Homeಮುಖಪುಟರಾಷ್ಟ್ರೀಯ ರೈತ ದಿನ-2021: ಅನ್ನದಾತರಿಗೆ ಶುಭಾಶಯ ಕೋರಿದ ಗಣ್ಯರು

ರಾಷ್ಟ್ರೀಯ ರೈತ ದಿನ-2021: ಅನ್ನದಾತರಿಗೆ ಶುಭಾಶಯ ಕೋರಿದ ಗಣ್ಯರು

- Advertisement -
- Advertisement -

ಪ್ರತಿ ವರ್ಷ ಡಿಸೆಂಬರ್ 23 ಅನ್ನು ಭಾರತದಲ್ಲಿ ‘ಕಿಸಾನ್ ದಿವಸ್’ (ರಾಷ್ಟ್ರೀಯ ರೈತ ದಿನ) ಎಂದು ಆಚರಿಸಲಾಗುತ್ತದೆ. ದೇಶದ ಐದನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಇಂದು ದೇಶದ ಅನ್ನದಾತರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಈ ವರ್ಷದ ರೈತ ದಿನ ಅನ್ನದಾತರಿಗೆ ವಿಷೇಶವಾಗಿದೆ. ಪಂಜಾಬ್ ಮತ್ತು ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ರೈತರು ವರ್ಷವಿಡೀ ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡಿ ಜಯ ಗಳಿಸಿದ್ದಾರೆ.

ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ನೆನಪಿನಲ್ಲಿ ಅವರ ಜನ್ಮದಿನವನ್ನು ಕಿಸಾನ್ ದಿವಸ್ ಎಂದು ಆಚರಿಸಲಾಗುತ್ತದೆ. ಚೌಧರಿ ಚರಣ್ ಸಿಂಗ್ ಡಿಸೆಂಬರ್ 23, 1902 ರಂದು ಉತ್ತರ ಪ್ರದೇಶದ ಮೀರತ್‌ನ ನೂರ್ಪುರ್‌ನಲ್ಲಿ ಮಧ್ಯಮ ವರ್ಗದ ರೈತ ಕುಟುಂಬದಲ್ಲಿ ಜನಿಸಿದರು.

ಮಹಾತ್ಮ ಗಾಂಧಿಯವರ ಅಹಿಂಸೆಯಿಂದ ಪ್ರಭಾವಿತರಾದ ಸಿಂಗ್ ಅವರು ಸ್ವಾತಂತ್ರ್ಯ ಚಳವಳಿಯಲದಲಿ ತೊಡಗಿಕೊಂಡಿದ್ದರು. ಸ್ವಾತಂತ್ರ್ಯದ ನಂತರ, ಅವರು ಗ್ರಾಮೀಣ ಪ್ರದೇಶಗಳ ಏಳಿಗೆಯಲ್ಲಿ ತೊಡಗಿಸಿಕೊಂಡರು. ಉತ್ತರ ಪ್ರದೇಶದ ಭೂ ಸುಧಾರಣೆಗಳ ಬಗ್ಗೆ ಗಮನ ಹರಿಸಿದ್ದರು. ಸಾಲ ವಿಮೋಚನೆ ಮಸೂದೆ 1939 ರ ರಚನೆ ಮತ್ತು ಅಂತಿಮಗೊಳಿಸುವಿಕೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು, ಇದು ಗ್ರಾಮೀಣ ಸಾಲಗಾರರಿಗೆ ಹೆಚ್ಚಿನ ಪರಿಹಾರವನ್ನು ನೀಡಿತ್ತು.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ಭಾರತದ ಕೃಷಿ ಸುಧಾರಣೆಗಳಿಗೆ ಮಾಜಿ ಪ್ರಧಾನಿ ನೀಡಿರುವ ಕೊಡುಗೆಯನ್ನು ಈ ದಿನದಂದು ಗುರುತಿಸಲಾಗುತ್ತದೆ. ರೈತರ ಉನ್ನತಿಗಾಗಿ ಮತ್ತು ದೇಶಾದ್ಯಂತ ಕೃಷಿಯ ಅಭಿವೃದ್ಧಿಗಾಗಿ ಅವರು ಮಾಡಿದ ಕೆಲಸಕ್ಕಾಗಿ ಸಿಂಗ್ ಅವರಿಗೆ ‘ಭಾರತದ ರೈತರ ಚಾಂಪಿಯನ್’ (Champion of India’s Peasants) ಎಂಬ ಗೌರವವನ್ನು ನೀಡಲಾಗಿದೆ.

ರೈತ ದಿನದ ಹಿನ್ನೆಲೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, “ಭಾರತ ದೇಶವು ಕೃಷಿ ಆಧಾರಿತ ದೇಶ ಹಾಗೂ ಬೇಸಾಯ ಮನುಷ್ಯನ ಜೀವನಾಧಾರ ಎಂಬುದನ್ನು ಸದಾ ನೆನಪಿನಲ್ಲಿಡೋಣ. ಈ ನಿಟ್ಟಿನಲ್ಲಿ ಸರ್ಕಾರಗಳೂ ರೈತರ ಬೆನ್ನೆಲುಬಾಗಿ ನಿಂತು ಅರಿವು ಮೂಡಿಸಿದಾಗ ರೈತ ದಿನಾಚರಣೆ ಸಾರ್ಥಕವಾಗಲಿದೆ. ಸಮಸ್ತ ಅನ್ನದಾತರಿಗೆ ‘ರೈತ ದಿನಾಚರಣೆ’ಯಂದು ನನ್ನ ಕೃತಜ್ಞತಾ ಪೂರ್ವಕ ನಮನಗಳು” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್ ಮಾಡಿ, “ಮಾಜಿ ಪ್ರಧಾನಿ ದಿ. ಚೌಧರಿ ಚರಣ್ ಸಿಂಗ್ ಅವರ ಜಯಂತಿಯಂದು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ರೈತ ಬಾಂಧವರಿಗೆ ರಾಷ್ಟ್ರೀಯ ರೈತರ ದಿನದ ಹೃತ್ಪೂರ್ವಕ ಶುಭಾಶಯಗಳು. ಅನ್ನದಾತ ರೈತನೇ ದೇಶದ ಬೆನ್ನೆಲುಬು. ಕೃಷಿಕರ ಬದುಕು ಹಸನಾದಾಗಲೇ ಸಮೃದ್ಧ ರಾಜ್ಯದ ಗುರಿ ನನಸಾಗುವುದು” ಎಂದಿದ್ದಾರೆ.

ರೈತ ಹೋರಾಟದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಕೂಡ ಟ್ವೀಟ್ ಮಾಡಿ ಅನ್ನದಾತರಿಗೆ ಶುಭಾಶಯ ತಿಳಿಸಿದೆ.


ಇದನ್ನೂ ಓದಿ: ರಾಜಕೀಯ ಪಕ್ಷಗಳ ಬೆಂಬಲವಿಲ್ಲದೇ ರೈತರ ಹೋರಾಟ ಯಶಸ್ಸು ಕಂಡದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...