Homeಸಿನಿಮಾಕ್ರೀಡೆಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ರಾಂಚಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

- Advertisement -
- Advertisement -

ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕ್ರೀಡೆ ಎಂದರೇ ಕ್ರಿಕೆಟ್ ಎನ್ನುವಂತಾಗಿದೆ. ಬೇರೆ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಸಿಗುತ್ತಿರುವ ಮಾನ್ಯತೆ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಜಾರ್ಖಾಂಡ್‌ನ ಈ ಕರಾಟೆ ಚಾಂಪಿಯನ್ ಬಡತನದಿಂದಾಗಿ ಮದ್ಯ ಮಾರಬೇಕಾದ ಪರಿಸ್ಥಿತಿ ತಲುಪಿದ್ದಾರೆ.

34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಸೇರಿದಂತೆ, ಜಾರ್ಖಂಡ್ ರಾಜ್ಯಕ್ಕಾಗಿ ಡಜನ್‌ಗಟ್ಟಲೇ ಪದಕಗಳನ್ನು ಬಾಚಿಕೊಂಡಿದ್ದ ರಾಷ್ಟ್ರೀಯ ಕರಾಟೆ ಚಾಂಪಿಯನ್ ವಿಮಲಾ ಮುಂಡಾ, ಜೀವನೋಪಾಯಕ್ಕಾಗಿ ‘ಹಾಂಡಿಯಾ’ (ಅಕ್ಕಿಯಿಂದ ತಯಾರಿಸುವ ಮದ್ಯ) ಮಾರಾಟ ಮಾಡುವ ಸ್ಥಿತಿಗೆ ಬಂದಿದ್ದಾರೆ.

“ಕೆಟ್ಟ ಆರ್ಥಿಕ ಪರಿಸ್ಥಿತಿಗಳಿಂದಾಗಿ, ನನ್ನ ಕುಟುಂಬದ ತೀವ್ರ ಬಡತನಕ್ಕೆ ದೂಡಿದೆ. ಕುಟುಂಬದ ಜೀವನೋಪಾಯಕ್ಕಾಗಿ ಜೊತೆಗೆ ನನ್ನ ಕರಾಟೆ ಅಭ್ಯಾಸವನ್ನು ಮುಂದುವರೆಸಲು ಲಾಕ್‌ಡೌನ್ ಸಮಯದಲ್ಲಿ ಈ ವ್ಯವಹಾರವನ್ನು ಪ್ರಾರಂಭಿಸಬೇಕಾಯಿತು” ಎಂದು 26 ವರ್ಷದ ಕ್ರೀಡಾಪಟು ಹೇಳಿದ್ದಾರೆ.

ಇದನ್ನೂ ಓದಿ: ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

“ಈ ಆಟದಲ್ಲಿ, ಕ್ರೀಡಾಪಟುಗಳೇ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಪ್ರತಿ ಪಂದ್ಯಾವಳಿಗಾಗಿ ಪ್ರಯಾಣ ವೆಚ್ಚ ತಾವೇ ಭರಿಸಬೇಕಾಗುತ್ತದೆ, ಇದಕ್ಕೆ ಸಾಕಷ್ಟು ಹಣ ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

5ನೇ ತರಗತಿಯಿಂದಲೇ ಕರಾಟೆ ಕಲಿಯಲು ಪ್ರಾರಂಭಿಸಿ, ರಾಜ್ಯಕ್ಕಾಗಿ ಹಲವಾರು ಪದಕಗಳನ್ನು ತಂದಿರುವ ಈ  ಜಾರ್ಖಂಡ್ ಯುವತಿ, ತನ್ನ ಬಳಿ ಹಲವಾರು ಪದಕಗಳು ಇವೆ. ಆದರೆ ಅವುಗಳನ್ನು ಸುರಕ್ಷಿತವಾಗಿಡಲು ಮನೆಯಲ್ಲಿ ಸರಿಯಾದ ಸ್ಥಳವಿಲ್ಲ ಹಾಗಾಗಿ ಅವುಗಳಲ್ಲಿ ಹೆಚ್ಚಿನವು ಮುರಿದುಹೋಗಿವೆ. ಕೆಲವೊಂದು ಬಣ್ಣ ಕಳೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಮಲಾ ಮುಂಡಾ ಅವರ ತಾಯಿ  ದಿನಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ವೃದ್ಧಾಪ್ಯ ಮತ್ತು ಅನಾರೋಗ್ಯದ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

“2011 ರಲ್ಲಿ ಜಾರ್ಖಂಡ್‌ನಲ್ಲಿ ಆಯೋಜಿಸಿದ್ದ 34 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಾನು ಬೆಳ್ಳಿ ಪದಕ ಗೆದ್ದಿದ್ದೇನೆ. 2014 ರಲ್ಲಿ ಅಕ್ಷಯ್ ಕುಮಾರ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಾನು ಎರಡು ಚಿನ್ನದ ಪದಕಗಳನ್ನು ಕೂಡ ಪಡೆದಿದ್ದೇನೆ” ಎಂದು ವಿಮಲಾ ಮುಂಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ರಾಜ್ಯ ಸರ್ಕಾರದಿಂದ ಸ್ವಲ್ಪ ವಿದ್ಯಾರ್ಥಿವೇತನ ಅಥವಾ ಉದ್ಯೋಗ ಸಿಗುವ ಮುಂಡಾ ಅವರ ನಿರೀಕ್ಷೆ ಹುಸಿಯಾಗಿದೆ. ಬೇರೆ ದಾರಿಯಿಲ್ಲದ ಕಾರಣ, ಆಕೆ ತನ್ನ ತಾಯಿಯೊಂದಿಗೆ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ.

ಪದಕಗಳು ಮತ್ತು ಪ್ರಮಾಣಪತ್ರಗಳ ರಾಶಿಯನ್ನು ಕಂಡಾಗ ಮೊದಲು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಈಕೆ ಈಗ ಸಮಯ ಮತ್ತು ಕಠಿಣ ವಾಸ್ತವತೆ ತನ್ನನ್ನು ಬದಲಾಯಿಸಿದೆ ಎನ್ನುತ್ತಾರೆ.

ಮುಂಡಾ ಅವರು ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಬಯಸುವುದಿಲ್ಲ. ಆದರೆ 2019 ರಲ್ಲಿ ರಾಜ್ಯಕ್ಕೆ ಪದಕಗಳನ್ನು ಗೆದ್ದ 264 ಕ್ರೀಡಾಪಟುಗಳಲ್ಲಿ 33 ಜನರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಆಯ್ಕೆ ಮಾಡಲಾಗಿದೆ . ಅದರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು ಎಂದು ಬಯಸುತ್ತಾರೆ.

“ಹಿಂದಿನ ಸರ್ಕಾರವು ಪದಕಗಳನ್ನು ಪಡೆದ ಕ್ರೀಡಾಪಟುಗಳ ನೇರ ನೇಮಕಾತಿಯನ್ನು ಘೋಷಿಸಿದ ನಂತರ ನಾವು ಭರವಸೆ ಹೊಂದಿದ್ದೇವು. ಆದರೆ ಇಂದಿನ ಸರ್ಕಾರವು ಈ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಆ ಭರವಸೆಯು ದಿನ ಕಳೆದಂತೆ ಕಡಿಮೆಯಾಯಿತು” ಎಂದರು.

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ಆದೇಶಿಸಿದ್ದಾರೆ.

ರಾಂಚಿ ಜಿಲ್ಲಾಧಿಕಾರಿಗಳಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸೊರೆನ್, ಇದನ್ನು ತಕ್ಷಣ ಗಮನಿಸಿ, ಕ್ರೀಡಾ ಕಾರ್ಯದರ್ಶಿಯೊಂದಿಗೆ ಮಾತಾನಾಡಿ ಸಹೋದರಿ ವಿಮಲಾಗೆ ಸಹಾಯ ಮಾಡಿ ಎಂದಿದ್ದಾರೆ. ಜೊತೆಗೆ ಮುಂಬರುವ ಕ್ರೀಡಾ ನೀತಿಯ ಅನುಷ್ಠಾನದ ನಂತರ ಆಟಗಾರರ ಭವಿಷ್ಯವು ಸುಧಾರಿಸುತ್ತದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...