Homeರಾಷ್ಟ್ರೀಯಬಿಹಾರದ ರಾಷ್ಟ್ರೀಯ ಹೆದ್ದಾರಿ: ನೂರು ಅಡಿ ಸುತ್ತಲತೆಯ ದೊಡ್ಡ ಹತ್ತಾರು ಹೊಂಡಗಳು!

ಬಿಹಾರದ ರಾಷ್ಟ್ರೀಯ ಹೆದ್ದಾರಿ: ನೂರು ಅಡಿ ಸುತ್ತಲತೆಯ ದೊಡ್ಡ ಹತ್ತಾರು ಹೊಂಡಗಳು!

ಸಚಿವ ನಿತಿನ್ ಗಡ್ಕರಿ ಬಿಹಾರದ ರಸ್ತೆ ಸೌಕರ್ಯವು ಡಿಸೆಂಬರ್ 2024 ರ ವೇಳೆಗೆ ಅಮೆರಿಕಾದ ರಸ್ತೆಗೆ ಸಮನಾಗಿರುತ್ತದೆ ಎಂದು ಹೇಳಿದ್ದರು

- Advertisement -
- Advertisement -

100 ಅಡಿ ಸುತ್ತಲತೆಯಷ್ಟು ಬೃಹತ್‌ ಹೊಂಡಗಳಿರುವ ರಸ್ತೆಯೊಂದರ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ದೇಶದ ರಸ್ತೆಯ ಸ್ಥಿತಿಯನ್ನು ಬಿಚ್ಚಿಟ್ಟಿದೆ. ದೈನಿಕ್ ಭಾಸ್ಕರ್ ಪತ್ರಿಕೆಯ ಪ್ರವೀಣ್ ಠಾಕೂರ್ ಅವರು ಚಿತ್ರೀಕರಿಸಿದ ವೈಮಾನಿಕ ವಿಡಿಯೊದಲ್ಲಿ ಬಿಹಾರದ ಮಧುಬನಿ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 227ಯ ಆತಂಕಕಾರಿ ಸ್ಥಿತಿ ಬಯಲಾಗಿದೆ.

ಸಂಪೂರ್ಣವಾಗಿ ಕೆಟ್ಟು ಹೋಗಿರುವ ಈ ರಸ್ತೆಯಲ್ಲಿ ವಾಹನಗಳು ಓಡಾಡುವ ದೃಶ್ಯಗಳೂ ವಿಡಿಯೊದಲ್ಲಿ ಕಾಣುತ್ತಿದೆ. ರಸ್ತೆಯ ಸ್ಥಿತಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ ಅವರು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“90 ರ ದಶಕದ ಜಂಗಲ್ ರಾಜ್‌ನ ಬಿಹಾರದ ರಸ್ತೆಗಳ ಸ್ಥಿತಿಯನ್ನು ನೆನಪಿಸುತ್ತದೆ. ಇದು ಬಿಹಾರದ ಮಧುಬನಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 227 (ಎಲ್) ಆಗಿದೆ. ಇತ್ತೀಚೆಗೆ, ನಿತೀಶ್ ಕುಮಾರ್ ಅವರು ರಸ್ತೆ ನಿರ್ಮಾಣ ವಿಭಾಗದ ಜನರನ್ನು ಉದ್ದೇಶಿಸಿ ಮಾತನಾಡುತ್ತಾ, ಬಿಹಾರದ ರಸ್ತೆಗಳ ಉತ್ತಮ ಸ್ಥಿತಿಯ ಬಗ್ಗೆ ಅವರು ಎಲ್ಲರಿಗೂ ತಿಳಿಸಬೇಕು ಎಂದು ಹೇಳಿದ್ದರು” ಎಂದು ಪ್ರಶಾಂತ್‌ ವಿಡಿಯೊವೊಂದಿಗೆ ಟ್ವೀಟ್ ಮಾಡಿದ್ದಾರೆ.

“2015ರಿಂದಲೂ ಈ ರಸ್ತೆಯ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ದುರಸ್ತಿಗೆ ಇದುವರೆಗೆ ಮೂರು ಬಾರಿ ಟೆಂಡರ್‌ ಕರೆದರೂ ಕಾಮಗಾರಿ ಪೂರ್ಣಗೊಳಿಸದೆ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ” ಎಂದು ದೈನಿಕ್ ಭಾಸ್ಕರ್ ಪತ್ರಿಕೆಯ ವರದಿ ಹೇಳಿದೆ.

 

ಎರಡು ವಾರಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಅವರು ಬಿಹಾರದ ರಸ್ತೆ ಸೌಕರ್ಯವು ಡಿಸೆಂಬರ್ 2024 ರ ವೇಳೆಗೆ ಅಮೆರಿಕಾದ ರಸ್ತೆಗೆ ಸಮನಾಗಿರುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ : ಸಂತ್ರಸ್ತೆಯ ವಿಡಿಯೋ ಹಂಚಿಕೊಂಡಿದ್ದ ಬಿಜೆಪಿ ಶಾಸಕನ ಮೇಲೆ FIR

“ಕಳೆದ ಕೆಲವು ವರ್ಷಗಳಲ್ಲಿ ಬಿಹಾರದ ರಸ್ತೆ ಜಾಲವು ಮಹತ್ತರವಾದ ಸುಧಾರಣೆಯನ್ನು ಕಂಡಿದೆ” ಎಂದು ಅವರು ಹಾಜಿಪುರದಲ್ಲಿ ಗಂಗಾ ನದಿಯ ಮೇಲೆ ಪುನರ್ನಿರ್ಮಿಸಿದ ಮಹಾತ್ಮ ಗಾಂಧಿ ಸೇತುವಿನ ಪೂರ್ವ ಪಾರ್ಶ್ವವನ್ನು ಉದ್ಘಾಟಿಸಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...