Homeಚಳವಳಿರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ಸಿಂಘು ಗಡಿಯಲ್ಲಿ ಗುರುವಾರದಿಂದ 2 ದಿನಗಳ ರಾಷ್ಟ್ರೀಯ ಸಮಾವೇಶವನ್ನು ರೈತರು ಆಯೋಜಿಸಿದ್ದಾರೆ

- Advertisement -
- Advertisement -

ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ ಒಂಬತ್ತು ತಿಂಗಳು ತುಂಬಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳ ಸಿಂಘು ಗಡಿಯಲ್ಲಿ ರಾಷ್ಟ್ರೀಯ ಸಮಾವೇಶವನ್ನು ರೈತರು ಆಯೋಜಿಸಿದ್ದಾರೆ.

ರೈತರು, ಮಹಿಳೆಯರು, ಯುವಕರು ಮತ್ತು ಕಾರ್ಮಿಕರ ಸಂಘಟನೆಗಳ 1,500 ಪ್ರತಿನಿಧಿಗಳು ಭಾಗವಹಿಸುವ ಈ ಕಾರ್ಯಗಾರವು ಎರಡು ದಿನಗಳು ನಡೆಯಲಿದೆ. ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಚಳುವಳಿಯ ತೀವ್ರತೆ ಮತ್ತು ವಿಸ್ತರಣೆಯ ಗುರಿಯನ್ನು ಈ ಕಾರ್ಯಗಾರ ಹೊಂದಿದೆ.

ಸಮಾವೇಶದ ಭಾಗವಾಗಿ, ಉದ್ಘಾಟನಾ ಅಧಿವೇಶನ ಸೇರಿದಂತೆ ಮೂರು ಗೋಷ್ಠಿಗಳು ಗುರುವಾರ ನಡೆಯಲಿದೆ.  ಕೈಗಾರಿಕಾ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಒಂದು ಗೋಷ್ಠಿ. ಕೃಷಿ ಕಾರ್ಮಿಕ, ಗ್ರಾಮೀಣ, ಬಡ ಮತ್ತು ಬುಡಕಟ್ಟು ಜನರ ಕುರಿತು ಮತ್ತೆರಡು ಗೋಷ್ಠಿಗಳು ನಡೆಯಲಿವೆ.

ಇದನ್ನೂ ಓದಿ: ಕೃಷಿ ಕಾಯ್ದೆ, ಎಂಎಸ್‌ಪಿ ಬೇಡಿಕೆ ಈಡೇರದಿದ್ದರೆ ಸೆ.8 ರಿಂದ ಪ್ರತಿಭಟನೆ: ಕೇಂದ್ರಕ್ಕೆ RSS ಅಂಗಸಂಸ್ಥೆ ಬಿಕೆಎಸ್ ಎಚ್ಚರಿಕೆ

ಮೂರು ಕಾರ್ಪೊರೇಟ್ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದು, ಎಲ್ಲಾ ಬೆಳೆಗಳ ಎಂಎಸ್‌ಪಿಗೆ ಕಾನೂನು ಖಾತರಿ ಮಾಡುವುದು, 2021-ವಿದ್ಯುತ್ ಬಿಲ್ ರದ್ದು ಮತ್ತು ಎನ್‌ಸಿಆರ್‌ನಲ್ಲಿನ ವಾಯು ಗುಣಮಟ್ಟ ನಿರ್ವಹಣೆಯ ಆಯೋಗದ ಅಡಿಯಲ್ಲಿ ರೈತರ ವಿರುದ್ಧ ಕಾನೂನು ಕ್ರಮ ಜರುಗಿಸುವುದರ ಕುರಿತು ಸಮಾವೇಶದಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.

ಗುರುವಾರ ಹೋರಾಟಕ್ಕೆ 9 ತಿಂಗಳು ತುಂಬಿದ ಹಿನ್ನೆಲೆ ಟ್ವಿಟರ್‌ನಲ್ಲಿ #9MonthsOfFarmersProtest ಮತ್ತು #FarmersProtest ಹ್ಯಾಶ್‌ಟ್ಯಾಗ್‌ ಟಾಪ್ ಒನ್ ಟ್ರೆಂಡಿಂಗ್‌ನಲ್ಲಿದೆ.

ಕಳೆದ ವರ್ಷ ನವೆಂಬರ್ ನಿಂದ ಮೂರು ವಿವಾದಿತ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳು ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ರದ್ದುಗೊಳಿಸುತ್ತದೆ. ಮತ್ತು ಕಾರ್ಪೋರೇಟರ್‌ಗಳಿಗೆ ಹೆಚ್ಚಿನ ಲಾಭ ನೀಡುತ್ತವೆ ಎಂದು ಪ್ರತಿಭಟನಾ ನಿರತ ರೈತರು ಆರೋಪಿಸಿದ್ದಾರೆ.

ಈ ಕುರಿತು ರೈತರು ಮತ್ತು ಒಕ್ಕೂಟ ಸರ್ಕಾರದೊಂದಿಗೆ 11 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ, ಕಾನೂನುಗಳು ರದ್ದತಿಯೊಂದೆ ಮುಖ್ಯ ಎಂದಿರುವ ರೈತರು ಪಟ್ಟು ಹಿಡಿದು ಪ್ರತಿಭಟನ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...