Homeಸಿನಿಮಾಕ್ರೀಡೆಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ರಾಂಚಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

- Advertisement -
- Advertisement -

ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕ್ರೀಡೆ ಎಂದರೇ ಕ್ರಿಕೆಟ್ ಎನ್ನುವಂತಾಗಿದೆ. ಬೇರೆ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಸಿಗುತ್ತಿರುವ ಮಾನ್ಯತೆ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಜಾರ್ಖಾಂಡ್‌ನ ಈ ಕರಾಟೆ ಚಾಂಪಿಯನ್ ಬಡತನದಿಂದಾಗಿ ಮದ್ಯ ಮಾರಬೇಕಾದ ಪರಿಸ್ಥಿತಿ ತಲುಪಿದ್ದಾರೆ.

34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಸೇರಿದಂತೆ, ಜಾರ್ಖಂಡ್ ರಾಜ್ಯಕ್ಕಾಗಿ ಡಜನ್‌ಗಟ್ಟಲೇ ಪದಕಗಳನ್ನು ಬಾಚಿಕೊಂಡಿದ್ದ ರಾಷ್ಟ್ರೀಯ ಕರಾಟೆ ಚಾಂಪಿಯನ್ ವಿಮಲಾ ಮುಂಡಾ, ಜೀವನೋಪಾಯಕ್ಕಾಗಿ ‘ಹಾಂಡಿಯಾ’ (ಅಕ್ಕಿಯಿಂದ ತಯಾರಿಸುವ ಮದ್ಯ) ಮಾರಾಟ ಮಾಡುವ ಸ್ಥಿತಿಗೆ ಬಂದಿದ್ದಾರೆ.

“ಕೆಟ್ಟ ಆರ್ಥಿಕ ಪರಿಸ್ಥಿತಿಗಳಿಂದಾಗಿ, ನನ್ನ ಕುಟುಂಬದ ತೀವ್ರ ಬಡತನಕ್ಕೆ ದೂಡಿದೆ. ಕುಟುಂಬದ ಜೀವನೋಪಾಯಕ್ಕಾಗಿ ಜೊತೆಗೆ ನನ್ನ ಕರಾಟೆ ಅಭ್ಯಾಸವನ್ನು ಮುಂದುವರೆಸಲು ಲಾಕ್‌ಡೌನ್ ಸಮಯದಲ್ಲಿ ಈ ವ್ಯವಹಾರವನ್ನು ಪ್ರಾರಂಭಿಸಬೇಕಾಯಿತು” ಎಂದು 26 ವರ್ಷದ ಕ್ರೀಡಾಪಟು ಹೇಳಿದ್ದಾರೆ.

ಇದನ್ನೂ ಓದಿ: ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

“ಈ ಆಟದಲ್ಲಿ, ಕ್ರೀಡಾಪಟುಗಳೇ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಪ್ರತಿ ಪಂದ್ಯಾವಳಿಗಾಗಿ ಪ್ರಯಾಣ ವೆಚ್ಚ ತಾವೇ ಭರಿಸಬೇಕಾಗುತ್ತದೆ, ಇದಕ್ಕೆ ಸಾಕಷ್ಟು ಹಣ ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

5ನೇ ತರಗತಿಯಿಂದಲೇ ಕರಾಟೆ ಕಲಿಯಲು ಪ್ರಾರಂಭಿಸಿ, ರಾಜ್ಯಕ್ಕಾಗಿ ಹಲವಾರು ಪದಕಗಳನ್ನು ತಂದಿರುವ ಈ  ಜಾರ್ಖಂಡ್ ಯುವತಿ, ತನ್ನ ಬಳಿ ಹಲವಾರು ಪದಕಗಳು ಇವೆ. ಆದರೆ ಅವುಗಳನ್ನು ಸುರಕ್ಷಿತವಾಗಿಡಲು ಮನೆಯಲ್ಲಿ ಸರಿಯಾದ ಸ್ಥಳವಿಲ್ಲ ಹಾಗಾಗಿ ಅವುಗಳಲ್ಲಿ ಹೆಚ್ಚಿನವು ಮುರಿದುಹೋಗಿವೆ. ಕೆಲವೊಂದು ಬಣ್ಣ ಕಳೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಮಲಾ ಮುಂಡಾ ಅವರ ತಾಯಿ  ದಿನಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ವೃದ್ಧಾಪ್ಯ ಮತ್ತು ಅನಾರೋಗ್ಯದ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

“2011 ರಲ್ಲಿ ಜಾರ್ಖಂಡ್‌ನಲ್ಲಿ ಆಯೋಜಿಸಿದ್ದ 34 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಾನು ಬೆಳ್ಳಿ ಪದಕ ಗೆದ್ದಿದ್ದೇನೆ. 2014 ರಲ್ಲಿ ಅಕ್ಷಯ್ ಕುಮಾರ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಾನು ಎರಡು ಚಿನ್ನದ ಪದಕಗಳನ್ನು ಕೂಡ ಪಡೆದಿದ್ದೇನೆ” ಎಂದು ವಿಮಲಾ ಮುಂಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ರಾಜ್ಯ ಸರ್ಕಾರದಿಂದ ಸ್ವಲ್ಪ ವಿದ್ಯಾರ್ಥಿವೇತನ ಅಥವಾ ಉದ್ಯೋಗ ಸಿಗುವ ಮುಂಡಾ ಅವರ ನಿರೀಕ್ಷೆ ಹುಸಿಯಾಗಿದೆ. ಬೇರೆ ದಾರಿಯಿಲ್ಲದ ಕಾರಣ, ಆಕೆ ತನ್ನ ತಾಯಿಯೊಂದಿಗೆ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ.

ಪದಕಗಳು ಮತ್ತು ಪ್ರಮಾಣಪತ್ರಗಳ ರಾಶಿಯನ್ನು ಕಂಡಾಗ ಮೊದಲು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಈಕೆ ಈಗ ಸಮಯ ಮತ್ತು ಕಠಿಣ ವಾಸ್ತವತೆ ತನ್ನನ್ನು ಬದಲಾಯಿಸಿದೆ ಎನ್ನುತ್ತಾರೆ.

ಮುಂಡಾ ಅವರು ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಬಯಸುವುದಿಲ್ಲ. ಆದರೆ 2019 ರಲ್ಲಿ ರಾಜ್ಯಕ್ಕೆ ಪದಕಗಳನ್ನು ಗೆದ್ದ 264 ಕ್ರೀಡಾಪಟುಗಳಲ್ಲಿ 33 ಜನರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಆಯ್ಕೆ ಮಾಡಲಾಗಿದೆ . ಅದರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು ಎಂದು ಬಯಸುತ್ತಾರೆ.

“ಹಿಂದಿನ ಸರ್ಕಾರವು ಪದಕಗಳನ್ನು ಪಡೆದ ಕ್ರೀಡಾಪಟುಗಳ ನೇರ ನೇಮಕಾತಿಯನ್ನು ಘೋಷಿಸಿದ ನಂತರ ನಾವು ಭರವಸೆ ಹೊಂದಿದ್ದೇವು. ಆದರೆ ಇಂದಿನ ಸರ್ಕಾರವು ಈ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಆ ಭರವಸೆಯು ದಿನ ಕಳೆದಂತೆ ಕಡಿಮೆಯಾಯಿತು” ಎಂದರು.

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ಆದೇಶಿಸಿದ್ದಾರೆ.

ರಾಂಚಿ ಜಿಲ್ಲಾಧಿಕಾರಿಗಳಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸೊರೆನ್, ಇದನ್ನು ತಕ್ಷಣ ಗಮನಿಸಿ, ಕ್ರೀಡಾ ಕಾರ್ಯದರ್ಶಿಯೊಂದಿಗೆ ಮಾತಾನಾಡಿ ಸಹೋದರಿ ವಿಮಲಾಗೆ ಸಹಾಯ ಮಾಡಿ ಎಂದಿದ್ದಾರೆ. ಜೊತೆಗೆ ಮುಂಬರುವ ಕ್ರೀಡಾ ನೀತಿಯ ಅನುಷ್ಠಾನದ ನಂತರ ಆಟಗಾರರ ಭವಿಷ್ಯವು ಸುಧಾರಿಸುತ್ತದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...