Homeಮುಖಪುಟನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕೆ ನಮ್ಮ ನಾಯಕರ ಮೇಲೆ ಪ್ರಕರಣ ದಾಖಲಿಸಿದೆ ಎಂಬ ನಮ್ಮ ದೀರ್ಘ ಸಮಯದ ಆರೋಪವನ್ನು ನ್ಯಾಯಾಲಯದ ಆದೇಶ ಪುಷ್ಠೀಕರಿಸಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ನಿನ್ನೆ (ಡಿ.16 ಮಂಗಳವಾರ) ದೆಹಲಿಯ ರೋಸ್ ಅವೆನ್ಯೂ ವಿಚಾರಣಾ ನ್ಯಾಯಾಲಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪರ ಆದೇಶ ನೀಡಿದೆ. ಈ ಹಿನ್ನೆಲೆ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ಇಂದು (ಡಿ.17 ಬುಧವಾರ) ಕಾಂಗ್ರೆಸ್ ದೇಶದ ವಿವಿದೆಡೆ ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ಕರೆದಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಡೆಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನ್ಯಾಷನಲ್ ಹೆರಾಲ್ಡ್ ಪ್ರಕರಣದ ಉದ್ದೇಶ ಗಾಂಧಿ ಕುಟುಂಬಕ್ಕೆ ಕಿರುಕುಳ ಕೊಡುವುದು ಮತ್ತು ವಿಪಕ್ಷಗಳನ್ನು ಗುರಿಯಾಗಿಸುವುದು” ಎಂದರು.

“ಇದು ಸೇಡಿನ ಪ್ರಕರಣವಾಗಿದೆ. ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಸತ್ಯಕ್ಕೆ ಯಾವಾಗಲೂ ಜಯವಾಗುತ್ತದೆ” ಎಂದು ಹೇಳಿದರು.

“ನ್ಯಾಯಾಲಯದ ತೀರ್ಪಿನ ಹಿನ್ನೆಲೆ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕಾರಣ, ತೀರ್ಪು ಅವರಿಗೆ ಕಪಾಳಮೋಕ್ಷವಾಗಿದೆ. ಅವರು ರಾಜೀನಾಮೆ ನೀಡಬೇಕು ಮತ್ತು ಈ ರೀತಿ ಜನರಿಗೆ ಕಿರುಕುಳ ಕೊಡುವುದನ್ನು ನಿಲ್ಲಿಸಬೇಕು. ಈ ರೀತಿ ನಡೆದುಕೊಂಡರೆ ಜನರು ಅದನ್ನು ಒಪ್ಪುವುದಿಲ್ಲ ಎಂಬುವುದನ್ನು ಅವರನ್ನು ತಿಳಿದುಕೊಳ್ಳಬೇಕು. ಕೇಂದ್ರ ತನಿಖಾ ಸಂಸ್ಥೆಗಳನ್ನು ಅವರು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಜೊತೆ, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಅಭಿಷೇಕ್ ಮನು ಸಿಂಘ್ವಿ, ಕೆ.ಸಿ ವೇಣುಗೋಪಾಲ್, ಪವನ್ ಖೇರಾ ಇದ್ದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು, ಸೇಡಿನ ರಾಜಕೀಯದ ಆರೋಪವನ್ನು ಪುನರುಚ್ಚರಿಸಿದರು. “ವಿರೋಧ ಪಕ್ಷಗಳನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳುವ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ನಮ್ಮ ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ” ಎಂದು ಹೇಳಿದರು.

“ನಾವು ಸೇಡಿನ ರಾಜಕೀಯವನ್ನು ಬಯಲು ಮಾಡುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ದೇಶದಾದ್ಯಂತ ಅವರು ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿ. 16) ನಿರಾಕರಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಈ ಕುರಿತು ಆದೇಶ ಪ್ರಕಟಿಸಿದ್ದಾರೆ.

ಇಡಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ದ ಸಲ್ಲಿಸಿರುವ ಪ್ರಾಸಿಕ್ಯೂಷನ್ ದೂರು ಕಾನೂನುಬದ್ಧವಾಗಿಲ್ಲ. ಏಕೆಂದರೆ, ಅದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಿಗದಿತ ಅಪರಾಧಕ್ಕೆ ಸಂಬಂಧಿಸಿದ ಎಫ್‌ಐಆರ್ ಅನ್ನು ಆಧರಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಕ್ರಿಯೆಗಳು ಸಂಜ್ಞೇ ಪರಿಗಣಿಸಿ ನಡೆಸಲಾಗಿದೆ ಮತ್ತು ಸಮನ್ಸ್ ಆದೇಶವನ್ನು ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಿಆರ್‌ಪಿಸಿ ಸೆಕ್ಷನ್ 200 ಅಡಿಯಲ್ಲಿ ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ನೀಡಲಾಗಿದೆಯೇ ಹೊರತು, ಎಫ್‌ಐಆರ್ ಮೇಲೆ ಅಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...