Homeಸಿನಿಮಾಕ್ರೀಡೆಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ರಾಂಚಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

- Advertisement -
- Advertisement -

ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕ್ರೀಡೆ ಎಂದರೇ ಕ್ರಿಕೆಟ್ ಎನ್ನುವಂತಾಗಿದೆ. ಬೇರೆ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಸಿಗುತ್ತಿರುವ ಮಾನ್ಯತೆ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಜಾರ್ಖಾಂಡ್‌ನ ಈ ಕರಾಟೆ ಚಾಂಪಿಯನ್ ಬಡತನದಿಂದಾಗಿ ಮದ್ಯ ಮಾರಬೇಕಾದ ಪರಿಸ್ಥಿತಿ ತಲುಪಿದ್ದಾರೆ.

34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಸೇರಿದಂತೆ, ಜಾರ್ಖಂಡ್ ರಾಜ್ಯಕ್ಕಾಗಿ ಡಜನ್‌ಗಟ್ಟಲೇ ಪದಕಗಳನ್ನು ಬಾಚಿಕೊಂಡಿದ್ದ ರಾಷ್ಟ್ರೀಯ ಕರಾಟೆ ಚಾಂಪಿಯನ್ ವಿಮಲಾ ಮುಂಡಾ, ಜೀವನೋಪಾಯಕ್ಕಾಗಿ ‘ಹಾಂಡಿಯಾ’ (ಅಕ್ಕಿಯಿಂದ ತಯಾರಿಸುವ ಮದ್ಯ) ಮಾರಾಟ ಮಾಡುವ ಸ್ಥಿತಿಗೆ ಬಂದಿದ್ದಾರೆ.

“ಕೆಟ್ಟ ಆರ್ಥಿಕ ಪರಿಸ್ಥಿತಿಗಳಿಂದಾಗಿ, ನನ್ನ ಕುಟುಂಬದ ತೀವ್ರ ಬಡತನಕ್ಕೆ ದೂಡಿದೆ. ಕುಟುಂಬದ ಜೀವನೋಪಾಯಕ್ಕಾಗಿ ಜೊತೆಗೆ ನನ್ನ ಕರಾಟೆ ಅಭ್ಯಾಸವನ್ನು ಮುಂದುವರೆಸಲು ಲಾಕ್‌ಡೌನ್ ಸಮಯದಲ್ಲಿ ಈ ವ್ಯವಹಾರವನ್ನು ಪ್ರಾರಂಭಿಸಬೇಕಾಯಿತು” ಎಂದು 26 ವರ್ಷದ ಕ್ರೀಡಾಪಟು ಹೇಳಿದ್ದಾರೆ.

ಇದನ್ನೂ ಓದಿ: ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

“ಈ ಆಟದಲ್ಲಿ, ಕ್ರೀಡಾಪಟುಗಳೇ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಪ್ರತಿ ಪಂದ್ಯಾವಳಿಗಾಗಿ ಪ್ರಯಾಣ ವೆಚ್ಚ ತಾವೇ ಭರಿಸಬೇಕಾಗುತ್ತದೆ, ಇದಕ್ಕೆ ಸಾಕಷ್ಟು ಹಣ ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

5ನೇ ತರಗತಿಯಿಂದಲೇ ಕರಾಟೆ ಕಲಿಯಲು ಪ್ರಾರಂಭಿಸಿ, ರಾಜ್ಯಕ್ಕಾಗಿ ಹಲವಾರು ಪದಕಗಳನ್ನು ತಂದಿರುವ ಈ  ಜಾರ್ಖಂಡ್ ಯುವತಿ, ತನ್ನ ಬಳಿ ಹಲವಾರು ಪದಕಗಳು ಇವೆ. ಆದರೆ ಅವುಗಳನ್ನು ಸುರಕ್ಷಿತವಾಗಿಡಲು ಮನೆಯಲ್ಲಿ ಸರಿಯಾದ ಸ್ಥಳವಿಲ್ಲ ಹಾಗಾಗಿ ಅವುಗಳಲ್ಲಿ ಹೆಚ್ಚಿನವು ಮುರಿದುಹೋಗಿವೆ. ಕೆಲವೊಂದು ಬಣ್ಣ ಕಳೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಮಲಾ ಮುಂಡಾ ಅವರ ತಾಯಿ  ದಿನಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ವೃದ್ಧಾಪ್ಯ ಮತ್ತು ಅನಾರೋಗ್ಯದ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

“2011 ರಲ್ಲಿ ಜಾರ್ಖಂಡ್‌ನಲ್ಲಿ ಆಯೋಜಿಸಿದ್ದ 34 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಾನು ಬೆಳ್ಳಿ ಪದಕ ಗೆದ್ದಿದ್ದೇನೆ. 2014 ರಲ್ಲಿ ಅಕ್ಷಯ್ ಕುಮಾರ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಾನು ಎರಡು ಚಿನ್ನದ ಪದಕಗಳನ್ನು ಕೂಡ ಪಡೆದಿದ್ದೇನೆ” ಎಂದು ವಿಮಲಾ ಮುಂಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ರಾಜ್ಯ ಸರ್ಕಾರದಿಂದ ಸ್ವಲ್ಪ ವಿದ್ಯಾರ್ಥಿವೇತನ ಅಥವಾ ಉದ್ಯೋಗ ಸಿಗುವ ಮುಂಡಾ ಅವರ ನಿರೀಕ್ಷೆ ಹುಸಿಯಾಗಿದೆ. ಬೇರೆ ದಾರಿಯಿಲ್ಲದ ಕಾರಣ, ಆಕೆ ತನ್ನ ತಾಯಿಯೊಂದಿಗೆ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ.

ಪದಕಗಳು ಮತ್ತು ಪ್ರಮಾಣಪತ್ರಗಳ ರಾಶಿಯನ್ನು ಕಂಡಾಗ ಮೊದಲು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಈಕೆ ಈಗ ಸಮಯ ಮತ್ತು ಕಠಿಣ ವಾಸ್ತವತೆ ತನ್ನನ್ನು ಬದಲಾಯಿಸಿದೆ ಎನ್ನುತ್ತಾರೆ.

ಮುಂಡಾ ಅವರು ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಬಯಸುವುದಿಲ್ಲ. ಆದರೆ 2019 ರಲ್ಲಿ ರಾಜ್ಯಕ್ಕೆ ಪದಕಗಳನ್ನು ಗೆದ್ದ 264 ಕ್ರೀಡಾಪಟುಗಳಲ್ಲಿ 33 ಜನರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಆಯ್ಕೆ ಮಾಡಲಾಗಿದೆ . ಅದರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು ಎಂದು ಬಯಸುತ್ತಾರೆ.

“ಹಿಂದಿನ ಸರ್ಕಾರವು ಪದಕಗಳನ್ನು ಪಡೆದ ಕ್ರೀಡಾಪಟುಗಳ ನೇರ ನೇಮಕಾತಿಯನ್ನು ಘೋಷಿಸಿದ ನಂತರ ನಾವು ಭರವಸೆ ಹೊಂದಿದ್ದೇವು. ಆದರೆ ಇಂದಿನ ಸರ್ಕಾರವು ಈ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಆ ಭರವಸೆಯು ದಿನ ಕಳೆದಂತೆ ಕಡಿಮೆಯಾಯಿತು” ಎಂದರು.

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ಆದೇಶಿಸಿದ್ದಾರೆ.

ರಾಂಚಿ ಜಿಲ್ಲಾಧಿಕಾರಿಗಳಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸೊರೆನ್, ಇದನ್ನು ತಕ್ಷಣ ಗಮನಿಸಿ, ಕ್ರೀಡಾ ಕಾರ್ಯದರ್ಶಿಯೊಂದಿಗೆ ಮಾತಾನಾಡಿ ಸಹೋದರಿ ವಿಮಲಾಗೆ ಸಹಾಯ ಮಾಡಿ ಎಂದಿದ್ದಾರೆ. ಜೊತೆಗೆ ಮುಂಬರುವ ಕ್ರೀಡಾ ನೀತಿಯ ಅನುಷ್ಠಾನದ ನಂತರ ಆಟಗಾರರ ಭವಿಷ್ಯವು ಸುಧಾರಿಸುತ್ತದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...