Homeಸಿನಿಮಾಕ್ರೀಡೆಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ರಾಂಚಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

- Advertisement -
- Advertisement -

ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕ್ರೀಡೆ ಎಂದರೇ ಕ್ರಿಕೆಟ್ ಎನ್ನುವಂತಾಗಿದೆ. ಬೇರೆ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಸಿಗುತ್ತಿರುವ ಮಾನ್ಯತೆ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಜಾರ್ಖಾಂಡ್‌ನ ಈ ಕರಾಟೆ ಚಾಂಪಿಯನ್ ಬಡತನದಿಂದಾಗಿ ಮದ್ಯ ಮಾರಬೇಕಾದ ಪರಿಸ್ಥಿತಿ ತಲುಪಿದ್ದಾರೆ.

34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಸೇರಿದಂತೆ, ಜಾರ್ಖಂಡ್ ರಾಜ್ಯಕ್ಕಾಗಿ ಡಜನ್‌ಗಟ್ಟಲೇ ಪದಕಗಳನ್ನು ಬಾಚಿಕೊಂಡಿದ್ದ ರಾಷ್ಟ್ರೀಯ ಕರಾಟೆ ಚಾಂಪಿಯನ್ ವಿಮಲಾ ಮುಂಡಾ, ಜೀವನೋಪಾಯಕ್ಕಾಗಿ ‘ಹಾಂಡಿಯಾ’ (ಅಕ್ಕಿಯಿಂದ ತಯಾರಿಸುವ ಮದ್ಯ) ಮಾರಾಟ ಮಾಡುವ ಸ್ಥಿತಿಗೆ ಬಂದಿದ್ದಾರೆ.

“ಕೆಟ್ಟ ಆರ್ಥಿಕ ಪರಿಸ್ಥಿತಿಗಳಿಂದಾಗಿ, ನನ್ನ ಕುಟುಂಬದ ತೀವ್ರ ಬಡತನಕ್ಕೆ ದೂಡಿದೆ. ಕುಟುಂಬದ ಜೀವನೋಪಾಯಕ್ಕಾಗಿ ಜೊತೆಗೆ ನನ್ನ ಕರಾಟೆ ಅಭ್ಯಾಸವನ್ನು ಮುಂದುವರೆಸಲು ಲಾಕ್‌ಡೌನ್ ಸಮಯದಲ್ಲಿ ಈ ವ್ಯವಹಾರವನ್ನು ಪ್ರಾರಂಭಿಸಬೇಕಾಯಿತು” ಎಂದು 26 ವರ್ಷದ ಕ್ರೀಡಾಪಟು ಹೇಳಿದ್ದಾರೆ.

ಇದನ್ನೂ ಓದಿ: ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

“ಈ ಆಟದಲ್ಲಿ, ಕ್ರೀಡಾಪಟುಗಳೇ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಪ್ರತಿ ಪಂದ್ಯಾವಳಿಗಾಗಿ ಪ್ರಯಾಣ ವೆಚ್ಚ ತಾವೇ ಭರಿಸಬೇಕಾಗುತ್ತದೆ, ಇದಕ್ಕೆ ಸಾಕಷ್ಟು ಹಣ ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

5ನೇ ತರಗತಿಯಿಂದಲೇ ಕರಾಟೆ ಕಲಿಯಲು ಪ್ರಾರಂಭಿಸಿ, ರಾಜ್ಯಕ್ಕಾಗಿ ಹಲವಾರು ಪದಕಗಳನ್ನು ತಂದಿರುವ ಈ  ಜಾರ್ಖಂಡ್ ಯುವತಿ, ತನ್ನ ಬಳಿ ಹಲವಾರು ಪದಕಗಳು ಇವೆ. ಆದರೆ ಅವುಗಳನ್ನು ಸುರಕ್ಷಿತವಾಗಿಡಲು ಮನೆಯಲ್ಲಿ ಸರಿಯಾದ ಸ್ಥಳವಿಲ್ಲ ಹಾಗಾಗಿ ಅವುಗಳಲ್ಲಿ ಹೆಚ್ಚಿನವು ಮುರಿದುಹೋಗಿವೆ. ಕೆಲವೊಂದು ಬಣ್ಣ ಕಳೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಮಲಾ ಮುಂಡಾ ಅವರ ತಾಯಿ  ದಿನಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ವೃದ್ಧಾಪ್ಯ ಮತ್ತು ಅನಾರೋಗ್ಯದ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

“2011 ರಲ್ಲಿ ಜಾರ್ಖಂಡ್‌ನಲ್ಲಿ ಆಯೋಜಿಸಿದ್ದ 34 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಾನು ಬೆಳ್ಳಿ ಪದಕ ಗೆದ್ದಿದ್ದೇನೆ. 2014 ರಲ್ಲಿ ಅಕ್ಷಯ್ ಕುಮಾರ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಾನು ಎರಡು ಚಿನ್ನದ ಪದಕಗಳನ್ನು ಕೂಡ ಪಡೆದಿದ್ದೇನೆ” ಎಂದು ವಿಮಲಾ ಮುಂಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ರಾಜ್ಯ ಸರ್ಕಾರದಿಂದ ಸ್ವಲ್ಪ ವಿದ್ಯಾರ್ಥಿವೇತನ ಅಥವಾ ಉದ್ಯೋಗ ಸಿಗುವ ಮುಂಡಾ ಅವರ ನಿರೀಕ್ಷೆ ಹುಸಿಯಾಗಿದೆ. ಬೇರೆ ದಾರಿಯಿಲ್ಲದ ಕಾರಣ, ಆಕೆ ತನ್ನ ತಾಯಿಯೊಂದಿಗೆ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ.

ಪದಕಗಳು ಮತ್ತು ಪ್ರಮಾಣಪತ್ರಗಳ ರಾಶಿಯನ್ನು ಕಂಡಾಗ ಮೊದಲು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಈಕೆ ಈಗ ಸಮಯ ಮತ್ತು ಕಠಿಣ ವಾಸ್ತವತೆ ತನ್ನನ್ನು ಬದಲಾಯಿಸಿದೆ ಎನ್ನುತ್ತಾರೆ.

ಮುಂಡಾ ಅವರು ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಬಯಸುವುದಿಲ್ಲ. ಆದರೆ 2019 ರಲ್ಲಿ ರಾಜ್ಯಕ್ಕೆ ಪದಕಗಳನ್ನು ಗೆದ್ದ 264 ಕ್ರೀಡಾಪಟುಗಳಲ್ಲಿ 33 ಜನರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಆಯ್ಕೆ ಮಾಡಲಾಗಿದೆ . ಅದರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು ಎಂದು ಬಯಸುತ್ತಾರೆ.

“ಹಿಂದಿನ ಸರ್ಕಾರವು ಪದಕಗಳನ್ನು ಪಡೆದ ಕ್ರೀಡಾಪಟುಗಳ ನೇರ ನೇಮಕಾತಿಯನ್ನು ಘೋಷಿಸಿದ ನಂತರ ನಾವು ಭರವಸೆ ಹೊಂದಿದ್ದೇವು. ಆದರೆ ಇಂದಿನ ಸರ್ಕಾರವು ಈ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಆ ಭರವಸೆಯು ದಿನ ಕಳೆದಂತೆ ಕಡಿಮೆಯಾಯಿತು” ಎಂದರು.

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ಆದೇಶಿಸಿದ್ದಾರೆ.

ರಾಂಚಿ ಜಿಲ್ಲಾಧಿಕಾರಿಗಳಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸೊರೆನ್, ಇದನ್ನು ತಕ್ಷಣ ಗಮನಿಸಿ, ಕ್ರೀಡಾ ಕಾರ್ಯದರ್ಶಿಯೊಂದಿಗೆ ಮಾತಾನಾಡಿ ಸಹೋದರಿ ವಿಮಲಾಗೆ ಸಹಾಯ ಮಾಡಿ ಎಂದಿದ್ದಾರೆ. ಜೊತೆಗೆ ಮುಂಬರುವ ಕ್ರೀಡಾ ನೀತಿಯ ಅನುಷ್ಠಾನದ ನಂತರ ಆಟಗಾರರ ಭವಿಷ್ಯವು ಸುಧಾರಿಸುತ್ತದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...