿ ಬಾಗಿಗೆ ಜನ ಬೆಂಬಲ:

ಡಾ. ರವಿ ಬಾಗಿ ಅವರಿಗೆ ಆಗುತ್ತಿದ್ದ ಅನ್ಯಾಯವನ್ನು ಪ್ರಶ್ನಿಸಲಿ ಇಂದು ನೂರಾರು ಜನ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮುಂದೆ ಸೇರಿದ್ದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಡಾ. ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ಮಾವಳ್ಳಿ ಶಂಕರ್, ಡಾ. ಸಿ.ಎಸ್. ದ್ವಾರಕನಾಥ್, ಜಿ.ಎನ್, ನಾಗರಾಜ್, ಪಿಚ್ಚಳ್ಳಿ ಶ್ರೀನಿವಾಸ್, ಬಿ.ಸಿ. ಬಸವರಾಜು ಸೇರಿದಂತೆ ಹಲವು ಪ್ರಮುಖರು ಆಗಮಿಸಿ ಗಂಟೆಗಳ ಕಾಲ ಬಿಸಿಲಿನಲ್ಲೆ ಕಾದರು. ಜೊತೆಗೆ, ದಲಿತ ಸಂಘಟನೆ, ರಂಗಭೂಮಿ, ವಿದ್ಯಾರ್ಥಿ ಮುಖಂಡರು, ಕಾರ್ಮಿಕ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಿ ರವಿ ಬಾಗಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ವರ್ತನೆ ಖಂಡಿಸಿ ಪ್ರತಿಭಟಿಸಿದ ಡಾ. ರವಿ ಬಾಗಿ

ನ್ಯಾಷನಲ್ ಕಾಲೇಜು ಆಡಳಿ ಮಂಡಳಿ ಜತೆಗೆ ಶಾಂತಿಯುತವಾಗಿಯೆ ಮಾತನಾಡಲು ಆಗಮಿಸಿದ್ದ ಹಿರಿಯ ಸಾಹಿತಿಗಳನ್ನು ಗಂಟೆಗಳ ಕಾಲ ಹೊರಗಡೆಯೇ ನಿಲ್ಲಿಸಲಾಗಿತ್ತು. ಯಾರನ್ನೂ ಕಾಲೇಜಿನ ಒಳಗೆ ಬಿಡದಂತೆ ಗೇಟಿಗೆ ಬೀಗ ಹಾಕಿಸಿದ್ದ ಆಡಳಿತ ಮಂಡಳಿಯ ‘ಕೆಲವರು’, ಪೊಲೀಸರನ್ನು ಕರೆಸಿ ಕಾಲೇಜು ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು. ಸಾಲದ್ದಕ್ಕೆ ವಯಸ್ಸಾಗಿ ನಿಲ್ಲಲೂ ಕಷ್ಟಪಡುತ್ತಿದ್ದ ಅಧ್ಯಕ್ಷರಾದ ಡಾ. ಸುಬ್ರಮಣ್ಯ ಅವರನ್ನು ಕಾಲೇಜಿನ ಹೊರಗಡೆ ಕರೆತಂದು ನ್ಯಾಯ ಕೇಳಲು ಬಂದಿದ್ದವರ ಮನವೊಲಿಸಲು ಪ್ರಯತ್ನಿಸಿದರು. ನ್ಯಾಷನಲ್ ಕಾಲೇಜು ಸ್ಥಾಪಕರಾದ ಎಚ್‌. ನರಸಿಂಹಯ್ಯ ಅವರ ಒಡನಾಡಿಗಳಾಗಿದ್ದ ಹಲವರು ಇಂದು ರವಿ ಬಾಗಿ ಪರವಾಗಿ ನ್ಯಾಯ ಕೇಳಲು ಬಂದಿದ್ದರು. ಜೊತೆಗೆ, ಸಾಹಿತ್ಯ, ಶೈಕ್ಷಣಿಕ, ಹೋರಾಟ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿರುವವರ ಬಗ್ಗೆ ಆಡಳಿತ ಮಂಡಳಿಗೆ ಕಿಂಚಿತ್ತೂ ತಿಳುವಳಿಕೆ ಇಲ್ಲದಿರುವುದು ಕಂಡುಬಂತು. ಪದಾಧಿಕಾರಿಗಳ ಈ ವರ್ತನೆ ಅಲ್ಲಿಗೆ ಬಂದಿದ್ದ ಹಿರಿಯ ಅಸಮಾಧಾನಕ್ಕೂ ಕಾರಣವಾಯಿತು.

ಬಸವನಗುಡಿಯಲ್ಲಿರುವ ನ್ಯಾಷನಲ್‌ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದ ಡಾ. ರವಿಕುಮಾರ್ ಬಾಗಿ ಅವರಿಗೆ ಹಿಂಬಡ್ತಿ ನೀಡಲಾಗಿತ್ತು. ಅಲ್ಲದೆ, ರವಿಕುಮಾರ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಲು ಸೇವಾ ಧೃಢೀಕರಣ ಪತ್ರವನ್ನೂ ಕಾಲೇಜಿನ ಪ್ರಾಂಶುಪಾಲರು ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ.

ರವಿಕುಮಾರ್ ಅವರ ಮೇಲೆ ಕಾಲೇಜು ಆಡಳಿತ ಮಂಡಳಿ ಎಸಗಿದ ಧೋರಣೆಯನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಕಾಲೇಜಿನ ಎದುರು ಫೆಬ್ರವರಿ 2ರಂದು ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ್ದರು. ಅಲ್ಲದೆ, ಫೆಬ್ರವರಿ 6ರ ಮಂಗಳವಾರ ಕೂಡ ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಮಣಿದಿರುವ ಕಾಲೇಜು ಆಡಳಿತ ಮಂಡಳಿ, ಪ್ರಾಧ್ಯಾಪಕ ರವಿಕುಮಾರ್ ಅವರಿಗೆ ನೀಡಿದ್ದ ಹಿಂಬಡ್ತಿಯನ್ನು ವಾಪಸ್‌ ಪಡೆದಿದೆ. ಪದವಿ ಬಸವನಗುಡಿ ಕಾಲೇಜಿನಲ್ಲಿಯೇ ಅವರನ್ನು ಮುಂದುವರಿಸಲು ಒಪ್ಪಿಕೊಂಡಿದೆ.

‘ಕಳೆದ 13 ವರ್ಷದಿಂದ ಬಸವನಗುಡಿಯ ಪದವಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪದವಿ, ಸ್ನಾತಕೋತ್ತರ ಪದವಿಗಳಿಗೆ ಬೋಧಿಸಿದ್ದೇನೆ. ಪಿಎಚ್‌ಡಿ ಪದವಿಯನ್ನು ಹೊಂದಿದ್ದೇನೆ. ಸ್ನಾತಕೋತ್ತರ ಕೇಂದ್ರದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾವ ಸೂಚನೆಯನ್ನು ನೀಡದೆ ಏಕಾಏಕಿ ದುರುದ್ದೇಶದಿಂದ ಜಯನಗರ ನ್ಯಾಷನಲ್ ಪಿಯುಸಿ ಕಾಲೇಜಿಗೆ ಹಿಂಬಡ್ತಿ ನೀಡಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಪ್ರಾಂಶುಪಾಲರಾದ ವೈ.ಸಿ.ಕಮಲಾ ಅವರು ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳಲ್ಲಿ ನೇರವಾಗಿಯೇ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದಾರೆ’ ಎಂದು ಪ್ರಾಧ್ಯಾಪಕ ರವಿಕುಮಾರ್ ತಮ್ಮ ನೋವು ತೋಡಿಕೊಂಡಿದ್ದರು.

ಇದನ್ನೂ ಓದಿ; ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...