Homeಕರ್ನಾಟಕಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜು: ಟೋಲ್ ಹೆಚ್ಚಳಕ್ಕೆ ಜೆಡಿಎಸ್ ಕಿಡಿ

ಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜು: ಟೋಲ್ ಹೆಚ್ಚಳಕ್ಕೆ ಜೆಡಿಎಸ್ ಕಿಡಿ

- Advertisement -
- Advertisement -

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಹೆಚ್ಚಳಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜಾಗಿದೆ ಎಂದು ಕಿಡಿಕಾರಿದೆ.

ಈ ಕುರಿತು ಪಕ್ಷದ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ್ದು, “ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಉದ್ಘಾಟನೆ ಆಗಿ ಕೇವಲ ಹದಿನೇಳು ದಿನವೂ ಆಗಿಲ್ಲ, ಆಗಲೇ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಕಾರು, ಜೀಪು, ವ್ಯಾನುಗಳ ಏಕಮುಖ ಸಂಚಾರಕ್ಕೆ ಈ ಹಿಂದೆ ಇದ್ದ 135 ರೂ. ಶುಲ್ಕವನ್ನು‌ 165 ರೂ.ಗಳಿಗೆ ಏರಿಸಲಾಗಿದೆ. ಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಈ ಎಕ್ಸ್‌ಪ್ರೆಸ್‌ ಹೆದ್ದಾರಿ ಜಗತ್ತಿನ ಅತಿ ದೊಡ್ಡ ಸಾಧನೆ ಎಂದು ಬೀಗುತ್ತಿದ್ದ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈ ರೀತಿ ಮನಬಂದಂತೆ ಟೋಲ್ ಶುಲ್ಕ ಹೆಚ್ಚಳದ ಬಗ್ಗೆ ಮಾತೇ ಆಡುವುದಿಲ್ಲ. ಜನರ ತೆರಿಗೆ ಹಣದಲ್ಲಿ ರಸ್ತೆ ನಿರ್ಮಿಸಿ, ಜನರಿಂದಲೇ ಮಿತಿ ಇಲ್ಲದೆ ಟೋಲ್ ಶುಲ್ಕ ಪೀಕುವ ಕೊಳಕು ರಾಜಕಾರಣವಿದು ಎಂದು ಜೆಡಿಎಸ್ ಹೇಳಿದೆ.

ಜನಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವಾಗ ಎಲ್ಲ ಲಘು ಹಾಗೂ ಭಾರಿ ವಾಹನಗಳ ಟೋಲ್ ಶುಲ್ಕ ಹೆಚ್ಚಿಸುವುದು ಯಾವ ಸೀಮೆಯ ನಿರ್ಧಾರ? ಮತ್ತೊಮ್ಮೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಲಿದೆ. ಇದು ಜನದ್ರೋಹಿಯಾದ ನಡೆ. ಈ ಡಬಲ್ ಎಂಜಿನ್ ಬಿಜೆಪಿ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಬಿಡದು ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಟೋಲ್ ಹೆಚ್ಚಳದ ಕುರಿತು ಟ್ರೋಲ್‌ಗಳು ಆರಂಭವಾಗಿವೆ. “ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹದಿನೇಳೇ ದಿನಕ್ಕೆ ಟೋಲ್ ದರ ಹೆಚ್ಚಳ..! ಇದಲ್ಲವೇ ನಿಜವಾದ ಬದಲಾವಣೆಯ ಸಾಧನೆ ಅನ್ನೋದು..? ವಾವ್ ಮೋದೀಜೀ ವಾವ್..!” ಎಂದು ದೀಪು ಗೌಡ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರ್ಕಾರ ಮೈಸೂರು-ಬೆಂಗಳೂರು ರೋಡ್ ಮಾಡಿರೋದು ಜನರ ಅನುಕೂಲಕ್ಕಾಗಿ ಅನ್ನೋದು ಶುದ್ಧ ಸುಳ್ಳು, ಜನರಿಂದ ಸುಲಿಗೆ ಮಾಡೋದಷ್ಟೇ ಈ ಬಿಜೆಪಿ ಸರ್ಕಾರದ ಉದ್ದೇಶ. ರಸ್ತೆ ಉದ್ಘಾಟನೆಯಾದ 17 ದಿನದಲ್ಲಿ ಟೋಲ್ ಹೆಚ್ಚಳ ಮಾಡಿದ್ದಾರೆ ಅಂದರೇ ಇದು ಸುಲಿಗೆ ಅಲ್ಲದೇ ಇನ್ನೇನೂ ಅಲ್ಲ ಎಂದು ಪ್ರತಾಪ್ ಕಣಗಲ್ ಹೇಳಿದ್ದಾರೆ.

Service ರೋಡ್ ಕೊಡದೆ ಹೀಗೆ ಹಗಲು ದರೋಡೆ ನಡೆಸುತ್ತ ಇರೋದು ಎಷ್ಟು ಸರಿ ಎಂದು ಕೃಷ್ಣರವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಸಾಮಾನ್ಯರಿಗೆ ಹೊರೆ: 15 ದಿನಗಳಲ್ಲೇ ಬೆಂಗಳೂರು-ಮೈಸೂರು ರಸ್ತೆ ಟೋಲ್ ದರ ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...