Homeಮುಖಪುಟಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ...

ಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ ಮಂಡಳಿ

- Advertisement -
- Advertisement -

ಯಾವುದೆ ಸೂಕ್ತ ಕಾರಣ ನೀಡದೆ ಬಸವನಗುಡಿ ನ್ಯಾಷನಲ್ ಕಾಲೇಜಿನಿಂದ ಡಾ. ರವಿಕುಮಾರ್ ಬಾಗಿ ಅವರನ್ನು ವರ್ಗಾವಣೆ ಮಾಡಿದ್ದೂ ಅಲ್ಲದೆ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ‘ಸೇವಾ ಧೃಡೀಕರಣ’ ನೀಡದೆ ಕಿರುಕುಳ ನೀಡುತ್ತಿದ್ದ ಆಡಳಿತ ಮಂಡಳಿಯು ಇಂದು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ‘ವರ್ಗಾವಣೆ ಆದೇಶವನ್ನು ಹಿಂಪಡೆದು, ರವಿಯವರನ್ನು ಸ್ವಸ್ಥಾನದಲ್ಲೇ ಮುಂದುವರಿಸಲಾಗುವುದು. ಜತೆಗೆ, ಅವರ ಪಿಎಚ್‌ಡಿ ಮಾರ್ಗದರ್ಶನಕ್ಕೆ ಶೀಘ್ರದಲ್ಲೇ ಸೇವಾ ದೃಢೀಕರಣವನ್ನೂ ನೀಡಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಸುಬ್ರಮಣ್ಯ ಅವರು ಇಂದು ಘೋಷಿಸಿದರು.

ಡಾ. ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯ ಹಾಗೂ ದಲಿತ ಎಂಬ ಕಾರಣಕ್ಕೆ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಚಿಂತಕರಾದ ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ದಸಂಸ ಹಿರಿಯ ನಾಯಕರಾದ ಮಾವಳ್ಳಿ ಶಂಕರ್, ಬಿ.ಸಿ. ಬಸವರಾಜು ಸೇರಿಸಂತೆ 50ಕ್ಕೂ ಹೆಚ್ಚು ಜನ ಪ್ರಾಧ್ಯಾಪಕರು, ಪತ್ರಕರ್ತರು, ರಂಗಕರ್ಮಿಗಳು ಫೆ.2ರಂದು ಕಾಲೇಜಿನ ಆಡಳಿತ ಮಂಡಳಿ ಜತೆಗೆ ಮಾತುಕತೆ ನಡೆಸಿದ್ದರು. ಸೋಮವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದ ಆಡಳಿತ ಮಂಡಳಿ, ಹಿಂಬಡ್ತಿಯನ್ನು ಮಾತ್ರ ರದ್ದುಗೊಳಿಸಿ, ಜಯನಗರ ಪದವಿ ಕಾಲೇಜಿಗೆ ವರ್ಗಾವಣೆ ಆದೇಶವನ್ನು ಮುಂದುವರಿಸಿತ್ತು. ಆದರೆ, ಜಯನಗರ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಇಲ್ಲದಿರುವ ಕಾರಣಕ್ಕೆ, ಡಾ. ರವಿ ಅವರಿಗೆ ಬೆಂಗಳೂರು ವಿವಿ ನೀಡಿದ್ದ ಸಂಶೋಧನ ಮಾರ್ಗದರ್ಶಕರ ಸ್ಥಾನ ಕೈತಪ್ಪುವ ಬಗ್ಗೆ ಇಂದು ನಡೆದ ಸಭೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇಂದು ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಜತೆಗೆ ನಡೆದ ಸಭೆಯಲ್ಲಿ ಪ್ರೊ. ಬಿ.ಸಿ. ಬಸವರಾಜು, ಶ್ರೀಪಾದ್ ಭಟ್, ಹಿರಿಯ ವಕೀಲರಾದ ಡಾ. ಸಿ.ಎಸ್. ದ್ವಾರಕನಾಥ್, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್ ಅವರು  ಆಡಳಿತ ಮಂಡಳಿಯಿಂದ ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೊಮ್ಮೆ ವಿವರವಾಗಿ ಮನವರಿಕೆ ಮಾಡಿಕೊಟ್ಟರು. ಅಂತಿಮವಾಗಿ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯು ತನ್ನ ನಿರ್ಧಾರವನ್ನು ವಾಪಸ್ ಪಡೆಯುವುದಾಗಿ ಹೇಳಿದೆ.

ಸಭೆಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಬ್ರಮಣ್ಯ, ‘ಹಲವು ರೀತಿಯ ಸಂವಹನ ಕೊರತೆಯಿಂದಾಗಿ ಈ ಗೊಂದಲ ಉಂಟಾಗಿದೆ; ರವಿ ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ನಿರ್ಧಾರ ಮಾಡುತ್ತೇವೆ. ಹಿಂದಿನ ಮಾತುಕತೆ ನಂತರ ನಾವು ಅವರನ್ನು ಪಿಯು ಕಾಲೇಜಿನಿಂದ ಪದವಿ ಕಾಲೇಜಿಗೆ ನೇಮಿಸಿದ್ದೇವೆ. ಈಗ ನೀವು ಹೇಳುತ್ತಿರುವ ಹಲವು ವಿಚಾರಗಳು ನನ್ನ ಗಮನಕ್ಕೆ ಬಂದಿರಲಿಲ್ಲ; ಮಾತುಕತೆ ಮಾಡಿಕೊಂಡು ನಮ್ಮ ಹಂತದಲ್ಲೇ ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು, ಇಲ್ಲೀವರಗೆ ನಡೆದಿರುವುದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅವರನ್ನು ಇದೇ ಕಾಲೇಜಿನಲ್ಲಿ ಉಳಿಸಿಕೊಳ್ಳುತ್ತೇವೆ. ಆಡಳಿತ ಮಂಡಳಿಯಲ್ಲಿರುವ ನಾವೆಲ್ಲರೂ ಬೇರೆಬೇರೆ ಕ್ಷೇತ್ರದಿಂದ ಬಂದವರು, ನಮಗೆ ಈ ತಾಂತ್ರಿಕ ವಿಚಾರಗಳು ಬಗ್ಗೆ ತಿಳಿದಿರಲಿಲ್ಲ’ ಎಂದರು.

ಇದೀಗ ಕನ್ನಡ ಪ್ರಾಧ್ಯಾಪಕ ಡಾ. ರವಿಕುಮಾರ್ ಬಾಗಿ ಅವರ ಹಿಂಬಡ್ತಿ ಹಾಗೂ ವರ್ಗಾವಣೆ ಆದೇಶವನ್ನು ಆಡಳಿತ ಮಂಡಳಿ ವಾಪಸ್ ಪಡೆದಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.

ಡಾ. ರವಿ ಬಾಗಿಗೆ ಜನ ಬೆಂಬಲ:

ಡಾ. ರವಿ ಬಾಗಿ ಅವರಿಗೆ ಆಗುತ್ತಿದ್ದ ಅನ್ಯಾಯವನ್ನು ಪ್ರಶ್ನಿಸಲಿ ಇಂದು ನೂರಾರು ಜನ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮುಂದೆ ಸೇರಿದ್ದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಡಾ. ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ಮಾವಳ್ಳಿ ಶಂಕರ್, ಡಾ. ಸಿ.ಎಸ್. ದ್ವಾರಕನಾಥ್, ಜಿ.ಎನ್, ನಾಗರಾಜ್, ಪಿಚ್ಚಳ್ಳಿ ಶ್ರೀನಿವಾಸ್, ಬಿ.ಸಿ. ಬಸವರಾಜು ಸೇರಿದಂತೆ ಹಲವು ಪ್ರಮುಖರು ಆಗಮಿಸಿ ಗಂಟೆಗಳ ಕಾಲ ಬಿಸಿಲಿನಲ್ಲೆ ಕಾದರು. ಜೊತೆಗೆ, ದಲಿತ ಸಂಘಟನೆ, ರಂಗಭೂಮಿ, ವಿದ್ಯಾರ್ಥಿ ಮುಖಂಡರು, ಕಾರ್ಮಿಕ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಿ ರವಿ ಬಾಗಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ವರ್ತನೆ ಖಂಡಿಸಿ ಪ್ರತಿಭಟಿಸಿದ ಡಾ. ರವಿ ಬಾಗಿ

ನ್ಯಾಷನಲ್ ಕಾಲೇಜು ಆಡಳಿ ಮಂಡಳಿ ಜತೆಗೆ ಶಾಂತಿಯುತವಾಗಿಯೆ ಮಾತನಾಡಲು ಆಗಮಿಸಿದ್ದ ಹಿರಿಯ ಸಾಹಿತಿಗಳನ್ನು ಗಂಟೆಗಳ ಕಾಲ ಹೊರಗಡೆಯೇ ನಿಲ್ಲಿಸಲಾಗಿತ್ತು. ಯಾರನ್ನೂ ಕಾಲೇಜಿನ ಒಳಗೆ ಬಿಡದಂತೆ ಗೇಟಿಗೆ ಬೀಗ ಹಾಕಿಸಿದ್ದ ಆಡಳಿತ ಮಂಡಳಿಯ ‘ಕೆಲವರು’, ಪೊಲೀಸರನ್ನು ಕರೆಸಿ ಕಾಲೇಜು ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು. ಸಾಲದ್ದಕ್ಕೆ ವಯಸ್ಸಾಗಿ ನಿಲ್ಲಲೂ ಕಷ್ಟಪಡುತ್ತಿದ್ದ ಅಧ್ಯಕ್ಷರಾದ ಡಾ. ಸುಬ್ರಮಣ್ಯ ಅವರನ್ನು ಕಾಲೇಜಿನ ಹೊರಗಡೆ ಕರೆತಂದು ನ್ಯಾಯ ಕೇಳಲು ಬಂದಿದ್ದವರ ಮನವೊಲಿಸಲು ಪ್ರಯತ್ನಿಸಿದರು. ನ್ಯಾಷನಲ್ ಕಾಲೇಜು ಸ್ಥಾಪಕರಾದ ಎಚ್‌. ನರಸಿಂಹಯ್ಯ ಅವರ ಒಡನಾಡಿಗಳಾಗಿದ್ದ ಹಲವರು ಇಂದು ರವಿ ಬಾಗಿ ಪರವಾಗಿ ನ್ಯಾಯ ಕೇಳಲು ಬಂದಿದ್ದರು. ಜೊತೆಗೆ, ಸಾಹಿತ್ಯ, ಶೈಕ್ಷಣಿಕ, ಹೋರಾಟ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿರುವವರ ಬಗ್ಗೆ ಆಡಳಿತ ಮಂಡಳಿಗೆ ಕಿಂಚಿತ್ತೂ ತಿಳುವಳಿಕೆ ಇಲ್ಲದಿರುವುದು ಕಂಡುಬಂತು. ಪದಾಧಿಕಾರಿಗಳ ಈ ವರ್ತನೆ ಅಲ್ಲಿಗೆ ಬಂದಿದ್ದ ಹಿರಿಯ ಅಸಮಾಧಾನಕ್ಕೂ ಕಾರಣವಾಯಿತು.

ಬಸವನಗುಡಿಯಲ್ಲಿರುವ ನ್ಯಾಷನಲ್‌ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದ ಡಾ. ರವಿಕುಮಾರ್ ಬಾಗಿ ಅವರಿಗೆ ಹಿಂಬಡ್ತಿ ನೀಡಲಾಗಿತ್ತು. ಅಲ್ಲದೆ, ರವಿಕುಮಾರ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಲು ಸೇವಾ ಧೃಢೀಕರಣ ಪತ್ರವನ್ನೂ ಕಾಲೇಜಿನ ಪ್ರಾಂಶುಪಾಲರು ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ.

ರವಿಕುಮಾರ್ ಅವರ ಮೇಲೆ ಕಾಲೇಜು ಆಡಳಿತ ಮಂಡಳಿ ಎಸಗಿದ ಧೋರಣೆಯನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಕಾಲೇಜಿನ ಎದುರು ಫೆಬ್ರವರಿ 2ರಂದು ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ್ದರು. ಅಲ್ಲದೆ, ಫೆಬ್ರವರಿ 6ರ ಮಂಗಳವಾರ ಕೂಡ ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಮಣಿದಿರುವ ಕಾಲೇಜು ಆಡಳಿತ ಮಂಡಳಿ, ಪ್ರಾಧ್ಯಾಪಕ ರವಿಕುಮಾರ್ ಅವರಿಗೆ ನೀಡಿದ್ದ ಹಿಂಬಡ್ತಿಯನ್ನು ವಾಪಸ್‌ ಪಡೆದಿದೆ. ಪದವಿ ಬಸವನಗುಡಿ ಕಾಲೇಜಿನಲ್ಲಿಯೇ ಅವರನ್ನು ಮುಂದುವರಿಸಲು ಒಪ್ಪಿಕೊಂಡಿದೆ.

‘ಕಳೆದ 13 ವರ್ಷದಿಂದ ಬಸವನಗುಡಿಯ ಪದವಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪದವಿ, ಸ್ನಾತಕೋತ್ತರ ಪದವಿಗಳಿಗೆ ಬೋಧಿಸಿದ್ದೇನೆ. ಪಿಎಚ್‌ಡಿ ಪದವಿಯನ್ನು ಹೊಂದಿದ್ದೇನೆ. ಸ್ನಾತಕೋತ್ತರ ಕೇಂದ್ರದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾವ ಸೂಚನೆಯನ್ನು ನೀಡದೆ ಏಕಾಏಕಿ ದುರುದ್ದೇಶದಿಂದ ಜಯನಗರ ನ್ಯಾಷನಲ್ ಪಿಯುಸಿ ಕಾಲೇಜಿಗೆ ಹಿಂಬಡ್ತಿ ನೀಡಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಪ್ರಾಂಶುಪಾಲರಾದ ವೈ.ಸಿ.ಕಮಲಾ ಅವರು ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳಲ್ಲಿ ನೇರವಾಗಿಯೇ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದಾರೆ’ ಎಂದು ಪ್ರಾಧ್ಯಾಪಕ ರವಿಕುಮಾರ್ ತಮ್ಮ ನೋವು ತೋಡಿಕೊಂಡಿದ್ದರು.

ಇದನ್ನೂ ಓದಿ; ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...