Homeರಾಷ್ಟ್ರೀಯನ್ಯಾಷನಲ್ ಹೆರಾಲ್ಡ್ ಪ್ರಕರಣ: 5ನೇ ದಿನವೂ ರಾಹುಲ್ ಗಾಂಧಿಯ ವಿಚಾರಣೆ ನಡೆಸಲಿರುವ ‘ಇಡಿ’!

ನ್ಯಾಷನಲ್ ಹೆರಾಲ್ಡ್ ಪ್ರಕರಣ: 5ನೇ ದಿನವೂ ರಾಹುಲ್ ಗಾಂಧಿಯ ವಿಚಾರಣೆ ನಡೆಸಲಿರುವ ‘ಇಡಿ’!

- Advertisement -
- Advertisement -

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋಮವಾರದಂದು ಜಾರಿ ನಿರ್ದೇಶನಾಲಯ (ಇಡಿ)ದ ವಿಚಾರಣೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ(ಇಂದು) ಕೂಡಾ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದ ವಿಚಾರಣೆಯು ರಾತ್ರಿ 9 ಗಂಟೆಯ ತನಕವೂ ನಡೆದಿತ್ತು ಎಂದು ಅವರು ಹೇಳಿದ್ದಾರೆ. ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಕಳೆದ ನಾಲ್ಕು ದಿನಗಳಲ್ಲಿ 40 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.

ರಾಹುಲ್ ಗಾಂಧಿ ಅವರು ಸೋಮವಾರ ವಿಚಾರಣೆ ಪುನರಾರಂಭಗೊಳ್ಳುವ ಮೊದಲು ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ಸೋನಿಯಾ ಗಾಂಧಿ ಅವರು ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೂ ಇಡಿ ಸಮನ್ಸ್ ನೀಡಿತ್ತಾದರೂ, ಅನಾರೋಗ್ಯದ ಕಾರಣ ಜೂನ್ 23 ರವರೆಗೆ ಅವರಿಗೆ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ – ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪಾತ್ರದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಪ್ರಕರಣವು ಕಾಂಗ್ರೆಸ್ ಮುಖವಾಣಿಯಾದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿದ್ದ AJL (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಂಡಿರುವನ್ನು ಒಳಗೊಂಡಿದೆ. ಪ್ರಸ್ತುತ ನ್ಯಾಶನಲ್ ಹೆರಾಲ್ಡ್‌‌ ಆನ್‌ಲೈನ್‌ನಲ್ಲಿ ಮಾತ್ರ ಇದೆ.

“ಎಜೆಎಲ್‌ನ 800 ಕೋಟಿ ರೂ. ಆಸ್ತಿಯನ್ನು ಯಂಗ್ ಇಂಡಿಯನ್ ಪಡೆದುಕೊಂಡಿದ್ದು, ಇದನ್ನು ಯಂಗ್‌ ಇಂಡಿಯನ್‌ ಷೇರುದಾರರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಎಂದು ಪರಿಗಣಿಸಬೇಕು, ಇದಕ್ಕಾಗಿ ಅವರು ತೆರಿಗೆ ಪಾವತಿಸಬೇಕಾಗಿದೆ” ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಯಂಗ್ ಇಂಡಿಯನ್ ಒಂದು ಲಾಭರಹಿತ ಸಂಸ್ಥೆಯಾಗಿದ್ದು, ಆದ್ದರಿಂದ ಷೇರುದಾರರು ಅದರ ಆಸ್ತಿಯಿಂದ ಯಾವುದೇ ಹಣವನ್ನು ಗಳಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದೆ.

ಅದಾಗ್ಯೂ ಯಂಗ್ ಇಂಡಿಯನ್ ಯಾವುದೇ ದತ್ತಿ ಕೆಲಸ ಮಾಡಿಲ್ಲ ಎಂದು ಜಾರಿ ನಿರ್ದೇಶನಾಲಯ ವಾದಿಸಿದ್ದು, ಅದರ ಏಕೈಕ ವಹಿವಾಟು AJL ನ ಸಾಲದ ವರ್ಗಾವಣೆಯಾಗಿತ್ತು ಎಂದು ತಿಳಿಸಿದೆ. ಆದರೆ ಕಾಂಗ್ರೆಸ್‌ ‘ಪತ್ರಿಕೆ’ ಕೂಡಾ ದತ್ತಿ ಕೆಲಸವೇ ಆಗಿದೆ ಎಂದು ತಿರುಗೇಟು ನೀಡಿದೆ. ಆದಾಯ ತೆರಿಗೆ ಇಲಾಖೆ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾಲ್ಕನೇ ದಿನ ಇಡಿ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ

ಕಳೆದ ವಾರ, ಕೇಂದ್ರ ದೆಹಲಿಯಲ್ಲಿರುವ ಇಡಿ ಕಚೇರಿಯಲ್ಲಿ ರಾಹುಲ್ ಗಾಂಧಿಯನ್ನು ಪ್ರಶ್ನಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆಸಿದ್ದರು. ಇದು ಆಡಳಿತಾರೂಢ ಬಿಜೆಪಿಯ ‘ಸೇಡಿನ ರಾಜಕೀಯ’ ಎಂದು ಅವರು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...