100 ಅಡಿ ಸುತ್ತಲತೆಯಷ್ಟು ಬೃಹತ್ ಹೊಂಡಗಳಿರುವ ರಸ್ತೆಯೊಂದರ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ದೇಶದ ರಸ್ತೆಯ ಸ್ಥಿತಿಯನ್ನು ಬಿಚ್ಚಿಟ್ಟಿದೆ. ದೈನಿಕ್ ಭಾಸ್ಕರ್ ಪತ್ರಿಕೆಯ ಪ್ರವೀಣ್ ಠಾಕೂರ್ ಅವರು ಚಿತ್ರೀಕರಿಸಿದ ವೈಮಾನಿಕ ವಿಡಿಯೊದಲ್ಲಿ ಬಿಹಾರದ ಮಧುಬನಿ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 227ಯ ಆತಂಕಕಾರಿ ಸ್ಥಿತಿ ಬಯಲಾಗಿದೆ.
ಸಂಪೂರ್ಣವಾಗಿ ಕೆಟ್ಟು ಹೋಗಿರುವ ಈ ರಸ್ತೆಯಲ್ಲಿ ವಾಹನಗಳು ಓಡಾಡುವ ದೃಶ್ಯಗಳೂ ವಿಡಿಯೊದಲ್ಲಿ ಕಾಣುತ್ತಿದೆ. ರಸ್ತೆಯ ಸ್ಥಿತಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಅವರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“90 ರ ದಶಕದ ಜಂಗಲ್ ರಾಜ್ನ ಬಿಹಾರದ ರಸ್ತೆಗಳ ಸ್ಥಿತಿಯನ್ನು ನೆನಪಿಸುತ್ತದೆ. ಇದು ಬಿಹಾರದ ಮಧುಬನಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 227 (ಎಲ್) ಆಗಿದೆ. ಇತ್ತೀಚೆಗೆ, ನಿತೀಶ್ ಕುಮಾರ್ ಅವರು ರಸ್ತೆ ನಿರ್ಮಾಣ ವಿಭಾಗದ ಜನರನ್ನು ಉದ್ದೇಶಿಸಿ ಮಾತನಾಡುತ್ತಾ, ಬಿಹಾರದ ರಸ್ತೆಗಳ ಉತ್ತಮ ಸ್ಥಿತಿಯ ಬಗ್ಗೆ ಅವರು ಎಲ್ಲರಿಗೂ ತಿಳಿಸಬೇಕು ಎಂದು ಹೇಳಿದ್ದರು” ಎಂದು ಪ್ರಶಾಂತ್ ವಿಡಿಯೊವೊಂದಿಗೆ ಟ್ವೀಟ್ ಮಾಡಿದ್ದಾರೆ.
90 के दशक के जंगलराज में बिहार में सड़कों की स्थिति की याद दिलाता यह बिहार के मधुबनी जिले का नेशनल हाईवे 227 (L) है।
अभी हाल में ही #Nitishkumar जी एक कार्यक्रम में पथ निर्माण विभाग के लोगों को बोल रहे थे कि बिहार में सड़कों की अच्छी स्थिति के बारे में उन्हें सबको बताना चाहिए। pic.twitter.com/Qp0ehEluty
— Prashant Kishor (@PrashantKishor) June 23, 2022
“2015ರಿಂದಲೂ ಈ ರಸ್ತೆಯ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ದುರಸ್ತಿಗೆ ಇದುವರೆಗೆ ಮೂರು ಬಾರಿ ಟೆಂಡರ್ ಕರೆದರೂ ಕಾಮಗಾರಿ ಪೂರ್ಣಗೊಳಿಸದೆ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ” ಎಂದು ದೈನಿಕ್ ಭಾಸ್ಕರ್ ಪತ್ರಿಕೆಯ ವರದಿ ಹೇಳಿದೆ.
ಎರಡು ವಾರಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಅವರು ಬಿಹಾರದ ರಸ್ತೆ ಸೌಕರ್ಯವು ಡಿಸೆಂಬರ್ 2024 ರ ವೇಳೆಗೆ ಅಮೆರಿಕಾದ ರಸ್ತೆಗೆ ಸಮನಾಗಿರುತ್ತದೆ ಎಂದು ಹೇಳಿದ್ದರು.
ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ : ಸಂತ್ರಸ್ತೆಯ ವಿಡಿಯೋ ಹಂಚಿಕೊಂಡಿದ್ದ ಬಿಜೆಪಿ ಶಾಸಕನ ಮೇಲೆ FIR
“ಕಳೆದ ಕೆಲವು ವರ್ಷಗಳಲ್ಲಿ ಬಿಹಾರದ ರಸ್ತೆ ಜಾಲವು ಮಹತ್ತರವಾದ ಸುಧಾರಣೆಯನ್ನು ಕಂಡಿದೆ” ಎಂದು ಅವರು ಹಾಜಿಪುರದಲ್ಲಿ ಗಂಗಾ ನದಿಯ ಮೇಲೆ ಪುನರ್ನಿರ್ಮಿಸಿದ ಮಹಾತ್ಮ ಗಾಂಧಿ ಸೇತುವಿನ ಪೂರ್ವ ಪಾರ್ಶ್ವವನ್ನು ಉದ್ಘಾಟಿಸಿ ಹೇಳಿದ್ದರು.