Homeಸಿನಿಮಾಕ್ರೀಡೆಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ರಾಂಚಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

- Advertisement -
- Advertisement -

ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕ್ರೀಡೆ ಎಂದರೇ ಕ್ರಿಕೆಟ್ ಎನ್ನುವಂತಾಗಿದೆ. ಬೇರೆ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಸಿಗುತ್ತಿರುವ ಮಾನ್ಯತೆ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಜಾರ್ಖಾಂಡ್‌ನ ಈ ಕರಾಟೆ ಚಾಂಪಿಯನ್ ಬಡತನದಿಂದಾಗಿ ಮದ್ಯ ಮಾರಬೇಕಾದ ಪರಿಸ್ಥಿತಿ ತಲುಪಿದ್ದಾರೆ.

34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಸೇರಿದಂತೆ, ಜಾರ್ಖಂಡ್ ರಾಜ್ಯಕ್ಕಾಗಿ ಡಜನ್‌ಗಟ್ಟಲೇ ಪದಕಗಳನ್ನು ಬಾಚಿಕೊಂಡಿದ್ದ ರಾಷ್ಟ್ರೀಯ ಕರಾಟೆ ಚಾಂಪಿಯನ್ ವಿಮಲಾ ಮುಂಡಾ, ಜೀವನೋಪಾಯಕ್ಕಾಗಿ ‘ಹಾಂಡಿಯಾ’ (ಅಕ್ಕಿಯಿಂದ ತಯಾರಿಸುವ ಮದ್ಯ) ಮಾರಾಟ ಮಾಡುವ ಸ್ಥಿತಿಗೆ ಬಂದಿದ್ದಾರೆ.

“ಕೆಟ್ಟ ಆರ್ಥಿಕ ಪರಿಸ್ಥಿತಿಗಳಿಂದಾಗಿ, ನನ್ನ ಕುಟುಂಬದ ತೀವ್ರ ಬಡತನಕ್ಕೆ ದೂಡಿದೆ. ಕುಟುಂಬದ ಜೀವನೋಪಾಯಕ್ಕಾಗಿ ಜೊತೆಗೆ ನನ್ನ ಕರಾಟೆ ಅಭ್ಯಾಸವನ್ನು ಮುಂದುವರೆಸಲು ಲಾಕ್‌ಡೌನ್ ಸಮಯದಲ್ಲಿ ಈ ವ್ಯವಹಾರವನ್ನು ಪ್ರಾರಂಭಿಸಬೇಕಾಯಿತು” ಎಂದು 26 ವರ್ಷದ ಕ್ರೀಡಾಪಟು ಹೇಳಿದ್ದಾರೆ.

ಇದನ್ನೂ ಓದಿ: ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

“ಈ ಆಟದಲ್ಲಿ, ಕ್ರೀಡಾಪಟುಗಳೇ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಪ್ರತಿ ಪಂದ್ಯಾವಳಿಗಾಗಿ ಪ್ರಯಾಣ ವೆಚ್ಚ ತಾವೇ ಭರಿಸಬೇಕಾಗುತ್ತದೆ, ಇದಕ್ಕೆ ಸಾಕಷ್ಟು ಹಣ ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

5ನೇ ತರಗತಿಯಿಂದಲೇ ಕರಾಟೆ ಕಲಿಯಲು ಪ್ರಾರಂಭಿಸಿ, ರಾಜ್ಯಕ್ಕಾಗಿ ಹಲವಾರು ಪದಕಗಳನ್ನು ತಂದಿರುವ ಈ  ಜಾರ್ಖಂಡ್ ಯುವತಿ, ತನ್ನ ಬಳಿ ಹಲವಾರು ಪದಕಗಳು ಇವೆ. ಆದರೆ ಅವುಗಳನ್ನು ಸುರಕ್ಷಿತವಾಗಿಡಲು ಮನೆಯಲ್ಲಿ ಸರಿಯಾದ ಸ್ಥಳವಿಲ್ಲ ಹಾಗಾಗಿ ಅವುಗಳಲ್ಲಿ ಹೆಚ್ಚಿನವು ಮುರಿದುಹೋಗಿವೆ. ಕೆಲವೊಂದು ಬಣ್ಣ ಕಳೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಮಲಾ ಮುಂಡಾ ಅವರ ತಾಯಿ  ದಿನಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ವೃದ್ಧಾಪ್ಯ ಮತ್ತು ಅನಾರೋಗ್ಯದ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

“2011 ರಲ್ಲಿ ಜಾರ್ಖಂಡ್‌ನಲ್ಲಿ ಆಯೋಜಿಸಿದ್ದ 34 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಾನು ಬೆಳ್ಳಿ ಪದಕ ಗೆದ್ದಿದ್ದೇನೆ. 2014 ರಲ್ಲಿ ಅಕ್ಷಯ್ ಕುಮಾರ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಾನು ಎರಡು ಚಿನ್ನದ ಪದಕಗಳನ್ನು ಕೂಡ ಪಡೆದಿದ್ದೇನೆ” ಎಂದು ವಿಮಲಾ ಮುಂಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ರಾಜ್ಯ ಸರ್ಕಾರದಿಂದ ಸ್ವಲ್ಪ ವಿದ್ಯಾರ್ಥಿವೇತನ ಅಥವಾ ಉದ್ಯೋಗ ಸಿಗುವ ಮುಂಡಾ ಅವರ ನಿರೀಕ್ಷೆ ಹುಸಿಯಾಗಿದೆ. ಬೇರೆ ದಾರಿಯಿಲ್ಲದ ಕಾರಣ, ಆಕೆ ತನ್ನ ತಾಯಿಯೊಂದಿಗೆ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ.

ಪದಕಗಳು ಮತ್ತು ಪ್ರಮಾಣಪತ್ರಗಳ ರಾಶಿಯನ್ನು ಕಂಡಾಗ ಮೊದಲು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಈಕೆ ಈಗ ಸಮಯ ಮತ್ತು ಕಠಿಣ ವಾಸ್ತವತೆ ತನ್ನನ್ನು ಬದಲಾಯಿಸಿದೆ ಎನ್ನುತ್ತಾರೆ.

ಮುಂಡಾ ಅವರು ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಬಯಸುವುದಿಲ್ಲ. ಆದರೆ 2019 ರಲ್ಲಿ ರಾಜ್ಯಕ್ಕೆ ಪದಕಗಳನ್ನು ಗೆದ್ದ 264 ಕ್ರೀಡಾಪಟುಗಳಲ್ಲಿ 33 ಜನರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಆಯ್ಕೆ ಮಾಡಲಾಗಿದೆ . ಅದರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು ಎಂದು ಬಯಸುತ್ತಾರೆ.

“ಹಿಂದಿನ ಸರ್ಕಾರವು ಪದಕಗಳನ್ನು ಪಡೆದ ಕ್ರೀಡಾಪಟುಗಳ ನೇರ ನೇಮಕಾತಿಯನ್ನು ಘೋಷಿಸಿದ ನಂತರ ನಾವು ಭರವಸೆ ಹೊಂದಿದ್ದೇವು. ಆದರೆ ಇಂದಿನ ಸರ್ಕಾರವು ಈ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಆ ಭರವಸೆಯು ದಿನ ಕಳೆದಂತೆ ಕಡಿಮೆಯಾಯಿತು” ಎಂದರು.

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ಆದೇಶಿಸಿದ್ದಾರೆ.

ರಾಂಚಿ ಜಿಲ್ಲಾಧಿಕಾರಿಗಳಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸೊರೆನ್, ಇದನ್ನು ತಕ್ಷಣ ಗಮನಿಸಿ, ಕ್ರೀಡಾ ಕಾರ್ಯದರ್ಶಿಯೊಂದಿಗೆ ಮಾತಾನಾಡಿ ಸಹೋದರಿ ವಿಮಲಾಗೆ ಸಹಾಯ ಮಾಡಿ ಎಂದಿದ್ದಾರೆ. ಜೊತೆಗೆ ಮುಂಬರುವ ಕ್ರೀಡಾ ನೀತಿಯ ಅನುಷ್ಠಾನದ ನಂತರ ಆಟಗಾರರ ಭವಿಷ್ಯವು ಸುಧಾರಿಸುತ್ತದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...