Homeಮುಖಪುಟರಾಷ್ಟ್ರೀಯ ರೈತ ದಿನ-2021: ಅನ್ನದಾತರಿಗೆ ಶುಭಾಶಯ ಕೋರಿದ ಗಣ್ಯರು

ರಾಷ್ಟ್ರೀಯ ರೈತ ದಿನ-2021: ಅನ್ನದಾತರಿಗೆ ಶುಭಾಶಯ ಕೋರಿದ ಗಣ್ಯರು

- Advertisement -
- Advertisement -

ಪ್ರತಿ ವರ್ಷ ಡಿಸೆಂಬರ್ 23 ಅನ್ನು ಭಾರತದಲ್ಲಿ ‘ಕಿಸಾನ್ ದಿವಸ್’ (ರಾಷ್ಟ್ರೀಯ ರೈತ ದಿನ) ಎಂದು ಆಚರಿಸಲಾಗುತ್ತದೆ. ದೇಶದ ಐದನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಇಂದು ದೇಶದ ಅನ್ನದಾತರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಈ ವರ್ಷದ ರೈತ ದಿನ ಅನ್ನದಾತರಿಗೆ ವಿಷೇಶವಾಗಿದೆ. ಪಂಜಾಬ್ ಮತ್ತು ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ರೈತರು ವರ್ಷವಿಡೀ ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡಿ ಜಯ ಗಳಿಸಿದ್ದಾರೆ.

ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ನೆನಪಿನಲ್ಲಿ ಅವರ ಜನ್ಮದಿನವನ್ನು ಕಿಸಾನ್ ದಿವಸ್ ಎಂದು ಆಚರಿಸಲಾಗುತ್ತದೆ. ಚೌಧರಿ ಚರಣ್ ಸಿಂಗ್ ಡಿಸೆಂಬರ್ 23, 1902 ರಂದು ಉತ್ತರ ಪ್ರದೇಶದ ಮೀರತ್‌ನ ನೂರ್ಪುರ್‌ನಲ್ಲಿ ಮಧ್ಯಮ ವರ್ಗದ ರೈತ ಕುಟುಂಬದಲ್ಲಿ ಜನಿಸಿದರು.

ಮಹಾತ್ಮ ಗಾಂಧಿಯವರ ಅಹಿಂಸೆಯಿಂದ ಪ್ರಭಾವಿತರಾದ ಸಿಂಗ್ ಅವರು ಸ್ವಾತಂತ್ರ್ಯ ಚಳವಳಿಯಲದಲಿ ತೊಡಗಿಕೊಂಡಿದ್ದರು. ಸ್ವಾತಂತ್ರ್ಯದ ನಂತರ, ಅವರು ಗ್ರಾಮೀಣ ಪ್ರದೇಶಗಳ ಏಳಿಗೆಯಲ್ಲಿ ತೊಡಗಿಸಿಕೊಂಡರು. ಉತ್ತರ ಪ್ರದೇಶದ ಭೂ ಸುಧಾರಣೆಗಳ ಬಗ್ಗೆ ಗಮನ ಹರಿಸಿದ್ದರು. ಸಾಲ ವಿಮೋಚನೆ ಮಸೂದೆ 1939 ರ ರಚನೆ ಮತ್ತು ಅಂತಿಮಗೊಳಿಸುವಿಕೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು, ಇದು ಗ್ರಾಮೀಣ ಸಾಲಗಾರರಿಗೆ ಹೆಚ್ಚಿನ ಪರಿಹಾರವನ್ನು ನೀಡಿತ್ತು.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಭಾರತದ ಕೃಷಿ ಸುಧಾರಣೆಗಳಿಗೆ ಮಾಜಿ ಪ್ರಧಾನಿ ನೀಡಿರುವ ಕೊಡುಗೆಯನ್ನು ಈ ದಿನದಂದು ಗುರುತಿಸಲಾಗುತ್ತದೆ. ರೈತರ ಉನ್ನತಿಗಾಗಿ ಮತ್ತು ದೇಶಾದ್ಯಂತ ಕೃಷಿಯ ಅಭಿವೃದ್ಧಿಗಾಗಿ ಅವರು ಮಾಡಿದ ಕೆಲಸಕ್ಕಾಗಿ ಸಿಂಗ್ ಅವರಿಗೆ ‘ಭಾರತದ ರೈತರ ಚಾಂಪಿಯನ್’ (Champion of India’s Peasants) ಎಂಬ ಗೌರವವನ್ನು ನೀಡಲಾಗಿದೆ.

ರೈತ ದಿನದ ಹಿನ್ನೆಲೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, “ಭಾರತ ದೇಶವು ಕೃಷಿ ಆಧಾರಿತ ದೇಶ ಹಾಗೂ ಬೇಸಾಯ ಮನುಷ್ಯನ ಜೀವನಾಧಾರ ಎಂಬುದನ್ನು ಸದಾ ನೆನಪಿನಲ್ಲಿಡೋಣ. ಈ ನಿಟ್ಟಿನಲ್ಲಿ ಸರ್ಕಾರಗಳೂ ರೈತರ ಬೆನ್ನೆಲುಬಾಗಿ ನಿಂತು ಅರಿವು ಮೂಡಿಸಿದಾಗ ರೈತ ದಿನಾಚರಣೆ ಸಾರ್ಥಕವಾಗಲಿದೆ. ಸಮಸ್ತ ಅನ್ನದಾತರಿಗೆ ‘ರೈತ ದಿನಾಚರಣೆ’ಯಂದು ನನ್ನ ಕೃತಜ್ಞತಾ ಪೂರ್ವಕ ನಮನಗಳು” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್ ಮಾಡಿ, “ಮಾಜಿ ಪ್ರಧಾನಿ ದಿ. ಚೌಧರಿ ಚರಣ್ ಸಿಂಗ್ ಅವರ ಜಯಂತಿಯಂದು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ರೈತ ಬಾಂಧವರಿಗೆ ರಾಷ್ಟ್ರೀಯ ರೈತರ ದಿನದ ಹೃತ್ಪೂರ್ವಕ ಶುಭಾಶಯಗಳು. ಅನ್ನದಾತ ರೈತನೇ ದೇಶದ ಬೆನ್ನೆಲುಬು. ಕೃಷಿಕರ ಬದುಕು ಹಸನಾದಾಗಲೇ ಸಮೃದ್ಧ ರಾಜ್ಯದ ಗುರಿ ನನಸಾಗುವುದು” ಎಂದಿದ್ದಾರೆ.

ರೈತ ಹೋರಾಟದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಕೂಡ ಟ್ವೀಟ್ ಮಾಡಿ ಅನ್ನದಾತರಿಗೆ ಶುಭಾಶಯ ತಿಳಿಸಿದೆ.


ಇದನ್ನೂ ಓದಿ: ರಾಜಕೀಯ ಪಕ್ಷಗಳ ಬೆಂಬಲವಿಲ್ಲದೇ ರೈತರ ಹೋರಾಟ ಯಶಸ್ಸು ಕಂಡದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...